ಪಠಾಣ್ ಕೋಟ್ ದಾಳಿ : ಪಾಕಿಸ್ತಾನದಿಂದ ಮಾಹಿತಿ ಬೇಕಾಗಿದೆ
ಬೆಂಗಳೂರು, ಜನವರಿ 07 : ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ತನಿಖೆ ನಡೆಸುತ್ತಿರುವ ಎನ್ಐಎ, ಪ್ರಾಥಮಿಕ ತನಿಖಾ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ಸಲ್ಲಿಕೆ ಮಾಡಿದೆ. ಉಗ್ರರ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲು ಪಾಕಿಸ್ತಾನದ ನೆರವು ಬೇಕಾಗಿದೆ ಎಂದು ವರದಿಯಲ್ಲಿ ಹೇಳಿದೆ.
ಬುಧವಾರ ಎನ್ಐಎ ಭಾರತ-ಪಾಕಿಸ್ತಾನ ಗಡಿ ಪ್ರದೇಶದಕ್ಕೆ ಭೇಟಿ ನೀಡಿತ್ತು. ಉಗ್ರರು ಭಾರತಕ್ಕೆ ಬರಲು ಬಳಸಿದ ಮಾರ್ಗದ ಬಗ್ಗೆ ತನಿಖೆ ನಡೆಸಿತ್ತು. ಈ ಭೇಟಿಯ ಬಳಿಕ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸಿ ಗೃಹ ಇಲಾಖೆಗೆ ಸಲ್ಲಿಕೆ ಮಾಡಿದೆ. [ಸಂದರ್ಶನ : ಪಠಾಣ್ ಕೋಟ್ ದಾಳಿ ಬಗ್ಗೆ ದೂರುವುದು ಬಿಡಿ]

ಪಾಕಿಸ್ತಾನದಿಂದಲೇ ಬಂದಿದ್ದಾರೆ : ಕೇಂದ್ರ ಗೃಹ ಇಲಾಖೆ ವಾಯುನೆಲೆ ಮೇಲಿನ ದಾಳಿಯ ತನಿಖೆ ನಡೆಸುವಂತೆ ಎನ್ಐಎಗೆ ಸೂಚನೆ ನೀಡಿತ್ತು. ಆದ್ದರಿಂದ, ಎನ್ಐಎ ತನ್ನ ಪ್ರಾಥಮಿಕ ವರದಿಯನ್ನು ಇಲಾಖೆಗೆ ಸಲ್ಲಿಕೆ ಮಾಡಿದ್ದು, ವಾಯುನೆಲೆ ಮೇಲೆ ದಾಳಿ ಮಾಡಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂದು ಹೇಳಿದೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ವಾಯುನೆಲೆ ಮೇಲಿನ ದಾಳಿಗೂ ಮೊದಲು ಉಗ್ರರು ಪಾಕಿಸ್ತಾನದಲ್ಲಿರುವವರ ಜೊತೆ ಮಾತನಾಡಿರುವುದು ಪತ್ತೆಯಾಗಿದೆ. ಉಗ್ರರ ಬಗ್ಗೆ ಮಾಹಿತಿ ನೀಡುವಂತೆ ಪಾಕಿಸ್ತಾನಕ್ಕೆ ಪತ್ರ ಬರೆಯಬೇಕು ಎಂದು ಎನ್ಐಎ ತನ್ನ ವರದಿಯಲ್ಲಿ ಗೃಹ ಇಲಾಖೆಗೆ ಮನವಿ ಮಾಡಿದೆ.
ಉಗ್ರರ ಧ್ವನಿ ಮತ್ತು ಡಿಎನ್ಎ ಪರೀಕ್ಷೆಗೆ ಪಾಕಿಸ್ತಾನದ ನೆರವಿನ ಅಗತ್ಯವಿದೆ. ದಾಳಿಗೂ ಮುನ್ನ ಉಗ್ರರು ಪಾಕಿಸ್ತಾನಕ್ಕೆ ಮಾಡಿದ ಕರೆಗಳ ವಿವರಗಳನ್ನು ಸಂಗ್ರಹಿಸಲಾಗಿದೆ. ಕುಟುಂಬದವರೊಟ್ಟಿಗೆ ಉಗ್ರರು ಮಾತನಾಡಿರುವುದು ತನಿಖೆಯಿಂದ ಬಹಿರಂಗಗೊಂಡಿದೆ ಎಂದು ವರದಿಯಲ್ಲಿ ತಿಳಿಸಿದೆ.
ಮಹಿಳೆಯ ಬಗ್ಗೆ ಮಾಹಿತಿ ಕೊಡಿ : ಉಗ್ರನೊಬ್ಬ ಭಾರತದಿಂದ ಪಾಕಿಸ್ತಾನದಲ್ಲಿರುವ ಮಹಿಳೆಗೆ ಕರೆ ಮಾಡಿ ಮಾತನಾಡಿದ್ದಾನೆ. ದಾಳಿಗೂ ಮುನ್ನ ಕರೆ ಮಾಡಿದ್ದ ಉಗ್ರ ತಾನು ಆತ್ಮಹತ್ಯಾ ದಾಳಿಯಲ್ಲಿ ಸಾವನ್ನಪ್ಪುತ್ತೇನೆ ಎಂದು ಮಹಿಳೆಗೆ ಹೇಳಿರುವ ಕರೆಯ ಮಾಹಿತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಸಂಗ್ರಹ ಮಾಡಿದೆ. ಈ ಮಹಿಳೆ ಬಗ್ಗೆ ವಿವರ ನೀಡುವಂತೆ ಪಾಕ್ಗೆ ಮನವಿ ಮಾಡಲಾಗುತ್ತದೆ.
ಉಗ್ರರು ಅಪಹರಿಸಿದ್ದ ಗುರುದಾಸ್ಪುರ ಎಸ್ಪಿ ಸಲ್ವಿಂದರ್ ಸಿಂಗ್ ಅವರನ್ನು ತನಿಖೆಯ ವೇಳೆ ಸಾಕ್ಷಿಯಾಗಿ ಪರಿಗಣನೆ ಮಾಡಲಾಗಿದೆ. ಉಗ್ರರು ಅಪಹರಣ ಮಾಡಿದ್ದ ಎಸ್ಪಿ ಕಾರನ್ನು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ಸಂಗ್ರಹಣೆ ಮಾಡಬೇಕಾಗಿದೆ ಎಂದು ವರದಿ ಹೇಳಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications