ಕಾಂತಾರ ಹಾಡಿಗೆ ನೃತ್ಯದ ವೇಳೆ ಅವಘಡ: ಎಂಟು ಜನರಿಗೆ ಗಾಯ
ಕಾಂತಾರ ಚಿತ್ರದ ಹಾಡುಗಳು ದೇಶ ವಿದೇಶದಲ್ಲಿ ಕೂಡ ಜನಪ್ರಿಯವಾಗಿವೆ. ಎಲ್ಲೆಡೆ ಕಾಂತಾರ ಚಿತ್ರದ ಹಾಡಿಗೆ ನೃತ್ಯ ಪ್ರದರ್ಶನ ಕೂಡ ನಡೆಯುತ್ತದೆ. ಈಗ ಅಂತಹದ್ದೇ ಒಂದು ಪ್ರದರ್ಶನದ ಸಂದರ್ಭದಲ್ಲಿ ಅವಘಡ ನಡೆದಿದೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವೈಎಸ್ಆರ್ ಕಡಪ ಜಿಲ್ಲೆಯ ಯರ್ರಗುಂಟ್ಲಾದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಾಂತಾರ ಚಿತ್ರದ ಹಾಡಿಗೆ ನೃತ್ಯ ಮಾಡುವ ಸಂದರ್ಭದಲ್ಲಿ ಬೆಂಕಿಯಲ್ಲಿ ಸಿಲುಕಿ ಮಕ್ಕಳು ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದಾರೆ.

ಕೆಲವು ಯುವಕರು ಮತ್ತು ಮಕ್ಕಳಿಂದ ಜನಪ್ರಿಯ ಕಾಂತಾರ ಗೀತೆಯನ್ನು ಮರುಸೃಷ್ಟಿಸುವ ಉತ್ಸಾಹ ಅವಘಡದಲ್ಲಿ ಕೊನೆಯಾಗಿದೆ. ಕಾಂತಾರ ಚಿತ್ರದ ಪಾತ್ರಧಾರಿಯಂತೆ ವೇಷ ಧರಿಸಿದ ಕಲಾವಿದರು ಸಿನಿಮಾ ರೀತಿಯ ಎಫೆಕ್ಟ್ ಅನ್ನು ಸೃಷ್ಟಿಸಲು ನಿರ್ಧರಿಸಿದರು. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕುಣಿಯಲು ನಿರ್ಧರಿಸಿದ್ದರು.
ಆದರೆ, ಜ್ವಾಲೆಯು ಎತ್ತರಕ್ಕೆ ಏರಿತು ಮತ್ತು ಜ್ವಾಲೆಯಿಂದ ಹೊರಸೂಸುವ ಶಾಖದಿಂದಾಗಿ ಕಲಾವಿದರು ತೊಂದರೆ ಎದುರಿಸಿದರು ಮತ್ತು ನೃತ್ಯ ಮಾಡಲು ಸಾಧ್ಯವಾಗಲಿಲ್ಲ. ಬದಲಾಗಿ, ಅವರಿಗೆ ಸುಟ್ಟ ಗಾಯಗಳಾದವು. ಇಬ್ಬರು ಕಲಾವಿದರು ಸೇರಿ ಆರು ಮಕ್ಕಳು ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಪೋಲಿಸರ ವೈಫಲ್ಯ ಕಾರಣ
ಗಣೇಶ ವಿಸರ್ಜನೆ ವೇಳೆ ಹಲವು ನಿಯಮಗಳನ್ನು ಹಾಕಿಕೊಂಡು ಅನುಮತಿ ನೀಡುವ ಪೊಲೀಸರು ಮೆರವಣಿಗೆ ವೇಳೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕಣ್ಣೆದುರೇ ರಾತ್ರಿ ಮೆರವಣಿಗೆ ನಡೆಯುತ್ತಿದ್ದರೂ ಪೊಲೀಸರು ತಲೆಕೆಡಿಸಿಕೊಂಡಿಲ್ಲ. ಅದರಿಂದ ಈ ದುರಂತ ಸಂಭವಿಸಿದೆ ಎನ್ನುತ್ತಾರೆ ಸ್ಥಳೀಯರು.
ಪೊಲೀಸರ ಕಣ್ಣೆದುರೇ ಪೆಟ್ರೋಲ್ ಕ್ಯಾನ್ ತೆಗೆದುಕೊಂಡು ಬೆಂಕಿ ಹಚ್ಚಲು ಯತ್ನಿಸುತ್ತಿದ್ದರೂ ಪೊಲೀಸರು ತಡೆಯುವ ಪ್ರಯತ್ನ ಮಾಡಲಿಲ್ಲ ಎನ್ನಲಾಗಿದೆ. ಪೊಲೀಸರು ಮೊದಲೇ ಸ್ಪಂದಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications