ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಏರ್ ಇಂಡಿಯಾಗೆ 30 ಲಕ್ಷ ರೂ.ದಂಡ, ಪೈಲೆಟ್ಸಗಳ ಪರವಾನಿಗೆ ಅಮಾನತು
ನವದೆಹಲಿ, ಜನವರಿ 20: ಕುಡಿದ ಮತ್ತಿನಲ್ಲಿ ಸಹ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣದಲ್ಲಿ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)ವು 30 ಲಕ್ಷ ರೂ. ದಂಡ ವಿಧಿಸಿದೆ. ಜೊತೆಗೆ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ನ್ಯೂಯಾರ್ಕ್ ಮತ್ತು ದೆಹಲಿ ವಿಮಾನದ ಫೈಲಟ್ ಇನ್ಚಾರ್ಜ್ ಅಧಿಕಾರಿಯ ಪರವಾನಿಗೆಯನ್ನು ಮೂರು ತಿಂಗಳು ಅಮಾನತು ಮಾಡಿದೆ.
ಅಷ್ಟೇ ಅಲ್ಲದೇ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA)ವು ಕರ್ತವ್ಯದ ಅಸಮರ್ಪಕ ನಿರ್ವಹಣೆ ಎಂದು ತಿಳಿಸಿ ಏರ್ ಇಂಡಿಯಾದ ಡೈರೆಕ್ಟರ್-ಇನ್-ಫ್ಲೈಟ್ ಸೇವೆಗಳಿಗೆ ಮೂರು ಲಕ್ಷ ರೂಪಾಯಿ ದಂಡ ಹೇರಿದೆ.
2022ರಲ್ಲಿ ನವೆಂಬರ್ 26 ರಂದು ಚಲಿಸುತ್ತಿದ್ದ ದೆಹಲಿ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಶಂಕರ್ ಮಿಶ್ರಾ ಎಂಬಾತ ಕುಡಿದ ಮತ್ತಿನಲ್ಲಿ ಸಹ ಮಹಿಳಾ ಪ್ರಯಾಣಿಕವೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಭಾರಿ ಸುದ್ದಿಯಾಗಿತ್ತು. ಹೀಗಾಗಿ ಆರೋಪಿ ಮಿಶ್ರಾ ಮೇಲೆ ವಿಮಾನಯಾನ ಸಂಸ್ಥೆಯು ನಾಲ್ಕು ತಿಂಗಳ ಹಾರಾಟ ನಿಷೇಧ ವಿಧಿಸಿತ್ತು. ಮಹಾ ನಿರ್ದೇಶನಾಲಯ ಹೇರಿದ್ದ ದಂಡ ನಂತರ ಇದೀಗ ಮಿಶ್ರಾ ಮೇಲಿನ ನಿಷೇದ ಮತ್ತೆ ಒಂದು ತಿಂಗಳು ವಿಸ್ತರಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮಹಾ ನಿರ್ದೇಶನಾಲಯವು ಏರ್ ಇಂಡಿಯಾದ ವ್ಯವಸ್ಥಾಪಕರು, ಏರ್ ಇಂಡಿಯಾ ಸಂಸ್ಥೆಯ ವಿಮಾನಯಾನ ಸೇವೆಗಳ ನಿರ್ದೇಶಕರು ಹಾಗೂ ಆ ವಿಮಾನದ ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ವಿರುದ್ಧ ಶೋಕಾಸ್ ನೋಟಿಸ್ ನೀಡಿತ್ತು. ಕೈಗೊಳ್ಳಬೇಕಾದ ಕ್ರಮ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ಕಾಲಾವಕಾ ನೀಡಿತ್ತು.
ಆರೋಪ ನಿರಾಕರಿಸಿದ ಮಿಶ್ರಾ
ಇತ್ತ ಘಟನೆ ನಂತರ ಹಲವು ದಿನಗಳ ಬಳಿ ಸಿಕ್ಕ ಶಂಕರ್ ಮಿಶ್ರಾ ಅವರು, ತಮ್ಮ ಮೇಲಿನ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದರು. ಮಹಿಳೆಯೇ ಸ್ವತಃ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ತಿಳಿಸಿದ್ದರು. ಈ ಬಗ್ಗೆ ಮಹಿಳೆ ಸುಳ್ಳು ಮತ್ತು ವಿನಾಃ ಕಾರಣ ಆರೋಪ ಹೊರಿಸಿದ್ದಾರೆ ಎಂದಿದ್ದರು.
ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದ ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು, ವಿಮಾನದಲ್ಲಿ ನಡೆದ ಘಟನೆ ಕುರಿತಂತೆ ಏರ್ ಇಂಡಿಯಾದ ತೀಕ್ಷ್ಣ ಕ್ರಮಗಳ ಘೋಷಣೆ ಬಗ್ಗೆ ನಿರೀಕ್ಷೆ ಇತ್ತು. ಆದರೆ ಕ್ರಮಗಳ ಬದಲಿಗೆ ವಿಮಾನದಲ್ಲಿ ಆಲ್ಕೋಹಾಲ್ ಸೇವೆಯ ನೀತಿ ಮರು ಪರಿಶೀಲಿಸುತ್ತೇವೆ ಎನ್ನುವ ಜೊತೆಗೆ ಏರ್ ಇಂಡಿಯಾ ಘಟನೆ ಕುರಿತು ಕ್ಷಮೆಯಾಚಿಸಿತು ಎಂದರು.

ನ್ಯೂಯಾರ್ಕ್ನಿಂದ ಏರ್ ಇಂಡಿಯಾ ಭಾರತಕ್ಕೆ ಬಂದ ನಂತರ ಘಟನೆ ಕುರಿತು ಶಂಕರ್ ಮಿಶ್ರಾ ನವೆಂಬರ್ 27 ರಂದು ಏರ್ ಇಂಡಿಯಾ ಗ್ರೂಪ್ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಇಷ್ಟಕ್ಕೆ ಎಲ್ಲವೂ ಮುಗಿಯಿತು ಎನ್ನವಷ್ಟರಲ್ಲಿ ಆರು ವಾರಗಳ ನಂತರ ಮಿಶ್ರಾನನ್ನು ಪೊಲೀಸರು ಬಂಧಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications