ಮಾರ್ಚ್ 1 ರಿಂದ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ: 60 ವರ್ಷ ಮೇಲ್ಪಟ್ಟವರಿಗೆ ಆದ್ಯತೆ
ನವದೆಹಲಿ,ಫೆಬ್ರವರಿ 24: ದೇಶದಲ್ಲಿ ಮಾರ್ಚ್ 1 ರಿಂದ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ.
ಈ ಕುರಿತು ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.ಸರ್ಕಾರದಿಂದ ನಡೆಸಲ್ಪಡುವ 10 ಸಾವಿರ ಕೇಂದ್ರಗಳು ಹಾಗೂ ಖಾಸಗಿಯ 20 ಸಾವಿರ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ಲಭ್ಯವಿರಲಿದೆ.
ಆದರೆ ಸರ್ಕಾರಿ ಕೇಂದ್ರಗಳಲ್ಲಿ ಲಸಿಕೆ ಉಚಿತವಾಗಿ ನೀಡಲಾಗುತ್ತಿದ್ದು, ಖಾಸಗಿ ಕೇಂದ್ರಗಳಲ್ಲಿ ಹಣ ಪಾವತಿಸಬೇಕಾಗುತ್ತದೆ, ಶುಲ್ಕವನ್ನು ಶೀಘ್ರವೇ ತಿಳಿಸಲಾಗುತ್ತದೆ ಎಂದಿದ್ದಾರೆ.

ಎರಡನೇ ಹಂತದ ಲಸಿಕಾ ವಿತರಣೆ ಕಾರ್ಯಕ್ರಮದಲ್ಲಿ ಅಂದಾಜು 27 ಕೋಟಿ ಮಂದಿಯನ್ನು ತಲುಪುವ ಗುರಿ ಹೊಂದಲಾಗಿದೆ.ಭಾರತೀಯ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ನ ಸಲಹೆಗಾರರಾದ ಡಾ. ಸುನೀತಾ ಗರ್ಗ್ ಮಾತನಾಡಿ, ರಾಷ್ಟ್ರೀಯ ಲಸಿಕೆ ವಿತರಣೆ ಕಾರ್ಯಕ್ರಮವು ಹೆಚ್ಚೆಚ್ಚು ಜನರನ್ನು ತಲುಪುವಂತಾಗಬೇಕು. ಆದರೆ ಮೊದಲು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ದೊರೆಯಬೇಕು ಎಂದರು.
ಬಳಿಕ 50 ವರ್ಷ ಮೇಲ್ಪಟ್ಟವರು, ಬಳಿಕ ಅಸ್ವಸ್ಥರಾಗಿರುವವರು ಹೀಗೆ ಬೇರ್ಪಡಿಸಲಾಗುತ್ತದೆ. ದೀರ್ಘಕಾಲದ ಕಾಯಿಲೆಗಳನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಮಧುಮೇಹ, ಹೈಪರ್ಟೆನ್ಷನ್,ಪಾರ್ಶ್ವವಾಯು,ಕ್ಯಾನ್ಸರ್,ಉಸಿರಾಟದ ಸಮಸ್ಯೆ ಹೊಂದಿರುವವರಿಗೆ ಮೊದಲು ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ಭಾರತದಲ್ಲಿ ಕೊವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ಗೆ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಅನುಮತಿ ನೀಡಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications