New Rule: ಏಪ್ರಿಲ್ ತಿಂಗಳಿನಿಂದಲೇ 15 ವರ್ಷದ ಹಳೆಯ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪೂರೈಕೆ ಬಂದ್
ವಾಹನಗಳಿಗೆ ಸಂಬಂಧಪಟ್ಟಂತೆ ಆಗಾಗ ಹೊಸ ನಿಯಮಗಳು ಜಾರಿಯಾಗುತ್ತಲೇ ಇರುತ್ತವೆ. ಹಾಗೆಯೇ ಇದೀಗ ಹಳೇ ವಾಹನಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಗೆ ನಿರ್ಬಂಧ ಹೇರಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗದ್ರೆ ಈ ನಿಯಮ ಎಲ್ಲಿ ಜಾರಿಯಾಗಲಿದೆ ಹಾಗೂ ಕಾರಣ ಏನ್ನುವ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಷ್ಟ್ರ ರಾಜಧಾನಿ ದೆಹಲಿಯಯಲ್ಲು ಹಳೇ ವಾಹನಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆ ನಿರ್ಬಂಧ ಸೇರಿದ ಎಲ್ಲಾ ಬಹುಮಹಡಿ ಕಟ್ಟಡಗಳು, ಹೋಟೆಲ್ಗಳು ಮತ್ತು ಕಮರ್ಷಿಯಲ್ ಕಾಂಪ್ರೆಕ್ಸ್ಗಳಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಅಳವಡಿಬೇಕೆಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಘೋಷಣೆ ಮಾಡಿದ್ದಾರೆ.

ನಾವು ಪೆಟ್ರೋಲ್ ಪಂಪ್ಗಳಲ್ಲಿ ಗ್ಯಾಜೆಟ್ಗಳನ್ನು ಸ್ಥಾಪಿಸುತ್ತಿದ್ದೇವೆ. ಅದು 15 ವರ್ಷಕ್ಕಿಂತ ಹಳೇ ವಾಹನಗಳನ್ನು ಗುರುತಿಸುತ್ತದೆ. ಅವುಗಳಿಗೆ ಯಾವುದೇ ಪೆಟ್ರೋಲ್ ಅಥವಾ ಡೀಸೆಲ್ ಪೂರೈಸುವುದಿಲ್ಲ ಎಂದು ನವದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಎದುರಿಸಲು ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳನ್ನು ರಸ್ತೆಗಳಲ್ಲಿ ಅಡ್ಡಾಡುವುದನ್ನು ನಿರ್ಬಂಧಿಸುವ ನೀತಿಯನ್ನು ಹೊಂದಿದೆ. 2021ರ ಆದೇಶದಲ್ಲಿ 2022ರ ಜನವರಿ 1ರ ನಂತರ ರಸ್ತೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಂಡು ಸ್ಕ್ರ್ಯಾಪ್ಯಾರ್ಡ್ಗೆ ಕಳುಹಿಸಲಾಗುವುದು ಎಂದು ಹೇಳಲಾಗಿತ್ತು.
ಆದ್ದರಿಂದ ಇದೇ ಮಾರ್ಚ್ 31, 2025ರ ಬಳಿಕ ದೆಹಲಿ ಸರ್ಕಾರವು ನಗರದಾದ್ಯಂತದ ಇಂಧನ ಕೇಂದ್ರಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ಪೂರೈಸುವುದನ್ನು ನಿಲ್ಲಿಸಲಿದೆ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಘೋಷಣೆ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಎದುರಿಸಲು ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ, ವಾಹನ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಶೇಕಡ 90ರಷ್ಟು ಸಾರ್ವಜನಿಕ ಸಿಎನ್ಜಿ ಬಸ್ಗಳನ್ನು ಡಿಸೆಂಬರ್ 2025ರ ವೇಳೆಗೆ ಸ್ಥಗಿತಗೊಳಿಸಲಾಗುವುದು. ಅವುಗಳನ್ನು ಎಲೆಕ್ಟ್ರಿಕ್ದ್ ಬಸ್ಗಳಾಗಿ ಪರಿವರ್ತಿಸಲಾಗುವುದು. ದೆಹಲಿ ಸರ್ಕಾರವು ಈ ನಿರ್ಧಾರದ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಿದೆ ಎಂದು ತಿಳಿದುಬಂದಿದೆ.
ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯದಿಂದ ಗಾಲಿಯ ಗುಣಮಟ್ಟ ಹದಗೆಡುತ್ತಿದೆ. ಇದರಿಂದ ವಾಹನ ಸವಾರರಿಗೆ ಅಡೆತಡೆ ಉಂಟಾಗುತ್ತಿದೆ. ಅಲ್ಲದೆ, ಇಲ್ಲಿನ ಜನರು ಕೂಡ ಕಳಪೆ ಮಟ್ಟದ ಗಾಳಿಯಿಂದ ಬೇಸತ್ತು ಹೋಗಿದ್ದಾರೆ. ಮಳೆ ಬಂದಾಗ ಮಾತ್ರ ವಾಯುಮಾಲಿನ್ಯ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬರುತ್ತದೆ. ಇಲ್ಲದಿದ್ದರೆ ಅದೇ ಆಡಿದ್ದೇ ಆಟ ಎಂಬಂತೆ ಗಾಳಿಯ ಗುಣಮಟ್ಟ ಕಳಪೆಯಾಗಿರಲಿದೆ.
ದೆಹಲಿಯಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಲ ಇದೆ. ಇದು ಕೂಡ ವಾಯು ಮಾಲಿನ್ಯ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ ಎಂದರೆ ತಪ್ಪಾಗಲಾರದು. ಅದರಲ್ಲೂ ಹಳೇ ವಾಹನಗಳ ಗಾಳಿ ಗುಣಮಟ್ಟವನ್ನು ಆಗಾಗ ಪರಿಶೀಲನೆ ಮಾಡಿಸದೇ ರಸ್ತೆಗೆ ಇಳಿಸುವುದು ಕೂಡ ವಾಯುಮಾಲಿನ್ಯಕ್ಕೆ ಕಾರಣವಾಗಿದೆ.
ಇದೀಗ ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಜೊತೆ ಗಾಳಿಯ ಗುಣಮಟ್ಟ ಕೂಡ ಕಳಪೆಯಾಗುತ್ತಿದ್ದು, ಇದರಿಂದ ವಾಹನ ಸವಾರರಿಗೆ ಅಡೆತಡೆ ಆಗುತ್ತಲೇ ಇದೆ. ಇನ್ನೂ ಒಂದು ಮಟ್ಟಿದೆ ಸದ್ಯ ಮಳೆಯಾಗುತ್ತಿರುವ ಹಿನ್ನೆಲೆ ಹಲವೆಡೆ ವಾಯು ಮಾಲಿನ್ಯ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಾಗಂತ ಪೂರ್ತಿ ಕಡಿಮೆಯಾಗಿಲ್ಲ. ದೇಶದಲ್ಲೇ ಅತೀ ಹೆಚ್ಚು ವಾಯುಮಾಲಿನ್ಯದಿಂದ ಕೂಡಿರುವ ನಗರಗಳ ಸಾಲಿನಲ್ಲಿ ನವದೆಹಲಿ ಅಗ್ರಸ್ಥಾನದಲ್ಲಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications