ಶಂಕಾಸ್ಪದ ಬ್ಯಾಗ್ ಪತ್ತೆ, ಪಠಾಣ್ಕೋಟ್ ನಲ್ಲಿ ಹೈಅಲರ್ಟ್
ಪಠಾಣ್ ಕೋಟ್ (ಪಂಜಾಬ್), ಮೇ 29 : ಸೈನಿಕರ ಸಮವಸ್ತ್ರವಿರುವ ಬ್ಯಾಗ್ ದೊರೆತಿರುವ ಹಿನ್ನೆಲೆಯಲ್ಲಿ ಪಠಾಣ್ ಕೋಟ್ ನಲ್ಲಿ ಸೋಮವಾರ ಹೈ ಅಲರ್ಟ್ ಘೋಷಿಸಲಾಗಿದೆ. ಕಳೆದ ರಾತ್ರಿ ಮಾಮುನ್ ಮಿಲಿಟರಿ ಸ್ಟೇಷನ್ ಬಳಿ ಈ ಬ್ಯಾಗ್ ದೊರೆತಿದೆ.
ಕೂಡಲೆ ಕಾರ್ಯತತ್ಪರರಾಗಿರುವ ಸೈನಿಕರು ಆ ಬ್ಯಾಗ್ ಯಾರಿಗೆ ಸೇರಿದ್ದು, ಅದರಲ್ಲಿ ಮತ್ತೇನಿದೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಂತಹ ಆತಂಕಕಾರಿ ಘಟನೆ ಅಲ್ಲದಿದ್ದರೂ, ಸೈನಿಕರು ಯಾವುದೇ ಚಾನ್ಸ್ ತೆಗೆದುಕೊಳ್ಳಲು ಸಿದ್ಧರಿಲ್ಲ.

ಕಳೆದ ವರ್ಷ ಜನವರಿ 2ರಂದು ಪಠಾಣ್ ಕೋಟ್ ನಲ್ಲಿ ಭಾರತೀಯ ಸೈನಿಕರ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ, ಉಗ್ರರು ಭಾರತದೊಳಗೆ ನುಸುಳಿ ಬಂದು ಭಾರತೀಯರ ಸೈನಿಕರ ಸಮವಸ್ತ್ರ ಧರಿಸಿ ದಾಳಿ ನಡೆಸಿದ್ದರು.
ಇಂಥದೇ ಘಟನೆಗಳು ಕಳೆದೆರಡು ತಿಂಗಳಲ್ಲಿ ಹಲವಾರು ಬಾರಿ ನಡೆದಿವೆ. ಹಿಂದೆಂದಿಗಿಂತಲೂ ಭಾರತದಲ್ಲಿ ನುಸುಳುವಿಕೆ ಹೆಚ್ಚಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಪಾಕಿಸ್ತಾನದಲ್ಲಿ ಬಂದಿರುವ ಈ ಉಗ್ರರು ಸೇನಾ ನೆಲೆಗಳ ಮೇಲೆ ಭಾರೀ ದಾಳಿ ನಡೆಸಬಹುದು ಎಂದೂ ಇಲಾಖೆ ಎಚ್ಚರಿಸಿದೆ.
2016ರ ಜನವರಿ 2ರಂದು ನಡೆದ ಘಟನೆ ಮತ್ತೆ ಮರುಕಳಿಸಬಾರದೆಂದು ಈ ಮುನ್ನೆಚ್ಚರಿಕೆಗಳನ್ನು ಸೇನೆ ತೆಗೆದುಕೊಂಡಿದೆ. ಅಂದು ನಡೆಸಲಾಗಿದ್ದ ಭೀಕರ ದಾಳಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದರು. ಆದರೆ, ಆ ದಾಳಿಯಲ್ಲಿ ಸೇನೆಯ ಏಳು ಸಿಬ್ಬಂದಿಗಳು ಕೂಡ ಹುತಾತ್ಮರಾಗಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications