ಹಣದುಬ್ಬರ ಕುಸಿತ, ಪೆಟ್ರೋಲ್ ಬೆಲೆ 1 ರೂ.ಇಳಿಕೆ
ನವದೆಹಲಿ, ಅ. 15 : ನಿರೀಕ್ಷೆಯಂತೆ ಪೆಟ್ರೋಲ್ ದರದಲ್ಲಿ ಕಡಿತ ಮಾಡಲಾಗಿದೆ. ಪೆಟ್ರೋಲ್ ಲೀಟರ್ಗೆ 1 ರೂ. ಇಳಿಕೆಯಾಗಿದ್ದು ಡಿಸೇಲ್ ದರದಲ್ಲಿ ಯಾವುದೇ ಇಳಿಕೆಯಾಗಿಲ್ಲ.
ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ನಿರಂತರವಾಗಿ ಕಡಿಮೆಯಾದ ಕಾರಣ ಪೆಟ್ರೋಲ್ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ.['ಮಹಾ' ಚುನಾವಣೆ ಫಲಿತಾಂಶದ ನಂತರ ತೈಲ ಇಳಿಕೆ]

ಹೊಸ ದರದ ಅನ್ವಯ ಬೆಂಗಳೂರು ನಾಗರಿಕರು ಲೀಟರ್ ಪೆಟ್ರೋಲ್ಗೆ 73 ರೂ. ನೀಡಬೇಕಿದೆ. ಮಹಾರಾಷ್ಟ್ರ ಮತ್ತು ಹರ್ಯಾಣ ಚುನಾವಣೆ ಫಲಿತಾಂಶದ ನಂತರ ಡಿಸೇಲ್ ಬೆಲೆ ಸಹ ಇಳಿದರೆ ಆಶ್ಚರ್ಯವಿಲ್ಲ.
ಇರಾಕ್ ಮತ್ತು ಲಿಬಿಯಾ ತಮ್ಮ ಸಾಮರ್ಥ್ಯಕ್ಕೂ ಮೀರಿ ತೈಲವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಚೀನಾ ಆರ್ಥಿಕ ವ್ಯವಸ್ಥೆಯ ದಿಢೀರ್ ಬೆಳವಣಿಗೆ, ರಷ್ಯಾ ಮತ್ತು ಅಮೆರಿಕದ ಇಬ್ಬಗೆಯ ನೀತಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತಕ್ಕೆ ಕಾರಣವಾಗಿತ್ತು.[ಐದು ವರ್ಷದಲ್ಲೇ ಅತಿ ಕಡಿಮೆ ಹಣದುಬ್ಬರ ದಾಖಲು]
ಅಸ್ತಿತ್ವ ಕಾಯ್ದುಕೊಂಡ ಭಾರತೀಯ ರೂಪಾಯಿ, ಹಣದುಬ್ಬರ ಇಳಿಕೆ, ಮಾರುಕಟ್ಟೆಯಲ್ಲಿ ಹೆಚ್ಚಿದ ಬಂಡವಾಳ ವಹಿವಾಟು, ರಿಸರ್ವ್ ಬ್ಯಾಂಕ್ ಕ್ರಮಗಳು ಪೆಟ್ರೋಲ್ ಬೆಲೆ ಇಳಿಕೆಗೆ ಕಾರಣವಾದವು. ಅಲ್ಲದೇ ತೈಲವನ್ನು ಅಂತರಾಷ್ಟ್ರೀಯ ಮಾರುಕಟ್ಟೆಗೆ ಬಿಡುಗಡೆ ಮಾಡುವ ರಾಷ್ಟ್ರಗಳ ನಡುವೆ ಹೆಚ್ಚಿದ ಪೈಪೋಟಿಯೂ ದರ ಇಳಿಕೆಗೆ ಕಾರಣವಾಯಿತು.
ಕಳೆದ ಒಂದೂವರೆ ತಿಂಗಳಲ್ಲಿ ಒಟ್ಟು ನಾಲ್ಕು ಸಾರಿ ಪೆಟ್ರೋಲ್ ದರ ಇಳಿಕೆಯಾಗಿದೆ. 2014ರ ಆಗಸ್ಟ್ 1 ರಂದು ಲೀಟರ್ಗೆ 79 ರೂ ನೀಡುತ್ತಿದ್ದ ಬೆಂಗಳೂರು ನಾಗರಿಕ ಈಗ 73 ರೂ. ನೀಡಿದರೆ ಸಾಕು. ಅಂದರೆ 6 ರೂಪಾಯಿಗಳಷ್ಟು ಇಳಿಕೆಯಾಗಿದೆ.
-
ಮಧ್ಯಪ್ರಾಚ್ಯ ಯುದ್ಧ: ಗ್ಯಾಸ್ ಸಿಲಿಂಡರ್, ಪೆಟ್ರೋಲ್ - ಡಿಸೇಲ್ ಸೇರಿದಂತೆ ಪ್ರಮುಖ ವಸ್ತುಗಳ ಬಗ್ಗೆ ಕೇಂದ್ರದಿಂದ ಮಹತ್ವದ ಆದೇಶ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications