ಪೆಪ್ಪರ್ ಸ್ಪ್ರೇ 'ರಾಜ' ಕ್ಷಮೆ ಟ್ರೆಂಡಿಂಗ್ ಇನ್ನೂ ಜಾರಿ
ಬೆಂಗಳೂರು, ಫೆ.14: ಲೋಕಸಭೆಯಲ್ಲಿ ತೆಲಂಗಾಣ ಮಸೂದೆ ಮಂಡನೆ ವೇಳೆ ಪೆಪ್ಪರ್ ಸ್ಪ್ರೇ (ಕರಿಮೆಣಸಿನ ಪುಡಿ) ಎರಚಿ ಜಗದ್ವಿಖ್ಯಾತಿ ಗಳಿಸಿದ್ದ ಸೀಮಾಂಧ್ರ ಸಂಸದ ಎಲ್ ರಾಜಗೋಪಾಲ್ ಅವರು ಕೊನೆಗೂ ಶುಕ್ರವಾರ ಕ್ಷಮೆಯಾಚಿಸಿದ್ದಾರೆ. ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಸದನದಲ್ಲಿ ಗದ್ದಲವೆಬ್ಬಿಸಿ, ಸದನದ ಕಲಾಪಕ್ಕೆ ತಡೆ ಉಂಟುಮಾಡಿದ ಆಂಧ್ರಪ್ರದೇಶದ 17 ಮಂದಿ ಸಂಸದರನ್ನು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ಗುರುವಾರವೇ ಅಮಾನತುಗೊಳಿಸಿದ್ದರು.
ಸಂಸತ್ ನಲ್ಲಿ ಈ ರೀತಿ ನಡೆಯಬಾರದಿತ್ತು. ಆದರೆ ನಾನು ಆತ್ಮರಕ್ಷಣೆಗಾಗಿ ಪೆಪ್ಪರ್ ಸ್ಪ್ರೇ ಬಳಕೆ ಮಾಡಬೇಕಾಯಿತು. ಆದರೆ ನಮ್ಮ ವರ್ತನೆಗೆ ಕ್ಷಮೆಯಾಚಿಸುತ್ತೇವೆ. ಗುರುವಾರ ನಡೆದ ಘಟನೆಯಿಂದ ನಾವೆಲ್ಲರು ತಲೆತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದಾರೆ. ರಾಜ ಕ್ಷಮೆಯಾಚಿಸಿದರೂ ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ಚರ್ಚೆ, ಜೋಕು ನಿಂತಿಲ್ಲ ಗುರುವಾರದ ರೀತಿಯಲ್ಲೇ ಶುಕ್ರವಾರವೂ #PepperSpray ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ನಲ್ಲಿತ್ತು.[ರಾಯಲಸೀಮೆ ಜನತೆ ತತ್ತರ]
ತೆಲಂಗಾಣ ಮಸೂದೆ ಮಂಡನೆಗೆ ಮುಂದಾದಾಗ ವಿಜಯವಾಡದ ಕಾಂಗ್ರೆಸ್ ಸಂಸದ ರಾಜಗೋಪಾಲ್ ಅವರು ಕರಿಮೆಣಸು ಪುಡಿ ಎರಚುವ ಮೂಲಕ ಲೋಕಸಭಾ ಕಲಾಪಕ್ಕೆ ಧಕ್ಕೆಯನ್ನುಂಟು ಮಾಡಿದ್ದರು.ಪೆಪ್ಪರ್ ಸ್ಪ್ರೇ ಬಳಸಿದ ಕಾರಣ ಸಂಸದರು ಕೆಮ್ಮುತ್ತಾ, ತಮ್ಮ ಕಣ್ಣುಗಳನ್ನು ಕರವಸ್ತ್ರದಿಂದ ಮುಚ್ಚುವ ದೃಶ್ಯ ಲೋಕಸಭೆಯಲ್ಲಿ ಕಂಡು ಬಂದಿತ್ತು. ಈ ಸಂದರ್ಭದಲ್ಲಿ ನೂಕುನುಗ್ಗಲು ಸಂಭವಿಸಿತ್ತು. ಇಷ್ಟೆಲ್ಲಾ ಸಮಸ್ಯೆಗಳಿಗೆ ಸೀಮಾಂಧ್ರದ ಸಂಸದರೇ ಕಾರಣ ಎಂಬ ಹಿನ್ನಲೆಯಲ್ಲಿ ಸಂಸದ ಎಲ್ ರಾಜಗೋಪಾಲ್ ಸೇರಿದಂತೆ 17 ಸಂಸದರನ್ನು ಲೋಕಸಭಾದಿಂದ ಅಮಾನತು ಮಾಡಲಾಗಿತ್ತು.

ಸೀಮಾಂಧ್ರ ಭಾಗ ವಿರೋಧ
ಪ್ರತ್ಯೇಕ ತೆಲಂಗಾಣ ರಾಜ್ಯ ಸ್ಥಾಪನೆ ಮಸೂದೆ ಮಂಡನೆಗೆ ಸೀಮಾಂಧ್ರ ಭಾಗದ ಸಂಸದರು ವಿರೋಧ ವ್ಯಕ್ತಪಡಿಸಿ ಪೆಪ್ಪರ್ ಸ್ಪ್ರೇ ಮಾಡಿದ ಘಟನೆ ನಂತರ ಆಂಧ್ರಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ತೆಲಂಗಾಣ ರಾಜ್ಯ ರಚನೆ ಖಂಡಿಸಿ ಕರೆಯಲಾಗಿರುವ ರಾಜ್ಯ ಬಂದ್ ಗೆ ಕೋಸ್ತಾ ಹಾಗೂ ರಾಯಲಸೀಮೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
|
ದೇವರ ದಯೆ ಆತ ಪಿಸ್ತೂಲ್ ತಂದಿರಲಿಲ್ಲ
ಕ್ಷಮೆ ಕೋರಿದರೂ ರಾಜ ಸಮರ್ಥನೆ ಮಾಡಿಕೊಂಡಿದ್ದಾನೆ .ದೇವರ ದಯೆ ಆತ ಪಿಸ್ತೂಲ್ ತಂದಿರಲಿಲ್ಲ
|
ದೆಹಲಿ ಅಸೆಂಬ್ಲಿಗೂ ಸ್ವಲ್ಪ ಸ್ಪ್ರೇ ಮಾಡಿ ಪ್ಲೀಸ್
ದೆಹಲಿ ಅಸೆಂಬ್ಲಿಗೂ ಸ್ವಲ್ಪ ಸ್ಪ್ರೇ ಮಾಡಿ ಪ್ಲೀಸ್ ಕೇಜ್ರಿವಾಲ್ ಹಂಗಾಮ ನೋಡೋಕೆ ಆಗ್ತಾ ಇಲ್ಲ
|
ಎಮರ್ಜೆನ್ಸಿ ಬಂದರೆ ಹೇಗಿರುತ್ತೆ ಗೊತ್ತಾಯ್ತು
ಸದನದಿಂದ 500 ಜನ ಸದಸ್ಯರನ್ನು ತಕ್ಷಣವೇ ಖಾಲಿ ಮಾಡಿಸಿದ ಪೆಪ್ಪರ್ ಸ್ಪ್ರೇ
|
ಪೆಪ್ಪರ್ ಸ್ಪ್ರೇಗೆ ಅಮಾನತು? ಛೇ ಪಾಪ
Axe ಸ್ಪ್ರೇ ಹಾಕಿಕೊಂಡರೆ ಹುಡುಗಿಯರು ಬರ್ತಾರೆ ಆದ್ರೆ, ಪೆಪ್ಪರ್ ಸ್ಪ್ರೇಗೆ ಅಮಾನತು? ಛೇ ಪಾಪ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications