ಚಿತ್ರ ಸಂಪುಟ: ಶನಿವಾರದ ಚೂರುಪಾರು ಸುದ್ದಿಗಳ ಸಂಕ್ಷಿಪ್ತ ಮಾಹಿತಿ
ಶನಿವಾರದ ಸುದ್ದಿಗಳಲ್ಲಿ ಮಿಸ್ ಆದ ಕೆಲವಾರು ಸುದ್ದಿಗಳನ್ನು ಇಲ್ಲಿ ನೀಡಲಾಗಿದೆ. ಚಿತ್ರ ಸಹಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಶನಿವಾರದ ಸುದ್ದಿ ಸಂತೆಯಲ್ಲಿ ಸಾಕಷ್ಟು ಸುದ್ದಿಯಾಗಿದ್ದು ಮಧ್ಯಪ್ರದೇಶದ ರೈತರ ಪ್ರತಿಭಟನೆ, ಅಲ್ಲಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು ಅನ್ನ ಸತ್ಯಾಗ್ರಹಕ್ಕೆ ಕೂತಿದ್ದು ಸುದ್ದಿಯಾದವು.
ಇಲ್ಲಿ ರಾಜ್ಯದಲ್ಲಿ ಕನ್ನಡ ಚಳುವಳಿಗಾರ ವಾಟಾಳ್ ನಾಗರಾಜ್ ಅವರು ಜೂನ್ 12ರಂದು ಕರೆಕೊಟ್ಟಿದ್ದ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣೆ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ವಿರೋಧ ವ್ಯಕ್ತಪಡಿಸಿದ್ದು ಕೊಂಚ ಮಟ್ಟಿಗೆ ಸುದ್ದಿಯಾಯಿತು. ಅದಕ್ಕೆ ಹೋಲಿಸಿದರೆ ಕೊಂಚ ಸದ್ದು ಮಾಡಿದ್ದು ನಟಿ ಪಂಚಮಿ ಹಾಗೂ ಅನ್ಸಾರಿ ಪ್ರೇಮ ಪ್ರಕರಣವನ್ನು ಮಾಧ್ಯಮವೊಂದು ವರದಿ ಮಾಡಿದ್ದು.
ಇನ್ನುಳಿದಂತೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಂಥಾ ಮಹತ್ವದ ಸುದ್ದಿಗಳೇನಿರಲಿಲ್ಲ. ಅನಿಲ್ ಕುಂಬ್ಳೆ ಅವರನ್ನು ಟೀಂ ಇಂಡಿಯಾ ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂಬುದು, ಜೂನ್ 11ರಂದು ನಡೆಯಲಿರುವ ಭಾರತ- ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯದ ಮುನ್ನೋಟ, ಬದ್ರಿನಾಥ್ ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಒಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಇಂಜಿನಿಯರ್ ಸಾವನ್ನಪ್ಪಿದ್ದು ಸುದ್ದಿಯಾಯಿತು.
ಇನ್ನುಳಿದಂತೆ, ಕೆಲವಾರು ಚೂರು ಪಾರು ಸುದ್ದಿ, ಮಾಹಿತಿಗಳ ಬಗೆಗಿನ ಚಿತ್ರ ಸಹಿತ ಸಂಕ್ಷಿಪ್ತ ವಿವರಣೆ ಇಲ್ಲಿದೆ.

ಡ್ಯಾಮೇಜ್ ಕಂಟ್ರೋಲ್ ಕಸರತ್ತು?
ಮಧ್ಯಪ್ರದೇಶದ ಮಂದಸೌರ್ ಗ್ರಾಮದಲ್ಲಿ ನಡೆದ ಗೋಲಿಬಾರ್ ನಲ್ಲಿ ರೈತರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಅವರು, ಮಂದಸೌರ್ ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಕಾಮಾಕ್ಯ ದೇಗುಲ ದರ್ಶನ
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ಗುವಾಹಟಿಯ ಕಾಮಾಕ್ಯ ದೇಗುಲದಲ್ಲಿ ಪೂಜೆ ಸಲ್ಲಿಸಿದರು.

ಚಿತ್ರೀಕರಣದಲ್ಲಿ ನೇಹಾ-ಪರಿಣಿತಿ
ಬಾಲಿವುಡ್ ನಟಿಯರಾದ ಪರಿಣಿತಿ ಚೋಪ್ರಾ ಹಾಗೂ ನೇಹಾ ಧೂಪಿಯಾ ಅವರು ನೇಹಾ ಧೂಪಿಯಾ ನಡೆಸಿಕೊಡುವ ನೋ ಫಿಲ್ಟರ್ ನೇಹಾ ಸೀಸನ್ 2 ಎಂಬ ಕಾರ್ಯಕ್ರಮದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಯೋಗ ದಿನಾಚರಣೆಯ ತಯಾರಿ
ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಕಲಾವಿದನೊಬ್ಬ ಯೋಗ ಚಿತ್ರಗಳನ್ನು ರಚಿಸುತ್ತಿರುವುದು.

ಸ್ವಚ್ಛ ಶೌಚ ಅಭಿಯಾನದಲ್ಲಿ ಭಾಗಿ
ಬಾಲಿವುಡ್ ನಟ ಸಲ್ಮಾನ್ ಖಾನ್, ಮುಂಬೈ ಮಹಾ ನಗರ ಪಾಲಿಕೆಯ ಸ್ವಚ್ಛ ಶೌಚ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications