ಪಠಾಣ್ ಕೋಟ್ನಲ್ಲಿ ಪಾಕ್ ತಂಡ : ಎಲ್ಲಿಗೆ ಭೇಟಿ ಕೊಡಲು ಅನುಮತಿ?
ಬೆಂಗಳೂರು, ಮಾರ್ಚ್ 29 : ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಯ ತನಿಖೆ ನಡೆಸಲು ಪಾಕಿಸ್ತಾನದ ತಂಡ ವಾಯುನೆಲೆಗೆ ಆಗಮಿಸಿದೆ. ಐವರು ಸದಸ್ಯರ ಪಾಕಿಸ್ತಾನದ ತನಿಖಾ ತಂಡ (ಜೆಐಟಿ)ಕ್ಕೆ ವಾಯುನೆಲೆ ಪ್ರವೇಶಿಸಲು ಬಿಡಬಾರದು ಎಂದು ಪಂಜಾಬ್ನಲ್ಲಿ ಪ್ರತಿಭಟನೆ ನಡೆಯುತ್ತಿದೆ.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಮತ್ತು ಪಾಕ್ನ ಜೆಐಟಿ ತಂಡದ ಸದಸ್ಯರು ಅಮೃತಸರ ವಿಮಾನ ನಿಲ್ದಾಣದಿಂದ ಗುಂಡು ನಿರೋಧಕ ವಾಹನದಲ್ಲಿ ಪಠಾಣ್ ಕೋಟ್ ವಾಯುನೆಲೆಗೆ ಆಗಮಿಸಿದ್ದಾರೆ. ವಾಯುನೆಲೆಯ ಕೆಲವು ಪ್ರದೇಶಗಳಿಗೆ ಮಾತ್ರ ಪಾಕ್ ತಂಡ ಭೇಟಿ ನೀಡಬಹುದಾಗಿದೆ. [ಪಠಾಣ್ ಕೋಟ್ ದಾಳಿ : ಉಗ್ರರ ಚಿತ್ರ ಬಿಡುಗಡೆ]
ಎನ್ಐಎ ಅಧಿಕಾರಿಗಳು ಪಾಕ್ ತಂಡ ವಾಯುನೆಲೆಯ ಯಾವ ಪ್ರದೇಶದ ಪರಿಶೀಲನೆ ನಡೆಸಬೇಕು, ಎಲ್ಲಿಗೆ ಪ್ರವೇಶಿಸಬಾರದು ಎಂಬ ಪಟ್ಟಿ ಸಿದ್ಧಪಡಿಸಿದೆ. ಅದರ ವಿವರಗಳು ಇಲ್ಲಿವೆ. [ಪಠಾಣ್ ಕೋಟ್ ದಾಳಿ : ತನಿಖೆಗೆ ಬಂತು ಪಾಕ್ ತಂಡ]
* ಉಗ್ರರು ವಾಯುನೆಲೆ ಪ್ರವೇಶಿಸಲು ಬಳಸಿದ ಕಾಪೌಂಡ್ ಗೋಡೆ ಪರಿಶೀಲನೆಗೆ ಅವಕಾಶವಿದೆ.

* ಉಗ್ರರ ದಾಳಿಗೆ ಒಳಗಾಗದ ವಾಯುನೆಲೆ ಪ್ರದೇಶಕ್ಕೆ ಪಾಕ್ ತಂಡ ಕಾಲಿಡುವಂತಿಲ್ಲ. ಪಾಕ್ ತಂಡ ಭೇಟಿ ನೀಡುವ ಜಾಗ ಹೊರತು ಪಡಿಸಿ ಉಳಿದ ಸ್ಥಳಗಳಲ್ಲಿ ಕೆಂಪು, ಬಿಳಿ ಬಟ್ಟೆಗಳಿಂದ ಮುಚ್ಚಲಾಗಿದೆ. [ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?]
* ವಾಯುನೆಲೆ ಮೇಲೆ ದಾಳಿ ಮಾಡಿದ ಉಗ್ರರು ಉಳಿದುಕೊಂಡಿದ್ದ ಕಟ್ಟಡ ಪರಿಶೀಲನೆ ನಡೆಸಬಹುದು.
* ರಕ್ಷಣಾ ಇಲಾಖೆಯ ಅಧಿಕಾರಿಗಳು ವಾಸ್ತವ್ಯ ಹೂಡಿದ ಕಟ್ಟಡದ ಪರಿಶೀಲನೆ ನಡೆಸಬಹುದು. ಅದರ ಮೇಲೆ ಉಗ್ರರು ದಾಳಿ ನಡೆಸಿದ್ದರು.
* ವಾಯುನೆಲೆ ಪ್ರವೇಶಕ್ಕೂ ಮುನ್ನಾ ಟ್ಯಾಕ್ಸಿ ಚಾಲಕ ಇಕಾಗರ್ ಸಿಂಗ್ ನನ್ನು ಉಗ್ರರು ಹತ್ಯೆ ಮಾಡಿದ್ದರು. ಆ ಸ್ಥಳಕ್ಕೆ ಭೇಟಿ ನೀಡಬಹುದು. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
* ಗುರುದಾಸ್ ಪುರ ಎಸ್ಪಿ ಸಲ್ವಿಂದರ್ ಸಿಂಗ್ ಅಪಹರಣವಾದ ಜಾಗಕ್ಕೆ ಭೇಟಿ ಕೊಡಬಹುದು.
* ಉಗ್ರರ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎನ್ಎಸ್ಜಿ, ಬಿಎಸ್ಎಫ್, ಎಎಫ್ ಸಿಬ್ಬಂದಿಯನ್ನು ಪ್ರಶ್ನೆ ಮಾಡುವಂತಿಲ್ಲ.
* ಎಸ್ಪಿ ಸಲ್ವಿಂದರ್ ಸಿಂಗ್, ಅವರ ಸ್ನೇಹಿತ ರಾಜೇಶ್ ವರ್ಮಾ, ಅಡುಗೆ ಸಹಾಯಕ ಮದನ್ ಗೋಪಾಲ್ ವಿಚಾರಣೆಗೆ ಅವಕಾಶವಿದೆ. ಉಗ್ರರ ದಾಳಿಯಲ್ಲಿ ಗಾಯಗೊಂಡ 17 ಜನರನ್ನು ಪ್ರಶ್ನಿಸಲು ಅವಕಾಶ ನೀಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications