ಪಠಾಣ್ ಕೋಟ್ ದಾಳಿ : ಸಲ್ವಿಂದರ್ ಸಿಂಗ್ ಆರೋಪಿ?
ಬೆಂಗಳೂರು, ಜನವರಿ 12 : ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ಪ್ರಕರಣದಲ್ಲಿ ಗುರುದಾಸ್ಪುರ ಎಸ್ಪಿ ಸಲ್ವಿಂದರ್ ಸಿಂಗ್ ಅವರು ಆರೋಪಿಯಾಗುವ ಸಾಧ್ಯತೆ ಇದೆ. ಈ ಕುರಿತು ರಾಷ್ಟ್ರೀಯ ತನಿಖಾ ದಳ ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ ನಡೆಸಿದೆ.
ಉಗ್ರರು ತಮ್ಮನ್ನು ಅಪಹರಣ ಮಾಡಿದ ಬಗ್ಗೆ ಸಲ್ವಿಂದರ್ ಸಿಂಗ್ ನೀಡಿರುವ ಹೇಳಿಕೆಗಳು ಎನ್ಐಎಗೆ ತೃಪ್ತಿ ತಂದಿಲ್ಲ. ಸಿಂಗ್ ಹೇಳಿಕೆಯಲ್ಲಿ ಇನ್ನೂ ಹಲವಾರು ಗೊಂದಲಗಳಿವೆ. ಸೋಮವಾರವೂ ಎನ್ಐಎ ಸಿಂಗ್ ಅವರನ್ನು 2ನೇ ಬಾರಿ ವಿಚಾರಣೆ ನಡೆಸಿ, ಮಾಹಿತಿ ಸಂಗ್ರಹಣೆ ಮಾಡಿದೆ. [ಪಠಾಣ್ ಕೋಟ್ ದಾಳಿ : ಶಾಂತಿ ಮಾತುಕತೆ ರದ್ದು]

ಡಿಸೆಂಬರ್ 31ರಂದು ಅಡುಗೆ ಸಹಾಯಕ ಮದನ್ ಗೋಪಾಲ್ ಮತ್ತು ಸ್ನೇಹಿತ ರಾಜೇಶ್ ವರ್ಮಾ ಜೊತೆಗಿದ್ದಾಗ ನಾಲ್ವರು ಉಗ್ರರು ಸಿಂಗ್ ಅವರನ್ನು ಅಪಹರಣ ಮಾಡಿದ್ದರು. ನಂತರ ಎಲ್ಲರನ್ನು ಕಾಡಿನಲ್ಲಿ ಬಿಟ್ಟು, ಕಾರಿನೊಂದಿಗೆ ಪರಾರಿಯಾಗಿ ವಾಯುನೆಲೆ ತಲುಪಿದ್ದರು. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಎನ್ಐಎ ಮದನ್ ಗೋಪಾಲ್ ಅವರಿಗೆ ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ್ದು, ಅವರ ವಿಚಾರಣೆ ಬಳಿಕ ಸಿಂಗ್ ನೀಡಿರುವ ಹೇಳಿಕೆಗಳ ಬಗ್ಗೆ ನಿಖರವಾದ ಮಾಹಿತಿ ದೊರೆಯಲಿದೆ. ಸಿಂಗ್ ಅವರನ್ನು ಆರೋಪಿಯನ್ನಾಗಿ ಮಾಡಬೇಕೆ? ಅಥವ ಪ್ರತ್ಯಕ್ಷ ಸಾಕ್ಷಿಯಾಗಿ ಪರಿಗಣಿಸಬೇಕೆ? ಎಂದು ಎನ್ಐಎ ಚಿಂತನೆ ನಡೆಸುತ್ತಿದೆ. [ಎಸ್ಪಿ ಸಲ್ವಿಂದರ್ ಸಿಂಗ್ ಉತ್ತರಿಸಬೇಕಾದ ಮೂರು ಪ್ರಶ್ನೆಗಳು]
ಸೋಮವಾರ ಬೆಳಗ್ಗೆ 10.45ಕ್ಕೆ ಸಿಂಗ್ ದೆಹಲಿಯಲ್ಲಿರುವ ಎನ್ಐಎ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು, ಮಧ್ಯರಾತ್ರಿಯಲ್ಲಿ ಸಿಂಗ್ ಭಾರತ-ಪಾಕ್ ಗಡಿಯ ಸಮೀಪ ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ. ತಾವು ದೇವಾಲಯಕ್ಕೆ ಹೋಗಿದ್ದಾಗಿ ಸಿಂಗ್ ಹೇಳಿದ್ದಾರೆ.
ಭಾರತ-ಪಾಕ್ ಗಡಿಯ ಸಮೀಪ ಸಿಂಗ್ ಸುಮಾರು 90 ನಿಮಿಷ ಕಳೆದಿದ್ದರು ಎಂದು ವಿಚಾರಣೆ ವೇಳೆ ಅವರು ಎನ್ಐಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜಲಂಧರ್ಗೆ ವರ್ಗಾವಣೆಗೊಂಡಿದ್ದರೂ ಸಿಂಗ್ ಅವರು ಗುರುದಾಸ್ಪುರದಲ್ಲಿ ಏನು ಮಾಡುತ್ತಿದ್ದರು? ಎಂದು ಅಧಿಕಾರಿಗಳು ಪ್ರಶ್ನಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications