ಜನ ವಿರೋಧಿ ಚಟುವಟಿಕೆ ಆರೋಪ, ಬಿಜೆಡಿಯಿಂದ ಶಾಸಕ ಉಚ್ಚಾಟನೆ
ಭುವನೇಶ್ವರ, ನ.29: ಜನ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಬಿಜು ಜನತಾದಳ(ಬಿಜೆಡಿ)ಯಿಂದ ಶಾಸಕರೊಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಆಡಳಿತಾರೂಢ ಬಿಜೆಡಿಯ ಶಾಸಕ ಪ್ರದೀಪ್ ಪಾಣಿಗ್ರಾಹಿ ಮೇಲೆ ಇಂಥ ಆರೋಪ ಕೇಳಿ ಬಂದಿದ್ದು, ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವರಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಬಿಜೆಡಿ ವಕ್ತಾರರು ಹೇಳಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದವರನ್ನು ಪಕ್ಷದಿಂದ ಹೊರ ಹಾಕುವುದು ಸಾಮಾನ್ಯ. ಆದರೆ, ಇದೇ ಮೊದಲ ಬಾರಿಗೆ ಗೋಪಾಲ್ ಪುರ್ ಕ್ಷೇತ್ರದ ಶಾಸಕ ಪ್ರದೀಪ್ ಪ್ರಾಣಿಗ್ರಾಹಿ ಅವರನ್ನು ಜನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ಸಿಎಂ ನವೀನ್ ಪಟ್ನಾಯಕ್ ಅವರು ಉಚ್ಚಾಟನೆ ಮಾಡಿದ್ದಾರೆ.
ಮೂರು ಬಾರಿ ಶಾಸಕ ಹಾಗೂ ಮಾಜಿ ಸಚಿವ ಪ್ರದೀಪ್ ಪ್ರಾಣಿಗ್ರಾಹಿ ಅವರು ಈ ರೀತಿ ಪ್ರಾದೇಶಿಕ ಪಕ್ಷವೊಂದರಿಂದ ಜನ ವಿರೋಧಿಯೆಂದು ಉಚ್ಚಾಟನೆಗೊಳ್ಳುತ್ತಿರುವ ಮೊದಲ ನಾಯಕರೆನಿಸಿಕೊಂಡಿದ್ದಾರೆ. ಈ ಮುನ್ನ ಕೆಲ ಸದಸ್ಯರನ್ನು ಇದೇ ಆರೋಪದ ಮೇಲೆ ತೆಗೆದು ಹಾಕಲಾಗಿತ್ತು. ಇದೇ ಮೊದಲ ಬಾರಿಗೆ ಶಾಸಕರ ತಲೆದಂಡವಾಗಿದೆ ಎಂದು ಬಿಜೆಡಿ ಪ್ರಧಾನ ಕಾರ್ಯದರ್ಶಿ ಮನಸ್ ರಂಜನ್ ಮಂಗರಾಜ್ ಅವರು ಹೇಳಿದ್ದಾರೆ.

ಇತ್ತೀಚೆಗೆ ಅಮಾನತುಗೊಂಡ ಅರಣ್ಯ ಸೇವಾ ಅಧಿಕಾರಿ(IFS) ಅಭಯ್ ಕಾಂತ್ ಪಾಠಕ್ ಹಾಗೂ ಅವರ ಪುತ್ರ ಆಕಾಶ್ ಕುಮಾರ್ ಪಾಠಕ್ ಅವರ ಜೊತೆ ಭ್ರಷ್ಟಾಚಾರದಲ್ಲಿ ಶಾಸಕ ಪ್ರದೀಪ್ ತೊಡಗಿದ್ದರು ಎಂದು ಭ್ರಷ್ಟಾಚಾರ ನಿಗ್ರಹ ದಳ ಪುರಾವೆ ಒದಗಿಸಿತ್ತು. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಅಭಯ್ ಕಾಂತ್ ಹಾಗೂ ಆಕಾಶ್ ಕುಮಾರ್ ಇಬ್ಬರು ಸದ್ಯ ಜೈಲಿನಲ್ಲಿದ್ದಾರೆ.
ಗಂಜಾಂ ಜಿಲ್ಲೆಯಲ್ಲಿ ಉದ್ಯೋಗ ಕೊಡಿಸುವ ವಂಚನೆ ಪ್ರಕರಣದಲ್ಲಿ ಇವರಿಬ್ಬರಿಗೆ ಶಾಸಕ ಪ್ರದೀಪ್ ನೆರವಾಗಿದ್ದರು ಎಂಬುದು ಸಾಬೀತಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications