Tirumala Laddu: ಕಲಬೆರೆಕೆ ತುಪ್ಪ ಬಳಸಲಾಗಿಲ್ಲ ಎಂದ ಇಒ ಹೇಳಿಕೆಗೆ ಸ್ಪಷ್ಟನೆ ನೀಡಿದ ಪವನ್ ಕಲ್ಯಾಣ್
ಅತ್ಯಂತ ಶ್ರೀಮಂತ ದೇವರುಗಳಲ್ಲಿ ಒಂದಾದ ತಿರುಪತಿ ತಿರುಮಲದಲ್ಲಿ ಅಪವಿತ್ರ ಘಟನೆಯೊಂದು ರಾಜಕೀಯ ವಲಯದಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ತಿರುಪತಿಯ ಪವಿತ್ರ ಪ್ರಸಾದ ಎಂದು ಪರಿಗಣಿಸುವ ಲಡ್ಡು ತಯಾರಿಕೆಗೆ ಬಳಸಲಾಗುವ ತುಪ್ಪದಲ್ಲಿ ಪ್ರಾಣಿಕೊಬ್ಬನ್ನು ಬಳಸಲಾಗಿದೆ ಎಂಬ ಹೇಳಿಕೆ ಲಕ್ಷಾಂತರ ವೆಂಕಟೇಶ್ವರ ಭಕ್ತರನ್ನು ಬೆಚ್ಚಿಬೀಳಿಸಿದೆ. ಆದರೆ ಟಿಟಿಡಿ ಇಒ ಮಾತ್ರ 'ತುಪ್ಪದಲ್ಲಿ ಕಲಬೆರಿಕೆ ಇಲ್ಲ' ಎಂಬ ಹೇಳಿಕೆ ಸಾಕಷ್ಟು ಗೊಂದಲ ಸೃಷ್ಟಿಸಿದ್ದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಲಡ್ಡುಗಳನ್ನು ತಯಾರಿಸಲು ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂದು ಪರೀಕ್ಷಾ ವರದಿಗಳು ದೃಢಪಡಿಸಿವೆ. ಸದ್ಯ ಈ ವಿವಾದ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶ ಸರ್ಕಾರದ ಕೆಲವು ಹೇಳಿಕೆಗಳು ಅನೇಕ ಸಂದರ್ಭಗಳಲ್ಲಿ ಕಲಬೆರಕೆ ತುಪ್ಪದ ಬಳಕೆಯನ್ನು ದೃಢಪಡಿಸಿದರೆ, ಇತ್ತ ಮಾಧ್ಯಮಗಳು ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ (ಇಒ) ಅವರು "ಕಲಬೆರಕೆ ತುಪ್ಪವನ್ನು ಎಂದಿಗೂ ಬಳಸಲಿಲ್ಲ" ಎಂದು ಹೇಳಿದ್ದನ್ನು ಬಿತ್ತರಿಸಿವೆ. ಇದು ಭಕ್ತರಲ್ಲಿ ಗೊಂದಲವನ್ನು ಹೆಚ್ಚಿಸಿದೆ.

OneIndiaದ ಆಕಾಶ್ ಕೊಲ್ಲೂರು ಅವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಗೊಂದಲವನ್ನು ನಿವಾರಿಸಿದ್ದಾರೆ. ''ಕಲಬೆರಕೆ ತುಪ್ಪವನ್ನು ಎಂದಿಗೂ ಬಳಸದಿದ್ದರೆ ಸಮಸ್ಯೆ ಈ ಹಂತಕ್ಕೆ ಹೋಗುತ್ತಿರಲಿಲ್ಲ. ಯಾವುದೇ ಹೇಳಿಕೆ ನೀಡುವ ಮೊದಲು ನಾವು ಯಾವಾಗಲೂ ಎಚ್ಚರಿಕೆ ವಹಿಸುತ್ತೇವೆ. ಇಒ ಅವರು ಹೇಳಿದ್ದು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅಲ್ಲ. ಹಿಂದಿನ ಪರಿಸ್ಥಿತಿ ಬಗ್ಗೆ" ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ಇಒ ಅವರು ಅಧಿಕಾರ ವಹಿಸಿಕೊಂಡ ನಂತರದ ಅವಧಿಯಲ್ಲಿ ಇಂಥಹ ಘಟನೆ ನಡೆದಿಲ್ಲ ಎಂದು ಉಲ್ಲೇಖಿಸಿದ್ದಾರೆ ಎಂದು ಪವನ್ ಕಲ್ಯಾಣ್ ವಿವರಿಸಿದ್ದಾರೆ. ಇಒ ಅವರು ಅಧಿಕಾರ ವಹಿಸಿಕೊಂಡ ನಂತರ ಸಮಸ್ಯೆ ಪರಿಹರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ''ಹೊಸ ಇಒ ಬಂದಾಗ, ಅವರು ಕಲಬೆರಕೆ ತುಪ್ಪವನ್ನು ಪೂರೈಸುವ ಕಂಪನಿಯಿಂದ ತುಪ್ಪ ಖರೀದಿ ಮಾಡುವುದನ್ನು ನಿಲ್ಲಿಸಿ, ಸರಿಯಾಗಿ ಪರೀಕ್ಷಿಸಿದ ತುಪ್ಪವನ್ನು ಮಾತ್ರ ಬಳಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಕೆಲವರು ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ (ಇಒ)ಯ ಮಾತನ್ನು ತಿರುಚಲು ಆಯ್ಕೆ ಮಾಡಿದ್ದಾರೆ" ಎಂದು ಪವನ್ ಕಲ್ಯಾಣ್ ಸ್ಪಷ್ಟನೆ ನೀಡಿದ್ದಾರೆ.
ಪ್ರಸಾದದ ಗುಣಮಟ್ಟದ ಬಗ್ಗೆ ನಾವು ಬಹಳ ದಿನಗಳಿಂದ ಕಳವಳ ವ್ಯಕ್ತಪಡಿಸುತ್ತಿದ್ದೇವೆ. ಇಒ ಅವರ ಹೇಳಿಕೆಯನ್ನು ಅನುವಾದದಲ್ಲಿ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದು ಪವನ್ ಕಲ್ಯಾಣ್ ತಿಳಿಸಿದ್ದಾರೆ. ಅವರು ಅದನ್ನು ತೆಲುಗಿನಲ್ಲಿ ಉತ್ತಮವಾಗಿ ವ್ಯಕ್ತಪಡಿಸಿರಬಹುದು. ಆದರೆ ಇಂಗ್ಲಿಷ್ನಲ್ಲಿ, ಅದು ವಿಭಿನ್ನ ಅರ್ಥ ನೀಡುತ್ತದೆ ಎಂದರು.
ನಾನು ಅವರನ್ನು ವೈಯಕ್ತಿಕವಾಗಿ ಕೇಳಿದಾಗ, ಅವರು ಕಲಬೆರಿಕೆ ತುಪ್ಪ ಖರೀದಿ ಮಾಡುವುದನ್ನು ನಿಲ್ಲಿಸಿದ ಬಳಿಕ ತುಪ್ಪವನ್ನು ಪರೀಕ್ಷಿಸಲಾಗಿದೆ ಮತ್ತು ಉತ್ತಮ ಗುಣಮಟ್ಟದ ತುಪ್ಪು ಬಳಕೆ ಮಾಡಲಾಗುತ್ತಿದೆ, ಈ ವಿಚಾರವನ್ನು ನಾನು ಹೇಳಿದ್ದು ಎಂದು ಅವರು ಖಚಿತಪಡಿಸಿದರು. ಆದರೆ ಕೆಲವು ಗುಂಪುಗಳು ಬೇರೆ ಏನನ್ನೋ ಸೂಚಿಸಲು ಅವರ ಮಾತುಗಳನ್ನು ತಿರುಚುತ್ತಿದ್ದಾರೆ ಎಂದು ಪವನ್ ಕಲ್ಯಾನ್ ಆರೋಪಿಸಿದರು.
ಮಾಧ್ಯಮಗಳು ಇಒ ಹೇಳಿಕೆಯನ್ನು ವರದಿ ಮಾಡಿದ ಕೆಲವೇ ದಿನಗಳಲ್ಲಿ ಪವನ್ ಕಲ್ಯಾಣ್ ಈ ಸ್ಪಷ್ಟೀಕರಣವನ್ನು ನೀಡಿದ್ದಾರೆ. ತಿರುಚಿದ ಹೇಳಿಕೆ ಭಕ್ತರಲ್ಲಿ ವ್ಯಾಪಕ ಗೊಂದಲವನ್ನು ಉಂಟುಮಾಡಿದೆ. ಕಲಬೆರಕೆ ತುಪ್ಪದ ಬಳಕೆಯನ್ನು ಇಒ ಸಂಪೂರ್ಣವಾಗಿ ನಿರಾಕರಿಸಿದ್ದಾರೆ ಎಂದು ಕೆಲ ವರದಿಗಳು ಸೂಚಿಸಿವೆ. ಇದು ಆಂಧ್ರಪ್ರದೇಶದ ಆಡಳಿತಾರೂಢ ಮೈತ್ರಿಕೂಟದ ಹೇಳಿಕೆಗಳಿಗೆ ವಿರುದ್ಧವಾಗಿದೆ. ಆಹಾರ ಕಲಬೆರಕೆಯ ಸಣ್ಣ ಪ್ರಕರಣಕ್ಕಿಂತ ಈ ವಿಷಯವು ಹೆಚ್ಚು ಮಹತ್ವದ್ದಾಗಿದೆ ಎಂದು ಪವನ್ ಕಲ್ಯಾಣ್ ಒತ್ತಿ ಹೇಳಿದರು.
ಇಂತಹ ಘಟನೆಗಳು ಟಿಟಿಡಿಯಂತಹ ಧಾರ್ಮಿಕ ಸಂಸ್ಥೆಗಳು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಸಹ ಪ್ರತಿಬಿಂಬಿಸುತ್ತವೆ. ಇಂತಹ ಪೂಜ್ಯನೀಯ ಸ್ಥಳಗಳಲ್ಲಿ ಪಾವಿತ್ರ್ಯತೆ ಕಾಪಾಡುವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂದು ಅವರು ಪುನರುಚ್ಚರಿಸಿದರು. ಲಕ್ಷಾಂತರ ಭಕ್ತರ ಪ್ರಶ್ನೆಗೆ ಸದ್ಯ ಉತ್ತರ ಸಿಕ್ಕಿದೆ. ಸದ್ಯ ನಾವು ಪರಿಸ್ಥಿತಿಗೆ ಸ್ಪಷ್ಟತೆ ತಂದಿದ್ದೇವೆ. ಹಿಂದೆ ಏನಾಗಿದೆ ಎಂಬುದರ ಬಗ್ಗೆ ಈಗ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications