ಹೊಟ್ಟೆ ತುಂಬಾ ತಿಂದು ಉಪವಾಸ ಸತ್ಯಾಗ್ರಹ ಕುಳಿತರಾ ಕಾಂಗ್ರೆಸಿಗರು?
ನವದೆಹಲಿ, ಏಪ್ರಿಲ್ 9: ಹೊಟ್ಟೆ ತುಂಬಾ ತಿಂದು ಕಾಂಗ್ರೆಸ್ ನಾಯಕರು ಉಪವಾಸ ಕುಳಿತರಾ? ಹೀಗೊಂದು ಪ್ರಶ್ನೆಯನ್ನು ಬಿಜೆಪಿ ಎತ್ತಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಇಂದು ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯ ರಾಜಘಾಟ್ ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಆದರೆ ಈ ಉಪವಾಸ ಸತ್ಯಾಗ್ರಹಕ್ಕೆ ಹೋಗುವ ಮೊದಲು ಕಾಂಗ್ರೆಸ್ ನಾಯಕರು ಹೊಟ್ಟೆ ತುಂಬಾ ತಿಂಡಿ ಸೇವಿಸಿದ್ದರು ಎಂಬುದು ವಿವಾದಕ್ಕೆ ಕಾರಣವಾಗಿದೆ.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಹಿರಿಯ ಕಾಂಗ್ರೆಸ್ ನಾಯಕರಾದ ಅಶೋಕ್ ಗೆಹ್ಲೋಟ್, ಶೀಲಾ ದೀಕ್ಷಿತ್ ಹಾಗೂ ಇತರ ನಾಯಕು ಭಾಗವಹಿಸಿದ್ದರು.
|
ರೆಸ್ಟೋರೆಂಟ್ ನಲ್ಲಿ ಊಟ, ಇಲ್ಲಿ ಉಪವಾಸ ಪ್ರತಿಭಟನೆ
ದೆಹಲಿಯಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳುವ ಮೊದಲು ಕಾಂಗ್ರೆಸ್ ನಾಯಕರು ದೆಹಲಿಯ ರೆಸ್ಟೋರೆಂಟ್ ಒಂದರಲ್ಲಿ ಆಹಾರ ಸೇವಿಸುತ್ತಿದ್ದರು ಎಂಬುದಾಗಿ ಬಿಜೆಪಿ ನಾಯಕ ಹರೀಶ್ ಖುರಾನಾ ಹೇಳಿದ್ದಾರೆ. ಇದಾದ ನಂತರ ಈ ನಾಯಕರು ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದೆಹಲಿಯ ರಾಜಘಾಟ್ ನಲ್ಲಿ ಪ್ರತಿಭಟನೆ ನಡೆಸಿದ್ದರು.

ಕಾಂಗ್ರೆಸ್ ದ್ವಂದ್ವ ನೀತಿ
"ಪ್ರತಿಭಟನೆಗೂ ಮುನ್ನ ಆಹಾರ ಸೇವಿಸುತ್ತಿರುವ ಕಾಂಗ್ರೆಸ್ ನಾಯಕರ ಚಿತ್ರಗಳು ಅವರ ದ್ವಂದ್ವ ನೀತಿಯನ್ನು ತೋರಿಸುತ್ತಿವೆ. ಒಂದು ಕಡೆ ತಾವು ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎನ್ನುತ್ತಾರೆ. ಇನ್ನೊಂದು ಕಡೆ ರೆಸ್ಟೋರೆಂಟ್ ನಲ್ಲಿ ತಿಂದು ಬರುತ್ತಾರೆ. ಈ ಚಿತ್ರಗಳು ನಿಜವಾದ ಚಿತ್ರಗಳು. ತಾಕತ್ತಿದ್ದರೆ ಅವರು ಇದು ನಕಲಿ ಚಿತ್ರಗಳು ಎನ್ನಲಿ ನೋಡೋಣ," ಎಂದು ಹರೀಶ್ ಖುರಾನಾ ಸವಾಲು ಹಾಕಿದ್ದಾರೆ

ಕೈ ಪಕ್ಷದಿಂದ ಸಮಜಾಯಿಷಿ
"ಈ ಚಿತ್ರಗಳನ್ನು 8 ಗಂಟೆ ಮೊದಲು ತೆಗೆಯಲಾಗಿದೆ. ಇದೊಂದು ಬೆಳಿಗ್ಗೆ 10.30ರಿಂದ ಸಂಜೆ 4.30ರ ವರೆಗೆ ನಡೆಯುವ ಸಾಂಕೇತಿಕ ಪ್ರತಿಭಟನೆ. ಇದು ಅಮರಣಾಂತ ಉಪವಾಸ ಸತ್ಯಾಗ್ರಹವಲ್ಲ. ಇದು ಬಿಜೆಪಿಯವರ ಸಮಸ್ಯೆ. ದೇಶ ನಡೆಸಿ ಎಂದರೆ ನಾವೇನು ತಿನ್ನುತ್ತೇವೆ ಎಂಬುಬುದನ್ನು ನೋಡುತ್ತಾರೆ," ಎಂದು ಕಾಂಗ್ರೆಸ್ ನಾಯಕ ಎ.ಎಸ್ ಲವ್ಲೀ ಕಿಡಿಕಾರಿದ್ದಾರೆ.
|
ಸ್ಪೂರ್ತಿದಾಯಕ ರಾಜಕೀಯ!
ರಾಹುಲ್ ಗಾಂಧಿ ಚೆನ್ನಾಗಿ ಮಾಡಿದ್ದೀರಿ. 5 ಗಂಟೆಗಳ ಉಪವಾಸ ಕೂರಲು ನಿಮಗೆ ಆಗುತ್ತಿಲ್ಲ ಜೊತೆಗೆ 1984 ರ ಗಲಭೆಯ ಆರೋಪಿಗಳನ್ನು "ಕೋಮು ಸಾಮರಸ್ಯ"ದ ಕಾರ್ಯಕ್ರಮವೊಂದಕ್ಕೆ ಕರೆ ತಂದಿದ್ದೀರಿ. ನಿಜವಾಗಿಯೂ ನಿಮ್ಮದು ಸ್ಪೂರ್ತಿದಾಯಕ ರಾಜಕೀಯ! ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಲೇವಡಿ ಮಾಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications