ತಮಿಳುನಾಡು: ಪೆರಿಯಾರ್ ವಿಗ್ರಹ ಧ್ವಂಸ, ಇಬ್ಬರ ಬಂಧನ
ವೆಲ್ಲೂರ್, ಮಾರ್ಚ್ 07: ಸಾಮಾಜಿಕ ಹೋರಾಟಗಾರ, ಪೆರಿಯಾರ್ ಎಂದೇ ಪ್ರಸಿದ್ಧರಾದ ಇವಿಆರ್ ರಾಮಸಾಮಿ ಅವರ ವಿಗ್ರಹವನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಧ್ವಂಸಗೊಳಿಸಲಾಗಿದ್ದು, ಭಾರೀ ವಿವಾದ ಸೃಷ್ಟಿಸಿದೆ.
ಕುಡಿದ ಮತ್ತಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಗಾಜುಗಳನ್ನು ಒಡೆದು, ನಂತರ ಮೂರ್ತಿಯ ಮೂಗನ್ನು ಧ್ವಂಸಗೊಳಿಸಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.
#TamilNadu : Periyar statue inside Tirupattur corporation office vandalised in Vellore district. Two persons arrested by Police. pic.twitter.com/F8ufRU121e
— ANI (@ANI) March 7, 2018
ತ್ರಿಪುರದಲ್ಲಿ ನಿನ್ನೆ ರಷ್ಯಾದ ಕ್ರಾಂತಿಕಾರಿ ಲೆನಿನ್ ಅವರ ವಿಗ್ರಹವನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಇದಾದ ನಂತರ ಫೆಸ್ ಬುಕ್ ನಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಎಚ್ ರಾಜಾ, 'ಲೆನಿನ್ ಯಾರು? ಅವನಿಗೂ ಭಾರತಕ್ಕೂ ಏನು ಸಂಬಂಧ? ಭಾರತಕ್ಕೂ ಕಮ್ಯುನಿಸ್ಟ್ ಗೂ ಏನು ಸಂಬಂಧ? ಇಂದು ತ್ರಿಪುರದಲ್ಲಿ ಲೆಲಿನ್ ವಿಗ್ರಹ ನಾಶ ಮಾಡಲಾಗಿದೆ. ನಾಳೆ ತಮಿಳು ನಾಡಿನ ಇವಿ ಆರ್ ರಾಮಸಾಮಿ' ಎಂದು ಬರೆದುಕೊಂಡಿದ್ದರು!

ಈ ಸ್ಟೇಟಸ್ ಹಾಕಿದ ಒಂದೇ ಗಂಟೆಯಲ್ಲಿ ಈ ಘಟನೆ ನಡೆದಿದ್ದು, ವಿವಾದ ಸೃಷ್ಟಿಸಿದೆ. ಎಚ್.ರಾಜಾ ಅವರನ್ನು ಈ ಕೂಡಲೇ ಬಂಧಿಸಿ ಎಂದು ಡಿಎಂ ಕೆ ಮುಖ್ಯಸ್ಥ ಸ್ಟಾಲಿನ್ ಒತ್ತಾಯಿಸಿದ್ದಾರೆ. ಆದರೆ ಈ ಪೋಸ್ಟ್ ಅನ್ನು ನಾನು ಹಾಕಿಲ್ಲ, ಬೇರೆ ಯಾರೋ ನನ್ನ ಖಾತೆಯಿಂದ ಪೋಸ್ಟ್ ಮಾಡಿದ್ದಾರೆ ಎಂದು ಎಚ್ ರಾಜಾ ಸಮಜಾಯಿಷಿ ನೀಡಿದ್ದಾರೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications