ಪಠಾಣ್ ಕೋಟ್ ದಾಳಿ : ಪಾಕಿಸ್ತಾನದಲ್ಲಿ ಎಫ್ಐಆರ್ ದಾಖಲು
ನವದೆಹಲಿ, ಫೆಬ್ರವರಿ 20 : ಪಂಜಾಬಿನ ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಎಫ್ಐಆರ್ ದಾಖಲು ಮಾಡಿದೆ. ಆದರೆ, ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಮೌಲಾನ ಮಸೂದ್ ಅಜರ್ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಿಲ್ಲ.
ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ತನಿಖೆ ನಡೆಸುತ್ತಿರುವ ಆರು ಸದಸ್ಯರ ತನಿಖಾ ತಂಡ ಅನಾಮಿಕ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಅವರ ಜೊತೆ ಸಂಪರ್ಕದಲ್ಲಿರುವ ತನಿಖಾಧಿಕಾರಿಗಳು ಅಜರ್ ಅವರನ್ನು ವಿಚಾರಣೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]

'ದಾಳಿಯ ತನಿಖೆ ನಡೆಸುತ್ತಿರುವ ತಂಡ ಮಾರ್ಚ್ನಲ್ಲಿ ಭಾರತಕ್ಕೆ ಆಗಮಿಸಲಿದ್ದು, ಪಠಾಣ್ ಕೋಟ್ಗೆ ಭೇಟಿ ನೀಡಿ, ರಾಷ್ಟ್ರೀಯ ತನಿಖಾ ದಳದ (ಎಸ್ಐಎ) ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ' ಎಂದು ಅಜಿತ್ ಡೋವಲ್ ಹೇಳಿದ್ದಾರೆ. [ಪಾಕ್ ತನಿಖಾ ತಂಡ ಪಠಾಣ್ ಕೋಟ್ ಪ್ರವೇಶಿಸುವಂತಿಲ್ಲ]
ಪಠಾಣ್ ಕೋಟ್ ದಾಳಿಗೆ ಸಂಬಂಧಿಸಿದಂತೆ 20ಕ್ಕೂ ಅಧಿಕ ಜನರನ್ನು ಪಾಕಿಸ್ತಾನ ವಿಚಾರಣೆ ನಡೆಸಿದೆ. ಕೊಲೆ, ಕೊಲೆಯತ್ನ, ಭಯೋತ್ಪಾದಕ ಚಟುವಟಿಕೆ ನಡೆಸಿದ ಆರೋಪಗಳನ್ನು ಎಫ್ಐಆರ್ನಲ್ಲಿ ಮಾಡಲಾಗಿದೆ. ಪಾಕಿಸ್ತಾನದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಡೋವಲ್ ತಿಳಿಸಿದ್ದಾರೆ. [ಪಠಾಣ್ ಕೋಟ್ ವಾಯುನೆಲೆ ವಿಶೇಷತೆಗಳೇನು?]
ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಮೌಲಾನ ಮಸೂದ್ ಅಜರ್ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಲು ಇನ್ನೂ ಸಾಕ್ಷಿ ಮತ್ತು ತನಿಖೆಯ ಅಗತ್ಯವಿದೆ ಎಂದು ಪಾಕ್ ಹೇಳಿದೆ. ವಾಯುನೆಲೆಗೆ ನುಗ್ಗಿದ ಉಗ್ರರು ಕರೆ ಮಾಡಿರುವ ನಂಬರ್ಗಳನ್ನು ಭಾರತ ಪಾಕ್ಗೆ ಕಳುಹಿಸಿತ್ತು. ಈ ನಂಬರ್ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಪಂಜಾಬ್ನ ಪಠಾಣ್ ಕೋಟ್ ವಾಯುನೆಲೆ ಭಾರತ ಮತ್ತು ಪಾಕಿಸ್ತಾನದ ಗಡಿಭಾಗದಿಂದ ಕೇವಲ 40 ಕಿ.ಮೀ.ದೂರದಲ್ಲಿದೆ. ಇದು ದೇಶದ ಮಹತ್ವದ ಸೇನಾ ನೆಲೆಯಾಗಿದೆ. ಜನವರಿ ಮೊದಲ ವಾರದಲ್ಲಿ ಈ ವಾಯುನೆಲೆಗೆ ನುಗ್ಗಿದ್ದ ಉಗ್ರರನ್ನು ಯೋಧರು ಹತ್ಯೆ ಮಾಡಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications