ಬಿಜೆಪಿ ವಿರುದ್ಧ 1 ಕೋಟಿ ರು ಆಮಿಷದ ಆರೋಪ
ಅಹಮದಾಬಾದ್, ಅಕ್ಟೋಬರ್ 23: ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವುದಕ್ಕೂ ಮುನ್ನವೇ ರಾಜಕೀಯ ಪಕ್ಷಗಳ ಆರೋಪ, ಪ್ರತ್ಯಾರೋಪ, ಪಕ್ಷಾಂತರಗಳ ಪರ್ವ ಆರಂಭವಾಗಿದೆ. ಪಾಟೀದಾರ್ ಸಮುದಾಯದ ಪ್ರಮುಖ ನಾಯಕರೊಬ್ಬರು ಬಿಜೆಪಿ ವಿರುದ್ಧ ಆಮಿಷವೊಡ್ಡಿದ ಆರೋಪ ಮಾಡಿದ್ದಾರೆ.
ಪಟೇಲ್ ಸಮುದಾಯದ ಮುಖಂಡ ನರೇಂದ್ರ ಪಟೇಲ್ ಅವರಿಗೆ ಬಿ.ಜೆ.ಪಗೆ ಸೇರಲು 1 ಕೋಟಿ ರೂ. ಆಫರ್ ಮಾಡಲಾಗಿದ್ದು, ಟೋಕನ್ ಅಡ್ವಾನ್ಸ್ ಆಗಿ 10 ಲಕ್ಷ ರೂ. ಕೊಡಲಾಗಿದೆ ಎಂಬ ಸುದ್ದಿ ಬಂದಿದೆ. ಈ ರೀತಿ ಆಫರ್ ಬಂದಿದ್ದು ನಿಜ ಎಂದು ನರೇಂದ್ರ ಪಟೇಲ್ ಅವರು ಸ್ಪಷ್ಟಪಡಿಸಿದ್ದಾರೆ.
ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರ ಆಪ್ತ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಒಬ್ಬೊಬ್ಬರನ್ನೇ ಸೆಳೆಯುವ ಯತ್ನದಲ್ಲಿದೆ. ಉತ್ತರ ಗುಜರಾತ್ ನಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಸಂಚಾಲಕ ನರೇಂದ್ರ ಪಟೇಲ್ ಅವರಿಗೆ 10 ಲಕ್ಷ ರೂ. ಮುಂಗಡ ನೀಡಲಾಗಿದ್ದು, ಈ ಹಣವನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ್ದಾರೆ.

ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಆಪ್ತರಾದ ರೇಷ್ಮಾ ಪಟೇಲ್ ಮತ್ತು ವರುಣ್ ಪಟೇಲ್ ಅವರು ಬಿ.ಜೆ.ಪಿ. ಸೇರಿದ್ದು, ಅವರ ಮೂಲಕ ನರೇಂದ್ರ ಅವರಿಗೆ ಆಮಿಷವೊಡ್ಡಲಾಗಿದೆ ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿ.ಜೆ.ಪಿ. ವಕ್ತಾರ ಭರತ್ ಪಾಂಡ್ಯ, 'ನರೇಂದ್ರ ಪಟೇಲ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಬಿ.ಜೆ.ಪಿ. ಸೇರಿ ಕೆಲ ಹೊತ್ತಿನಲ್ಲೇ ಈ ರೀತಿ ಆರೋಪಿಸುತ್ತಿದ್ದಾರೆ. ಅವರು ಈ ರೀತಿ ಯೂ ಟರ್ನ್ ಹೊಡೆಯಲು ಕಾಂಗ್ರೆಸ್ ಕಾರಣ ಎಂದಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications