Pension Increase: ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಸಿಕ ಪಿಂಚಣಿ ಹೆಚ್ಚಳ; ಮಾಹಿತಿ ಇಲ್ಲಿದೆ
Pension Increase: ಭದ್ರತಾ ಪಿಂಚಣಿ ಯೋಜನೆ ಅಡಿಯಲ್ಲಿ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುವ ಮಾಸಿಕ ಪಿಂಚಣಿಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಹಾಗಾದ್ರೆ ಎಷ್ಟು ಹೆಚ್ಚಳ ಆಗಿದೆ? ಯಾವಾಗಿನಿಂದ ಜಾರಿಯಾಗಲಿದೆ? ಹಾಗೂ ಎಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಹಾರದ ಸಿಎಂ ನಿತೀಶ್ ಕುಮಾರ್ ಅವರು ರಾಜ್ಯದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ ಅಡಿಯಲ್ಲಿ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುವ ಮಾಸಿಕ ಪಿಂಚಣಿಯನ್ನ 400 ರಿಂದ 1,100 ರೂಪಾಯಿಗಳಿಗೆ ಏರಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ಪಿಂಚಣಿ ಹೆಚ್ಚಳವು ಜುಲೈ 2025ರಿಂದ ಜಾರಿಗೆ ಬರಲಿದೆ. ರಾಜ್ಯದ 1.09 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನ ಸಿಗಲಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ, ಎಲ್ಲಾ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ಪ್ರತಿ ತಿಂಗಳು 400 ರೂಪಾಯಿಗಳ ಬದಲಿಗೆ 1,100 ರೂಪಾಯಿಗಳ ಪಿಂಚಣಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮುಂಬರಲಿರುವ 2025ರ ಜುಲೈನಿಂದಲೇ ಎಲ್ಲಾ ಫಲಾನುಭವಿಗಳಿಗೆ ಇದನ್ನು ಜಾರಿಗೆ ತರಲಾಗುವುದು. ಪ್ರತಿ ತಿಂಗಳ ದಿನಾಂಕ 10ರೊಳಗೆ ಫಲಾನುಭವಿಗಳ ಖಾತೆಗೆ ವರ್ಗಾಯಿಸುವಂತೆ ಸೂಚನೆ ನೀಡಲಾಗುದು. ಈ ಯೋಜನೆಯಿಂದ ಸುಮಾರು 1,09,69,255 ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಈ ನಿರ್ಧಾರವು ರಾಜ್ಯದ ವೃದ್ಧರಿಗೆ, ಅಂಗವಿಕಲರಿಗೆ ಹಾಗೂ ವಿಧವೆಯರಿಗೆ ಗೌರವಯುತ ಜೀವನವನ್ನು ಒದಗಿಸುವ ಗುರಿಯನ್ನ ಹೊಂದಿದೆ ಎಂದು ಹೇಳಿದರು.
ಈ ಯೋಜನೆಯು ಬಿಹಾರದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಮಯದಲ್ಲೇ ಬಂದಿದೆ. ಚುನಾವಣೆಯ ದಿನಾಂಕಗಳನ್ನ ಇನ್ನೂ ಚುನಾವಣಾ ಆಯೋಗ ಘೋಷಣೆ ಮಾಡಿಲ್ಲ. ಮಾರ್ಚ್ 2025ರಲ್ಲಿ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರು ಈ ಯೋಜನೆಯನ್ನು ಘೋಷಿಸಿದ್ದರು. ಅಲ್ಲದೆ, 500 ರೂಪಾಯಿಗಳಿಗೆ ಗ್ಯಾಸ್ ಸಿಲಿಂಡರ್ ಮತ್ತು 200 ಯೂನಿಟ್ಗಳ ಉಚಿತ ವಿದ್ಯುತ್ ಒದಗಿಸುವ ಭರವಸೆಯನ್ನೂ ಸಹ ನೀಡಿದ್ದರು.
ಈ ನಿರ್ಧಾರವು ಎನ್ಡಿಎ ನಾಯಕರಿಂದ ಬಲವಾದ ಬೆಂಬಲವನ್ನು ಪಡೆದಿದೆ. ಸಚಿವ ಸಮ್ರಾಟ್ ಚೌಧರಿ ಅವರು, ಪಿಂಚಣಿಯನ್ನು 1,100 ರೂಪಾಯಿಗಳಿಗೆ ಏರಿಕೆ ಮಾಡಿರುವುದು ಐತಿಹಾಸಿಕ ತೀರ್ಮಾನ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications