ಪಿಎಫ್ಐ ಸಂಘಟನೆಗೆ ವಿದೇಶದಿಂದ 100 ಕೋಟಿ ರೂ ರವಾನೆ
ನವದೆಹಲಿ, ಫೆಬ್ರವರಿ 11: ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ವಿದ್ಯಾರ್ಥಿ ಘಟಕ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (ಸಿಎಫ್ಐ) ಐವರು ಸದಸ್ಯರ ವಿರುದ್ಧ ಲಕ್ನೋದ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ.
'ಗಲ್ಫ್ ದೇಶಗಳಲ್ಲಿ ಇರುವ ಪಿಎಫ್ಐ ಸದಸ್ಯರೊಂದಿಗೆ ಸೇರಿಕೊಂಡಿದ್ದ ಸಿಎಫ್ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಎ ರಾವುಫ್ ಶೆರೀಫ್, ಉದ್ಯಮ ವಹಿವಾಟಿನ ಪಾವತಿಯ ನೆಪದಲ್ಲಿ ಪಿಎಫ್ಐ ಸಂಗ್ರಹಿಸಿದ ಹಣವನ್ನು ವರ್ಗಾಯಿಸುವಂತೆ ಮಾಡುತ್ತಿದ್ದ. ವಿಭಿನ್ನ ಹಂತಗಳಲ್ಲಿ ಈ ಹಣವನ್ನು ರವಾನಿಸಲಾಗುತ್ತಿತ್ತು. ಬಳಿಕ ಅದು ಶೆರೀಫ್ ಮತ್ತು ಪಿಎಫ್ಐ ಹಾಗೂ ಸಿಎಫ್ಐನ ಆತನ ಸಹವರ್ತಿಗಳಿಗೆ ತಲುಪುತ್ತಿತ್ತು' ಎಂದು ಇ.ಡಿ ಹೇಳಿದೆ.
ಹಲವು ವರ್ಷಗಳಿಂದ ಪಿಎಫ್ಐನ ಖಾತೆಗಳಲ್ಲಿ 100 ಕೋಟಿಗೂ ಅಧಿಕ ರೂಪಾಯಿ ಹಣ ಜಮೆಯಾಗಿದೆ. ಹೆಚ್ಚಿನ ಪ್ರಮಾಣದ ಹಣ ನಗದು ರೂಪದಲ್ಲಿ ಜಮೆಯಾಗಿದೆ. ಈ ನಿಧಿಗಳ ಮೂಲ ಹಾಗೂ ಇತರೆ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಮದು ಅದು ವಿವರಿಸಿದೆ.

ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳು ಭಾರತದ ವಿವಿಧ ಭಾಗಗಳಲ್ಲಿ ಅಪರಾಧ ಚಟುವಟಿಕೆಗಳನ್ನು ನಡೆಸಲು, ಸಿಎಎ ವಿರೋಧಿ ಪ್ರತಿಭಟನೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಹಿಂಸಾಚಾರ ಸೃಷ್ಟಿಸಲು ಈ ಹಣವನ್ನು ಬಳಸಿವೆ. ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ವಿರುದ್ಧದ ಪ್ರತಿಭಟನೆ ವೇಳೆ ಕೋಮು ಸಾಮರಸ್ಯ ಕದಡಲು ಪಿಎಫ್ಐ ಮತ್ತು ಸಿಎಫ್ಐ ಸದಸ್ಯರು ಹತ್ರಾಸ್ಗೆ ಭೇಟಿ ನೀಡಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications