ಭಾರತಕ್ಕೆ ಪಿಫೈಜರ್ ಕೊರೊನಾ ಲಸಿಕೆಯ ಅಗತ್ಯವಿಲ್ಲ: ಹರ್ಷವರ್ಧನ್
ನವದೆಹಲಿ, ನವೆಂಬರ್ 24: ಭಾರತಕ್ಕೆ ಪಿಫೈಜರ್ ಕೊರೊನಾ ಲಸಿಕೆಯ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ದೇಶದಲ್ಲಿರುವ ಇತರೆ ಕೊರೊನಾ ಲಸಿಕೆಗಳು ಭರವಸೆಯ ಫಲಿತಾಂಶವನ್ನು ನೀಡುತ್ತಿದೆ ಹೀಗಾಗಿ ಪಿಫೈಜರ್ ಕೊರೊನಾ ಲಸಿಕೆಯ ಅಗತ್ಯ ದೇಶಕ್ಕಿಲ್ಲ ಎಂದಿದ್ದಾರೆ.
ವರದಿ ಪ್ರಕಾರ ಬಯೋ ಎನ್ ಟೆಕ್ನ ಈ ಪಿಫೈಜರ್ ಕೊರೊನಾ ಲಸಿಕೆಗೆ ಯುಎಸ್ ರೆಗ್ಯುಲೇಟರಿ ಅಥಾರಿಟಿ ಇನ್ನು ಕೂಡ ಒಪ್ಪಿಗೆ ನೀಡಿಲ್ಲ. ಹಾಗಿದ್ದಾಗ ಆ ಲಸಿಕೆಯನ್ನು ಒಪ್ಪಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಕನಿಷ್ಠ ಐದು ಕೊರೊನಾ ಲಸಿಕೆ ಅಭ್ಯರ್ಥಿಗಳಿದ್ದಾರೆ
ಭಾರತದಲ್ಲಿ ಕನಿಷ್ಠ ಐದು ಕೊರೊನಾ ಲಸಿಕೆ ಅಭ್ಯರ್ಥಿಗಳಿದ್ದಾರೆ, ಸಾಕಷ್ಟು ಲಸಿಕೆಗಳು ಮಾನವ ಪ್ರಯೋಗದಲ್ಲಿದೆ. ಯಾವ ಕೊರೊನಾ ಲಸಿಕೆಗಳು ಎರಡು ಹಾಗೂ ಮೂರನೇ ಹಂತವನ್ನು ತಲುಪುತ್ತದೆಯೋ ಅದು ಬಳಕೆಗೆ ಯೋಗ್ಯವೆಂದು ಅರ್ಥ.

ಆಕ್ಸ್ಫರ್ಡ್ ಲಸಿಕೆಯ ಮೂರನೇ ಹಂತದ ಪ್ರಯೋಗ
ಸೆರಂ ಇನ್ಸ್ಟಿಟ್ಯೂಟ್ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಆಸ್ಟ್ರಾಜೆನೆಕಾ ಲಸಿಕೆಯ ಮೂರನೇ ಹಂತದ ಪ್ರಯೋಗವನ್ನು ನಡೆಸುತ್ತಿದೆ. ಇನ್ನು ಭಾರತ್ ಬಯೋಟೆಕ್ ಹಾಗೂ ಐಸಿಎಂ ಆರ್ ಅಭ್ಯರ್ಥಿ ಕೋವ್ಯಾಕ್ಸಿನ್ ಪ್ರಯೋಗವು ಕೂಡ ನಡೆಯುತ್ತಿದೆ. ಯಾವುದೇ ಸಂದರ್ಭದಲ್ಲಾದರೂ ಎರಡನೇ ಹಂತದ ವರದಿ ಬರಬಹುದು.

ಸ್ಪುಟ್ನಿಕ್ V ಲಸಿಕೆ ಪ್ರಯೋಗ
ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ಪ್ರಯೋಗವನ್ನು ಭಾರತದ ರೆಡ್ಡೀಸ್ ಲ್ಯಾಬೊರೇಟರಿಯಲ್ಲಿ ಆರಂಭಿಸಲಾಗುತ್ತಿದೆ. ಈ ಲಸಿಕೆಯು ಕೂಡ ಕೊರೊನಾ ವಿರುದ್ಧ ಹೋರಾಡಬಹುದು ಎಂಬ ಭರವಸೆಯನ್ನು ಮೂಡಿಸಿದೆ.
Recommended Video

ಆಸ್ಟ್ರಾಜೆನೆಕಾ ಲಸಿಕೆ ಶೇ.90ರಷ್ಟು ಸುರಕ್ಷಿತ
ಆಕ್ಸ್ಫರ್ಡ್ ಕೊರೊನಾ ಲಸಿಕೆ ಶೇ.90ರಷ್ಟು ಪರಿಣಾಮಕಾರಿ ಎಂದು ಸೆರಂ ಇನ್ಸ್ಟಿಟ್ಯೂಟ್ ಹೇಳಿದೆ.ಜೊತೆಗೆ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳೂ ಕಂಡು ಬಂದಿಲ್ಲ ಎಂದು ಕಂಪನಿ ತಿಳಿಸಿದೆ. ಮೊದಲಿಗೆ ಒಂದು ಡೋಸ್ ನೀಡಿ ನಂತರ ಒಂದು ತಿಂಗಳ ಬಳಿಕ ಅರ್ಧ ಡೋಸ್ ನೀಡಿದಾಗ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಲಸಿಕೆಯು ಶೇ. 90ರಷ್ಟು ಯಶಸ್ವಿಯಾಗಿದೆ.
ಲಸಿಕೆಯ ಮಾನವರ ಮೇಲಿನ ಪರೀಕ್ಷೆಯ ಮಧ್ಯಂತರ ದತ್ತಾಂಶಗಳನ್ನು ಸಂಸ್ಥೆಯ ಸೋಮವಾರ ಬಿಡುಗಡೆ ಮಾಡಿದೆ. ಬ್ರಿಟನ್ ಮತ್ತು ಬ್ರೆಜಿನ್ನಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಇದು ಋಜುವಾತಾಗಿದೆ ಎಂದು ಸಂಸ್ಥೆ ತಿಳಿಸಿದೆ. ಜೊತೆಗೆ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ಪರಿಣಾಮಗಳೂ ಕಾಣಿಸಿಕೊಂಡಿಲ್ಲ ಎಂದು ಹೇಳಿದೆ.
ಕೊರೊನಾದ ವಿರುದ್ಧ ಲಸಿಕೆಯು ತುಂಬಾ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಆಸ್ಟ್ರಾಝೆನಿಕಾ ಸಿಇಒ ಪಾಸ್ಕಲ್ ಸಾರಿಯಟ್ ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications