Pension Increase: ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಸಿಕ ಪಿಂಚಣಿ ಹೆಚ್ಚಳ; ಮಾಹಿತಿ ಇಲ್ಲಿದೆ
Pension Increase: ಭದ್ರತಾ ಪಿಂಚಣಿ ಯೋಜನೆ ಅಡಿಯಲ್ಲಿ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುವ ಮಾಸಿಕ ಪಿಂಚಣಿಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ಹಾಗಾದ್ರೆ ಎಷ್ಟು ಹೆಚ್ಚಳ ಆಗಿದೆ? ಯಾವಾಗಿನಿಂದ ಜಾರಿಯಾಗಲಿದೆ? ಹಾಗೂ ಎಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಹಾರದ ಸಿಎಂ ನಿತೀಶ್ ಕುಮಾರ್ ಅವರು ರಾಜ್ಯದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ ಅಡಿಯಲ್ಲಿ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ನೀಡಲಾಗುವ ಮಾಸಿಕ ಪಿಂಚಣಿಯನ್ನ 400 ರಿಂದ 1,100 ರೂಪಾಯಿಗಳಿಗೆ ಏರಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ಪಿಂಚಣಿ ಹೆಚ್ಚಳವು ಜುಲೈ 2025ರಿಂದ ಜಾರಿಗೆ ಬರಲಿದೆ. ರಾಜ್ಯದ 1.09 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನ ಸಿಗಲಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ, ಎಲ್ಲಾ ವೃದ್ಧರು, ಅಂಗವಿಕಲರು ಮತ್ತು ವಿಧವೆಯರಿಗೆ ಪ್ರತಿ ತಿಂಗಳು 400 ರೂಪಾಯಿಗಳ ಬದಲಿಗೆ 1,100 ರೂಪಾಯಿಗಳ ಪಿಂಚಣಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮುಂಬರಲಿರುವ 2025ರ ಜುಲೈನಿಂದಲೇ ಎಲ್ಲಾ ಫಲಾನುಭವಿಗಳಿಗೆ ಇದನ್ನು ಜಾರಿಗೆ ತರಲಾಗುವುದು. ಪ್ರತಿ ತಿಂಗಳ ದಿನಾಂಕ 10ರೊಳಗೆ ಫಲಾನುಭವಿಗಳ ಖಾತೆಗೆ ವರ್ಗಾಯಿಸುವಂತೆ ಸೂಚನೆ ನೀಡಲಾಗುದು. ಈ ಯೋಜನೆಯಿಂದ ಸುಮಾರು 1,09,69,255 ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಈ ನಿರ್ಧಾರವು ರಾಜ್ಯದ ವೃದ್ಧರಿಗೆ, ಅಂಗವಿಕಲರಿಗೆ ಹಾಗೂ ವಿಧವೆಯರಿಗೆ ಗೌರವಯುತ ಜೀವನವನ್ನು ಒದಗಿಸುವ ಗುರಿಯನ್ನ ಹೊಂದಿದೆ ಎಂದು ಹೇಳಿದರು.
ಈ ಯೋಜನೆಯು ಬಿಹಾರದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಮಯದಲ್ಲೇ ಬಂದಿದೆ. ಚುನಾವಣೆಯ ದಿನಾಂಕಗಳನ್ನ ಇನ್ನೂ ಚುನಾವಣಾ ಆಯೋಗ ಘೋಷಣೆ ಮಾಡಿಲ್ಲ. ಮಾರ್ಚ್ 2025ರಲ್ಲಿ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರು ಈ ಯೋಜನೆಯನ್ನು ಘೋಷಿಸಿದ್ದರು. ಅಲ್ಲದೆ, 500 ರೂಪಾಯಿಗಳಿಗೆ ಗ್ಯಾಸ್ ಸಿಲಿಂಡರ್ ಮತ್ತು 200 ಯೂನಿಟ್ಗಳ ಉಚಿತ ವಿದ್ಯುತ್ ಒದಗಿಸುವ ಭರವಸೆಯನ್ನೂ ಸಹ ನೀಡಿದ್ದರು.
ಈ ನಿರ್ಧಾರವು ಎನ್ಡಿಎ ನಾಯಕರಿಂದ ಬಲವಾದ ಬೆಂಬಲವನ್ನು ಪಡೆದಿದೆ. ಸಚಿವ ಸಮ್ರಾಟ್ ಚೌಧರಿ ಅವರು, ಪಿಂಚಣಿಯನ್ನು 1,100 ರೂಪಾಯಿಗಳಿಗೆ ಏರಿಕೆ ಮಾಡಿರುವುದು ಐತಿಹಾಸಿಕ ತೀರ್ಮಾನ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ತಿಳಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications