Breaking: ಕಾಶ್ಮೀರ: ಸರ್ಕಾರಿ ನಿವಾಸ ತೋರಿಯುವಂತೆ ಮೊಹಬೂಬಾ ಮುಫ್ತಿಗೆ ನೋಟಿಸ್
ಶ್ರೀನಗರ, ಅಕ್ಟೋಬರ್ 21: ಕಾಶ್ಮೀರದ ಫೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಸರ್ಕಾರಿ ಬಂಗಲೆ ತೊರೆಯುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ'ಗೆ ಸ್ಪಷ್ಟಪಡಿಸಿರುವ ಅವರು, 'ನಾನು ವಾಸವಾಗಿದ್ದ ಸರ್ಕಾರಿ ನಿವಾಸವನ್ನು ತೊರೆಯುವಂತೆ ನೋಟಿಸ್ ನೀಡಲಾಗಿದೆ' ಎಂದು ಹೇಳಿದ್ದಾರೆ.
ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿರುವ ಫೇರ್ವ್ಯೂ ನಿವಾಸವನ್ನು ತೊರೆಯಲು ಮುಫ್ತಿ ಅವರಿಗೆ ತಿಳಿಸಲಾಗಿದೆ.
ಬಿಜೆಪಿ ವಿರುದ್ಧ ಮುಫ್ತಿ ಅಸಮಾಧಾನ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಮೆಹಬೂಬಾ ಮುಫ್ತಿ ಟೀಕಿಸುತ್ತಲೇ ಬಂದಿದ್ದಾರೆ. 'ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ, ಅದು ಸ್ವಾತಂತ್ರ್ಯ ಹೋರಾಟಕ್ಕಿಂತ ದೊಡ್ಡದು' ಎಂಬ ಹೇಳಿಕೆ ನೀಡಿದ್ದರು.
ಕಾಶ್ಮೀರ ಪ್ರತ್ಯೇಕವಾದಿ ನಾಯಕ ಯಾಸಿನ್ ಭಟ್ಕಳ್ಗೆ ಜೈಲು ಶಿಕ್ಷಿ ವಿಧಿಸಿದ್ದನ್ನು ಮುಫ್ತಿ ಖಂಡಿಸಿದ್ದರು. ಕಾಶ್ಮೀರ್ ಫೈಲ್ಸ್ನಂತಹ ಚಿತ್ರದಿಂದ ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಲಿದೆ ಎಂದು ಹೇಳಿದ್ದರು. ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಫ್ತಿ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಶಂಕೆಗಳು ವ್ಯಕ್ತವಾಗಿದೆ.

ಮೆಹಬೂಬಾ ಮುಫ್ತಿ ಗೃಹ ಬಂಧನ
ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಕೆಲ ತಿಂಗಳ ಕಾಲ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಆರ್ಟಿಕಲ್ 370 ರದ್ದಾದ ನಂತರ ಈ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು. ಕೇಂದ್ರ ಸರ್ಕಾರವು ನಮ್ಮ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ ಎಂದು ಮುಫ್ತಿ ಆರೋಪಿಸಿದ್ದರು.
ಪಂಡಿತರ ಹತ್ಯೆಗೆ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದಿದ್ದ ಮುಫ್ತಿ
ಕೆಲ ತಿಂಗಳಿಂದ ಕಾಶ್ಮೀರದಲ್ಲಿ ಪಂಡಿತರ ಹತ್ಯೆಗಳು ಹೆಚ್ಚಾಗುತ್ತಿವೆ. ಆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದ ಮುಫ್ತಿ, 'ಕಾಶ್ಮೀರದಲ್ಲಿ ಪಂಡಿತರ ಹತ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕೆಲ್ಲ ಕೇಂದ್ರ ಸರ್ಕಾರದ ದುರುಳ ನೀತಿಗಳೇ ಕಾರಣ. ನಮ್ಮನ್ನು ಕಾಶ್ಮೀರಿ ಪಂಡಿತರ ಶತ್ರುಗಳೆಂದು ಬಿಂಬಿಸಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಗೃಹಬಂಧನದಲ್ಲಿ ಇರಿಸುವ ಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕಾಶ್ಮೀರಿ ಪಂಡಿತರ ಸಂಕಷ್ಟಗಳನ್ನು ಮುಚ್ಚಿಡಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ' ಎಂದು ಆರೋಪಿಸಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications