ಜೈಲಿನಲ್ಲಿ ಚಂದ್ರಬಾಬು ನಾಯ್ಡು-ಪವನ್ ಕಲ್ಯಾಣ್ ಭೇಟಿ: ಟಿಡಿಪಿ, ಜನಸೇನೆ ಮೈತ್ರಿ ಘೋಷಿಸಿದ ಪವರ್ ಸ್ಟಾರ್
ಹೈದರಾಬಾದ್, ಸೆಪ್ಟೆಂಬರ್ 14: ಆಂಧ್ರ ರಾಜಕಾರಣ ಸ್ಪೋಟಕ ತಿರುವು ಪಡೆದುಕೊಳ್ಳುತ್ತಿದೆ. ಜೈಲಿನಲ್ಲಿರುವ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಖ್ಯಾತ ನಟ ಹಾಗೂ ಜನಸೇನೆ ನಾಯಕ ಪವನ್ ಕಲ್ಯಾಣ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಟಿಡಿಪಿ ಜೊತೆ ಜನಸೇನೆಯ ಮೈತ್ರಿಯನ್ನು ಘೋಷಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಜನಸೇನೆ ಸ್ಪರ್ಧಿಸಲಿದೆ ಎಂದು ಪವರ್ ಸ್ಟಾರ್ ಪವನ್ ಕಲ್ಯಾಣ್ ಗುರುವಾರ ಹೇಳಿದ್ದಾರೆ.

ತೆಲುಗು ದೇಶಂ ಪಕ್ಷದ ಶಾಸಕ ಹಾಗೂ ನಟ ಬಾಲಕೃಷ್ಣ ಮತ್ತು ನಾರಾ ಲೋಕೇಶ್ ಅವರೊಂದಿಗೆ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ಪವನ್ ಕಲ್ಯಾಣ್ ಈ ಘೋಷಣೆ ಮಾಡಿದ್ದಾರೆ.
ಸುಮಾರು 40 ನಿಮಿಷಗಳ ಕಾಲ ಈ ನಾಯಕರ ಸಭೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪವನ್ ಕಲ್ಯಾಣ್, 'ಆಂಧ್ರಪ್ರದೇಶವು ವೈಎಸ್ಆರ್ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಭರಿಸಲು ಸಾಧ್ಯವಿಲ್ಲ. ನಾನು ಇಲ್ಲಿಯ ವರೆಗೆ ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೆ. ಇಂದು ನಾನು ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ನಂತರ ಮಹತ್ವದ ತೀರ್ಮಾನಕ್ಕೆ ಬಂದಿದ್ದೇನೆ. ಜನಸೇನೆ ಮತ್ತು ಟಿಡಿಪಿ ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ನಿರ್ಧರಿಸಿದ್ದೇನೆ' ಎಂದು ತಿಳಿಸಿದರು.

'ಕೆಲ ರಾಜಕೀಯ ನೀತಿಗೆ ಸಂಬಂಧಿಸಿದಂತೆ ನಾನು ಚಂದ್ರಬಾಬು ನಾಯ್ಡು ಅವರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದೇನೆ. ನಾವು ಈ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ಆದರೆ, ನಾನು ಅವರ ಅನುಭವವನ್ನು ಗೌರವಿಸುತ್ತೇನೆ. ನಾಯಕನಾಗಿ ಬೆಳೆದಿರುವ ಅವರ ಸಾಮರ್ಥ್ಯಕ್ಕೆ ನಾನು ಶಿರಬಾಗಿದ್ದೇನೆ. ಅವರು ಸೈಬರಾಬಾದ್ ಅನ್ನು ಸಾಧ್ಯವಾಗಿಸಿದ ವ್ಯಕ್ತಿಯಾಗಿದ್ದಾರೆ. ಹೈದರಾಬಾದ್ನಲ್ಲಿ ಐಟಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ ಹಿರಿಮೆ ಅವರ ಮೇಲಿದೆ' ಎಂದು ಪವನ್ ಕಲ್ಯಾಣ್ ತಿಳಿಸಿದ್ದಾರೆ.
ಕಳೆದ 4 ವರ್ಷಗಳಿಂದ ಆಡಳಿತ ಪಕ್ಷವು ಹೇಗೆ ವರ್ತಿಸುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಚಂದ್ರಬಾಬು ನಾಯ್ಡು ಅವರನ್ನು ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿದೆ. ಇದು ತುಂಬಾ ದುಃಖಕರವಾಗಿದೆ. ಚಂದ್ರಬಾಬು ನಾಯ್ಡು ಅವರೊಂದಿಗೆ ನಾನಿದ್ದೇನೆ. ನಮ್ಮ ಒಗ್ಗಟ್ಟನ್ನು ತೋರಿಸಲು ನಾನು ಇಲ್ಲಿಗೆ ಬಂದಿದ್ದೇನೆ' ಎಂದು ಹೇಳಿದರು.
ಜೈಲಿನಲ್ಲಿರುವ ನಾಯ್ಡು ಅವರನ್ನು ಭೇಟಿ ಮಾಡಲು ಪವನ್ ಕಲ್ಯಾಣ್ ಎರಡನೇ ಬಾರಿಗೆ ಪ್ರಯತ್ನಿಸಿದ್ದಾರೆ. ಭಾನುವಾರ ಅವರು ಮೊದಲ ಬಾರಿಗೆ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಲು ತೆರಳಿದ್ದರು. ಈ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದರು. ಹೈದರಾಬಾದ್ನ ಬೇಗಂಪೇಟ್ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಹತ್ತಲು ಅನುಮತಿ ನಿರಾಕರಿಸಲಾಯಿತು. ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗಲೂ ಅವರನ್ನು ತಡೆಯಲಾಯಿತು.

ಪವನ್ ಕಲ್ಯಾಣ್ ಮತ್ತು ನಾಯ್ಡು ಇಬ್ಬರೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯನ್ನು ಸಾಮಾನ್ಯ ಶತ್ರುವಾಗಿ ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಡಿಪಿ ಮತ್ತು ಜನಸೇನಾ ನಡುವಿನ ಸಂಬಂಧ ಗಟ್ಟಿಯಾಗುತ್ತಿದೆ.
ಕೌಶಲ್ಯಾಭಿವೃದ್ಧಿ ಹಗರಣದ ಆರೋಪದಲ್ಲಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಕಳೆದ ವಾರ ಬಂಧಿಸಲಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications