ಟ್ರೆಂಡಿಂಗ್ : ರಾಜಸ್ಥಾನದ ಬಿಜೆಪಿ ಶಾಸಕನ ಮೂತ್ರ ವಿಸರ್ಜನೆ
ಜೈಪುರ, ಅಕ್ಟೋಬರ್ 08: ಒಂದು ಕಡೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಚ್ ಭಾರತ್ ಗಾಗಿ ಅಭಿಯಾನ ನಡೆಸುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಶಾಸಕರೊಬ್ಬರೂ ಬಯಲಿನಲ್ಲಿ ಕುಳಿತು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ ಎಂಬ ಒಕ್ಕಣೆಯೊಂದಿಗೆ ರಾಜಸ್ಥಾನದ ಶಾಸಕರೊಬ್ಬರ ಮೂತ್ರ ವಿಸರ್ಜನೆ ಚಿತ್ರ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ವಿಷಯವಾಗಿದೆ.
ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಚುನಾವಣಾ ಪ್ರಚಾರದ ಪೋಸ್ಟರ್ ಪಕ್ಕದಲ್ಲೇ ಕುಳಿತ ಶಾಸಕರು ಮೂತ್ರ ವಿಸರ್ಜನೆ ಮಾಡುತ್ತಿರುವ ಚಿತ್ರ ಟ್ವಿಟ್ಟರ್ ನಲ್ಲಿ ಮೊದಲಿಗೆ ಕಾಣಿಸಿಕೊಂಡಿದೆ.
ರಾಜಸ್ಥಾನದ ಬೀಜ ನಿಗಮದ ನಿರ್ದೇಶಕರಾಗಿರುವ ಶಂಭು ಸಿಂಗ್ ಖೇತಾಸರ್ ಅವರು ಮೂತ್ರ ವಿಸರ್ಜನೆ ಮಾಡಿ ಸಿಕ್ಕಿಬಿದ್ದ ರಾಜಕಾರಣಿಯಾಗಿದ್ದಾರೆ.

' ನಾನು ಮೂತ್ರ ವಿಸರ್ಜನೆ ಮಾಡುವ ಚಿತ್ರ ಎಲ್ಲೆಡೆ ಹರಡುತ್ತಿದೆ ಎಂಬ ಸುದ್ದಿ ತಿಳಿಯಿತು. ನಾನು ಮೂತ್ರ ವಿಸರ್ಜನೆ ಮಾಡಿದ ಗೋಡೆ ಬಳಿ ಯಾವುದೇ ಪ್ರಚಾರ ಪೋಸ್ಟರ್ ಇರಲಿಲ್ಲ ' ಎಂದಿದ್ದಾರೆ.
#India A state Minister in Rajasthan a northern Indian state has landed in a controversy after a photo of him urinating near a wall went viral on social media. Minister Shambhu Singh Khatesar said urinating in the open was "an age-old tradition". pic.twitter.com/L3bzR405rT
— Eugene Makai (@EugeneMakai) October 7, 2018
ನಾನು ಹೋಗಿದ್ದ ಬಿಜೆಪಿ ಚುನಾವಣೆ ಸಮಾವೇಶದ ಸ್ಥಳದ ಬಳಿ ಯಾವುದೇ ಶೌಚಾಲಯ ಸೌಲಭ್ಯ ಇರಲುಲ್ಲ. ಸುಮಾರು 2.5 ಲಕ್ಷ ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ನಾನು ತುಂಬಾ ಕೆಲಸದಲ್ಲಿ ನಿರತನಾಗಿದ್ದು, ಆ ಸಮಯಕ್ಕೆ ನನಗೆ ಕಂಡ ಸ್ಥಳದಲ್ಲಿ ಮೂತ್ರ ವಿಸರ್ಜಿಸಿದೆ ಎಂದಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕ್ಲೀನ್ ಇಂಡಿಯಾ ಅಭಿಯಾನಕ್ಕೆ ಇದರಿಂದ ಧಕ್ಕೆ ಉಂಟಾಗಿಲ್ಲ. ತೆರೆದ ಸ್ಥಳಗಳಲ್ಲಿ ಮಲ ಮತ್ತು ಮೂತ್ರ ವಿಸರ್ಜನೆ ವಿಭಿನ್ನವಾಗಿದೆ. ತೆರೆದ ಮಲವಿಸರ್ಜನೆಗೆ ಒಡ್ಡುವಿಕೆಯು ರೋಗಗಳಿಗೆ ಕಾರಣವಾಗಬಹುದು, ಆದರೆ, ಮೂತ್ರ ವಿಸರ್ಜನೆಯು ಯಾವುದೇ ಸಮಸ್ಯೆಯಾಗಿಲ್ಲ ಎಂದು ತಮ್ಮ ಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications