Get Updates
Get notified of breaking news, exclusive insights, and must-see stories!

ವೇದಿಕೆ ಮೇಲೆಯೇ ಪವನ್ ಕಲ್ಯಾಣ್ ಬೇಡಿಕೆ ಈಡೇರಿಸಿದ ನರೇಂದ್ರ ಮೋದಿ!

ಬೆಂಗಳೂರು, ಜೂನ್ 11: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಸರ್ಕಾರ ರಚನೆ ಮಾಡಿದ್ದು, ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

ವಿಜಯವಾಡದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಮೋದಿ ಸಮ್ಮುಖದಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಸಹ ಪ್ರಮಾಣ ವಚನ ಸ್ವೀಕಾರ ಮಾಡಿದರು.

Pawan Kalyan Demand Narendra Modi Meets Mega Star Chiranjeevi

ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮ ವಿಶೇಷ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಬೇಡಿಕೆಯನ್ನು ನರೇಂದ್ರ ಮೋದಿ ವೇದಿಕೆಯಲ್ಲಿ ಈಡೇರಿಸುವ ಮೂಲಕ ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷದ ಬೇಡಿಕೆಗೆ ಮನ್ನಣೆ ನೀಡಿದರು.

ಪವನ್ ಕಲ್ಯಾಣ್ ಬೇಡಿಕೆ ಏನು?; ಪ್ರಮಾಣ ವಚನ ಕಾರ್ಯಕ್ರಮ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ವಾಪಸ್ ಹೊರಟರು. ಆಗ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಜೊತೆ ಮಾತುಕತೆ ನಡೆಸಿದರು. ಆಗ ಪವನ್ ಕಲ್ಯಾಣ್ ನರೇಂದ್ರ ಮೋದಿ ಅವರ ಬಳಿಕ ನಟ, ಸಹೋದರ ಚಿರಂಜೀವಿ ಭೇಟಿಯಾಗುವಂತೆ ಮನವಿ ಮಾಡಿದರು.

ಪವನ್ ಬೇಡಿಕೆಗೆ ಒಪ್ಪಿದ ನರೇಂದ್ರ ಮೋದಿ ಪವನ್ ಕಲ್ಯಾಣ್ ಕೈ ಹಿಡಿದುಕೊಂಡು ಅವರ ಜೊತೆಗೆ ಬಂದು ವೇದಿಕೆಯಲ್ಲಿ ಚಿರಂಜೀವಿ ಭೇಟಿ ಮಾಡಿದರು. ಅಲ್ಲದೇ ಇಬ್ಬರ ಕೈ ಹಿಡಿದು ಮೇಲೆತ್ತಿ ಫೋಟೋಗಳಿಗೆ ಫೋಸ್ ನೀಡಿದರು. ಅಲ್ಲದೇ ಇಬ್ಬರನ್ನು ಆತ್ಮೀಯವಾಗಿ ತಬ್ಬಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಮಾಣ ವಚನ ಕಾರ್ಯಕ್ರಮ ಮುಗಿಸಿ ಹೊರಟ ನರೇಂದ್ರ ಮೋದಿ ವೇದಿಕೆಯಲ್ಲಿ ನಟ ರಜನಿಕಾಂತ್, ಬಾಲಯ್ಯ ಜೊತೆಯೂ ಆತ್ಮೀಯವಾಗಿ ಮಾತುಕತೆ ನಡೆಸಿದರು. ನರೇಂದ್ರ ಮೋದಿ, ಪವನ್ ಕಲ್ಯಾಣ್,‌ ಚಿರಂಜೀವಿ, ರಜನಿಕಾಂತ್ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಉಂಟು ಮಾಡಿವೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ 2024ರಲ್ಲಿ ಟಿಡಿಪಿ 135, ಜನಸೇನಾ ಪಕ್ಷ 21, ವೈಎಸ್‌ಆರ್‌ಸಿಪಿ 11, ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಗಳಿಸಿವೆ. ಚುನಾವಣೆಗೂ ಮೊದಲೇ
ತೆಲುಗು ದೇಶಂ ಪಕ್ಷ (ಟಿಡಿಪಿ), ಜನಸೇನಾ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿದ್ದವು.

ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಆಂಧ್ರ ಪ್ರದೇಶದಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೋಲಿಸಲು ಪಣ ತೊಟ್ಟಿದ್ದರು. ಆದ್ದರಿಂದ ಚುನಾವಣಾ ಪೂರ್ವ ಮೈತ್ರಿಮಾಡಿಕೊಂಡಿದ್ದರು. ಚುನಾವಣೆಯಲ್ಲಿ ಜನ ಬೆಂಬಲವೂ ಸಿಕ್ಕಿದ್ದು, ಸರ್ಕಾರ ರಚನೆಯಾಗಿದೆ.

27 ಸಚಿವರ ಜೊತೆ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅಧಿಕಾರವಹಿಸಿಕೊಂಡಿದ್ದಾರೆ. ಪವನ್ ಕಲ್ಯಾಣ್ ಸಹ ಸಂಪುಟ ಸೇರಿದ್ದು, ಉಪ ಮುಖ್ಯಮಂತ್ರಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ 2024ರ ಜೊತೆ ಲೋಕಸಭೆ ಚುನಾವಣೆಯೂ ನಡೆದಿತ್ತು. ಟಿಡಿಪಿ ಪಕ್ಷ 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಯಲ್ಲಿ ಪ್ರಮುಖ ಪಕ್ಷವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+