Pawan Kalyan: ನನ್ನ ರಾಜ್ಯ ಸಂಕಷ್ಟದಲ್ಲಿ ನನಗೆ ಸಂಬಳ ಬೇಡ ಎಂದ ಡಿಸಿಎಂ ಪವನ್ ಕಲ್ಯಾಣ್
ಆಂಧ್ರ ಪ್ರದೇಶದ ಅನಿಶ್ಚಿತ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ತಮ್ಮ ಸಂಬಳ ಮತ್ತು ಕಚೇರಿಗೆ ಹೊಸ ಪೀಠೋಪಕರಣ ಸೇರಿದಂತೆ ಯಾವುದೇ ವಿಶೇಷ ಭತ್ಯೆಗಳನ್ನು ಸ್ವೀಕರಿಸಲು ನಿರಾಕರಿಸಿರುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೋಮವಾರ ಹೇಳಿದ್ದಾರೆ.
ಡಿಸಿಎಂ ಕಚೇರಿಗೆ ಹೊಸ ಪೀಠೋಪಕರಣ, ಕಚೇರಿ ನವೀಕರಣ ಮಾಡುವ ಬಗ್ಗೆ ಅಧಿಕಾರಿಗಳು ಕೇಳಿದ್ದು, ಪವನ್ ಕಲ್ಯಾಣ್ ಎಲ್ಲಾ ಸವಲತ್ತುಗಳನ್ನು ತಿರಸ್ಕರಿಸಿದ್ದಾರೆ.

ಅಧಿಕಾರಿಗಳು ಕ್ಯಾಂಪ್ ಆಫೀಸ್ ನವೀಕರಣ ಮತ್ತು ರಿಪೇರಿ ಬಗ್ಗೆ ಏನು ಮಾಡಬೇಕೆಂದು ಕೇಳಿದರು. ಏನನ್ನೂ ಮಾಡಬೇಡಿ ಮತ್ತು ಸುಮ್ಮನೆ ಬಿಡಿ ಎಂದು ನಾನು ಅವರಿಗೆ ಹೇಳಿದೆ. ಯಾವುದೇ ಹೊಸ ಪೀಠೋಪಕರಣಗಳನ್ನು ಖರೀದಿಸದಂತೆ ನಾನು ಅವರಿಗೆ ಹೇಳಿದ್ದೇನೆ ಮತ್ತು ಅಗತ್ಯವಿದ್ದರೆ ಅದನ್ನು ನಾನೇ ತರುತ್ತೇನೆ ಎಂದು ಕಲ್ಯಾಣ್ ಅವರು ಕಲ್ಯಾಣ ಪಿಂಚಣಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸಭೆಯನ್ನುದ್ದೇಶಿಸಿ ಹೇಳಿದರು.
ಮೂರು ದಿನಗಳ ಕಾಲ ಸದನಕ್ಕೆ ಹಾಜರಾಗಲು ₹ 35,000 ಸಂಬಳಕ್ಕೆ ಸಂಬಂಧಿಸಿದ ದಾಖಲೆಗಳ ಮೇಲೆ ಸಹಿ ಪಡೆಯಲು ಸೆಕ್ರೆಟರಿಯೇಟ್ನ ಅಧಿಕಾರಿಗಳು ಬಂದಿದ್ದರು ಎಂದು ಪವನ್ ಕಲ್ಯಾಣ್ ಮಾಹಿತಿ ನಿಡಿದ್ದು, ಆದರೆ ನಾನು ಸಂಬಳ ಪಡೆಯುವುದಿಲ್ಲ ಎಂದಿರುವುದಾಗಿ ತಿಳಿಸಿದರು.
ಪವನ್ ಕಲ್ಯಾಣ್ ಅವರು ಸಚಿವರಾಗಿ ನೇತೃತ್ವದ ಪಂಚಾಯತ್ ರಾಜ್ ಇಲಾಖೆಗೆ ಸಾಕಷ್ಟು ಹಣದ ಕೊರತೆಯಿದ್ದು, ಇಂತಹ ಸಂದರ್ಭದಲ್ಲಿ ನಾನು ಈ ಸವಲತ್ತುಗಳನ್ನು ಪಡೆಯವುದಿಲ್ಲ ಎಂದು ಹೇಳಿದರು.
ಹಿಂದಿನ ಸರ್ಕಾರದ ಬಗ್ಗೆ ಟೀಕೆ
ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾಗ 600 ಕೋಟಿ ರೂಪಾಯಿ ಖರ್ಚು ಮಾಡಿ ರಿಷಿಕೊಂಡ ಪ್ಯಾಲೆಸ್ ನಿರ್ಮಿಸಬೇಕಾದ ಅವಶ್ಯಕತೆ ಏನಿತ್ತು ಎಂದು ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ.
ನಮ್ಮದು ಕರಪ್ಶನ್ ಗವರ್ನಮೆಂಟ್ ಅಲ್ಲ, ಕರೆಕ್ಷನ್ ಗವರ್ನಮೆಂಟ್ ಎಂದು ಹೇಳಿದ ಅವರು, ಕಳೆದ ಸರ್ಕಾರ ಮಾಡಿದ ತಪ್ಪನ್ನು ಸರಿಮಾಡುತ್ತೇವೆ ಎಂದು ಹೇಳಿದ್ದಾರೆ. ಪಿಠಾಪುರದಲ್ಲಿ ಸ್ವಂತ ಮನೆ ಕಟ್ಟಲು ಜಾಗ ಹುಡುಕುತ್ತಿದ್ದೇನೆ, ಇಲ್ಲೇ ಮನೆ ನಿರ್ಮಾಣ ಮಾಡಿಕೊಂಡು ಕ್ಷೇತ್ರದ ಜನರ ಕೆಲಸ ಮಾಡುತ್ತೇನೆ ಎಂದರು.
ತನ್ನ 25 ವರ್ಷದ ಸಿನಿಮಾ ವೃತ್ತಿಯಲ್ಲಿ ಸುಮಾರು 100 ಕೋಟಿಗೆ ಹೆಚ್ಚು ಟಾಕ್ಸ್ ಕಟ್ಟಿದ್ದೇನೆ. ಆದರೆ ತನ್ನ ಆಡಿಟರ್ ಒಂದು ಗಂಟೆಗಿಂತ ಹೆಚ್ಚು ಕೂತಿಲ್ಲ. ಆದರೆ ಮೊನ್ನೆ ಪಂಚಾಯತ್ರಾಜ್ ಇಲಾಖೆ ಆಡಿಟ್ ಲೆಕ್ಕದ ಮೇಲೆ ಒಂದು ಸೆಷನ್ನಲ್ಲಿ ಸುಮಾರು 4-5 ಗಂಟೆಗೆ ಕುಳಿತಿದ್ದಾರೆ. 3000-4000 ಕೋಟಿ ಅನುದಾನ ಮಾಯವಾಗಿದೆ ಎಂದು ತಿಳಿದು ಬಂದಿದೆ. ಕಳೆದ ಸರ್ಕಾರ ಬರೀ ಭ್ರಷ್ಟಾಚಾರ ಮಾಡಿದೆ ಎಂದು ಆರೋಪಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications