ಸುದ್ದಿ ಸ್ಫೋಟ: ದಿನಸಿಯನ್ನು ಕಳ್ಳತನದಿಂದ ಮಾರಿಕೊಳ್ಳುವ ಬಿಎಸ್ಎಫ್
ಶ್ರೀನಗರ, ಜ. 11: ಗಡಿ ಕಾಯುವ ಸೈನಿಕರಿಗೆ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಬಿಎಸ್ಎಫ್ ಯೋಧ ಯಾದವ್ ವೀಡಿಯೋ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ನೀಡಿದ್ದ ಮಾಹಿತಿಗೆ ಪೂರಕವಾಗಿ ಜಮ್ಮು ಕಾಶ್ಮೀರದ ಗಡಿ ಭಾಗದ ಜನತೆ ಬಿಎಸ್ಎಫ್ ಅಧಿಕಾರಿಗಳೇ ಖುದ್ದಾಗಿ ದಿನಸಿ ಸಾಮಾನು ಮಾರಾಟ ಮಾಡುತ್ತಿರುವ ಸುಳಿವು ನೀಡಿದ್ದಾರೆ.
ಜಮ್ಮು ಕಾಶ್ಮೀರ ಗಡಿ ಭಾಗದಲ್ಲಿರುವ ಕೆಲವಾರು ಜನರು ಬಿಎಸ್ಎಫ್ ಅಧಿಕಾರಿಗಳು ಸರ್ಕಾರದಿಂದ ತಮಗೆ ಸರಬರಾಜಾಗುವ ಅಕ್ಕಿ, ಬೇಳೆ, ಅಡುಗೆ ತೈಲ ಮತ್ತಿತರ ಪಡಿತರ ಸಾಮಾನುಗಳು ಸೇರಿದಂತೆ ತರಕಾರಿಗಳು, ಪೆಟ್ರೋಲು, ಡೀಸೆಲ್ ಗಳನ್ನು ಮಾರುಕಟ್ಟೆ ದರದ ಅರ್ಧದಷ್ಟು ದರಕ್ಕೆ ಮಾರಾಟ ಮಾಡಿಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.

ಶ್ರೀನಗರದ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಹುಮ್ ಹಮಾ ಬಿಎಸ್ಎಫ್ ಕ್ಯಾಂಪಿನ ಬಳಿಯೇ ಇಂಥ ಅವ್ಯವಹಾರಗಳು ನಡೆಯುತ್ತಿವೆ ಎಂದು ಜನರು ಹೇಳುತ್ತಿದ್ದಾರೆ.
ಮಾಹಿತಿ ಕೊಟ್ಟವರಾರೂ ತಮ್ಮ ಹೆಸರನ್ನು ಹೇಳಲು ಇಚ್ಛಿಸಿಲ್ಲ. ಮತ್ತೂ ಕೆಲವರು ಹೆಸರುಗಳನ್ನು ಹೇಳಿದ್ದಾರಾದರೂ ಗೌಪ್ಯತೆ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಇದೇ ಪ್ರದೇಶದಲ್ಲಿ ಪೀಠೋಪಕರಣದ ಅಂಗಡಿ ಇಟ್ಟುಕೊಂಡಿರುವ ವ್ಯಕ್ತಿಯೊಬ್ಬ, ಕ್ಯಾಂಪಿನಲ್ಲಿರುವ ಬಿಎಸ್ಎಫ್ ಅಧಿಕಾರಿಗಳ ಕಛೇರಿ ಬಳಕೆಗಾಗಿ ಆಗಾಗ ಪೀಠೋಪಕರಣಗಳನ್ನು ಕೊಂಡೊಯ್ಯುವ ಅಧಿಕಾರಿಗಳು, ಇದರಲ್ಲಿ ಸಿಕ್ಕಾಬಟ್ಟೆ ಕಮೀಷನ್ ಹೊಡೆಯುತ್ತಾರೆಂದು ಆರೋಪಿಸಿದ್ದಾನೆ.
ಇದನ್ನೇ, ಬಿಎಸ್ಎಫ್ ಯೋಧ ಯಾದವ್ ಹೇಳಲು ಯತ್ನಿಸಿದ್ದರು. ಆದರೆ, ಆತನ ವಿರುದ್ಧವೇ ಹರಿಹಾಯ್ದಿದ್ದ ಬಿಎಸ್ಎಫ್, ಯಾದವ್ ಒಬ್ಬ ಮದ್ಯವ್ಯಸನಿ, ಅವಿಧೇಯ ಹಾಗೂ ಹುಚ್ಚ ಎಂದು ದೂರಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications