'ಈ ಬಾರಿ ಬಕ್ರೀದ್ ಗೆ ಮೇಕೆ ಬದಲು ಮೇಕೆ ಚಿತ್ರವಿರುವ ಕೇಕ್ ಕತ್ತರಿಸೋಣ'
ಈ ಸಲದ ಬಕ್ರೀದ್ ಅನ್ನು ಪರಿಸರಸ್ನೇಹಿಯಾಗಿ ಆಚರಿಸಲು ಲಖನೌದ ಜನರು ತಯಾರಿ ನಡೆಸಿದ್ದಾರೆ. ಏನಪ್ಪಾ ಇದು ಪರಿಸರಸ್ನೇಹಿ ಗಣಪತಿ ಅನ್ನೋ ರೀತಿಯಲ್ಲಿ ಧ್ವನಿಸುತ್ತಿದೆಯಲ್ಲಾ ಎಂದು ನಿಮಗೆ ಅನಿಸಿದರೆ ಈ ವರದಿ ಬಹಳ ಆಸಕ್ತಿಕರವಾಗಿದೆ. ಮೇಕೆ ಚಿತ್ರವಿರುವ ಕೇಕ್ ಕತ್ತರಿಸುವ ಮೂಲಕ ಬಕ್ರೀದ್ ಆಚರಿಸಲು ಚಿಂತನೆ ನಡೆದಿದೆಯಂತೆ.
People in #Lucknow are preparing to celebrate an eco-friendly #Bakrid by cutting cakes with a goat image. A buyer at a bakery says, “The custom of sacrificing an animal on Bakrid is not right. I appeal to everyone to celebrate the festival by cutting a cake instead of an animal.” pic.twitter.com/C5EJ73dKM1
— ANI UP (@ANINewsUP) 21 August 2018
ಈ ಬಗ್ಗೆ ಬೇಕರಿಯೊಂದರಲ್ಲಿ ಕೇಕ್ ಖರೀದಿಸುತ್ತಿದ್ದ ಗ್ರಾಹಕರೊಬ್ಬರು ಮಾತನಾಡಿ, ಬಕ್ರೀದ್ ದಿನದಂದು ಪ್ರಾಣಿ ಹತ್ಯೆ ಮಾಡುವುದು ಸರಿಯಲ್ಲ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ: ಕೇಕ್ ಕತ್ತರಿಸುವ ಮೂಲಕ ಎಲ್ಲರೂ ಹಬ್ಬವನ್ನು ಆಚರಣೆ ಮಾಡಿ. ಯಾವುದೇ ಕಾರಣಕ್ಕೂ ಪ್ರಾಣಿ ಬಲಿ ಕೊಡುವುದು ಬೇಡ ಎಂದಿದ್ದಾರೆ.

ಈ ವ್ಯಕ್ತಿಯ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂದು ಕೆಲವರು ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದರೆ, ಇದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಭಾವ ಎಂದು ಕೆಲವರು ಹೇಳಿದ್ದಾರೆ. ಹೇಗಿದ್ದರೂ ಫತ್ವಾ ಬರುತ್ತದೆ ಎಂದು ಕೂಡ ಹೇಳಲಾಗಿದೆ. ಏನಾದರಾಗಲಿ, ಒಬ್ಬ ವ್ಯಕ್ತಿಯ ಆಲೋಚನೆ ಮತ್ತು ಚಿಂತನೆ ಹೀಗಿದೆ ಎಂದು ಹೇಳಿಕೊಳ್ಳುವುದರಲ್ಲಿ ಏನು ತಪ್ಪಿದೆ? ಈ ನಿರ್ಧಾರಕ್ಕೆ ನೀವೇನಂತೀರಿ?
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications