Pinarayi Vijayan Swearing-in Ceremony LIVE Updates: ಕೇರಳದಲ್ಲಿ ಸಿಎಂ ಜೊತೆ 20 ಸಚಿವರ ಪದಗ್ರಹಣ
ತಿರುವನಂತಪುರಂ, ಮೇ 20: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಎರಡನೇ ಬಾರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ರಚನೆ ಆಗುತ್ತಿದ್ದು, ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಿತು.
ಕೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಪಿಣರಾಯಿ ವಿಜಯನ್ ಪ್ರಮಾಣವಚನ ಕಾರ್ಯಕ್ರಮದಲ್ಲಿ 500 ಮಂದಿ ಭಾಗವಹಿಸುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಎಂ ಜೊತೆಗೆ 20 ಶಾಸಕರು ರಾಜ್ಯ ಸಂಪುಟ ಸಚಿವರಾಗಿ ಪದಗ್ರಹಣ ಮಾಡಿದರು.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮಾರ್ಗಸೂಚಿ ಹಿನ್ನೆಲೆ ನಿಗದಿತ ಪ್ರಮಾಣದ ಸದಸ್ಯರಿಗೆ ಮಾತ್ರ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. 140 ಶಾಸಕರು, 29 ಸಂಸದರು, ನ್ಯಾಯಾಂಗ, ಮಾಧ್ಯಮ ಮತ್ತು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರಿಗೆ ಮಾತ್ರ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು 48 ಗಂಟೆಗಳ ಹಿಂದೆ ಪಡೆದ ಕೊವಿಡ್-19 ನೆಗೆಟಿವ್ ವರದಿ ತರುವುದನ್ನು ಕಡ್ಡಾಯಗೊಳಿಸಲಾಗಿದೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಮಾಣವಚನ ಕಾರ್ಯಕ್ರಮದ ಕ್ಷಣಕ್ಷಣದ ಮಾಹಿತಿಯನ್ನು ಇಲ್ಲಿ ಓದಿ.

ಕೇರಳ ಸಂಪುಟದ 20 ಸಚಿವರು ಪ್ರಮಾಣವಚನ ಸ್ವೀಕರಿಸಿದರು.
Thiruvananthapuram: 20 ministers of the new Kerala cabinet, including NCP's AK Saseendran, Indian National League's (INL) Ahammad Devarkovil, R Bindu and PA Mohammed Riyas, take oath along with CM Pinarayi Vijayan. pic.twitter.com/Zp5FWSRBjF
— ANI (@ANI) May 20, 2021
ಕೇರಳ ಸಚಿವರು ಮತ್ತು ಖಾತೆ ಪಟ್ಟಿ:
* ಕೆ ಕೃಷ್ಣನ್ ಕುಟ್ಟಿ - ವಿದ್ಯುತ್ ಖಾತೆ * ಎ ಕೆ ಶಶಿಧರನ್ - ಅರಣ್ಯ ಖಾತೆ * ಅಹ್ಮದ್ ದೇವರ್ ಕೊವಿಲ್ - ಬಂದರು ಖಾತೆ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ರಾಜ್ಯಪಾಲ ಆರಿಫ್ ಮಹಮ್ಮದ್ ಖಾನ್ ಪ್ರಮಾಣವಚನ ಬೋಧಿಸಿದರು.
ಕೇರಳದ ಮುಖ್ಯಂತ್ರಿ ಆಗಿ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕರಿಸಿದರು.
CPI(M) leader Pinarayi Vijayan took oath as the Chief Minister of Kerala today. He was administered the oath by Governor Arif Mohammad Khan. pic.twitter.com/RaPAyAT4Sl
— ANI (@ANI) May 20, 2021
ರಾಜ್ಯದ ಮುಖ್ಯಮಂತ್ರಿ ಆಗಿ ಪಿಣರಾಯಿ ವಿಜಯನ್ ಕೆಲವೇ ಕ್ಷಣಗಳಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಮತದಾರರ ನಿರೀಕ್ಷೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ. ಜನಪರ ಕಾರ್ಯಗಳಲ್ಲಿ ಸರ್ಕಾರಕ್ಕೆ ಸಹಕಾರ ನೀಡುತ್ತೇವೆ ಎಂದು ಬಿಜೆಪಿ ಶಾಸಕ ಸುವೇಂದು ಅಧಿಕಾರಿ ತಿಳಿಸಿದ್ದಾರೆ.
I will work to fulfill the expectations of the people of the state. I will help govt for its positive efforts but also raise my voice against the violence going on in the state: BJP MLA from Nandigram Suvendu Adhikari on being elected as LoP of West Bengal Assembly pic.twitter.com/Bf4uCCBOiC
— ANI (@ANI) May 10, 2021
ಮಮತಾ ಬ್ಯಾನರ್ಜಿ ನೂತನ ಸಚಿವ ಸಂಪುಟದ ಸದಸ್ಯರ ಪೂರ್ಣ ಪಟ್ಟಿ ಇಲ್ಲಿದೆ ನೋಡಿ.
Portfolios of newly sworn in Bengal GOVT pic.twitter.com/Jwe6M97Bys
— Payal Mehta/પાયલ મેહતા/ पायल मेहता/ পাযেল মেহতা (@payalmehta100) May 10, 2021
ಅಸ್ಸಾಂ ಮುಖ್ಯಮಂತ್ರಿ ಆಗಿ ಹಿಮಂತ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದರು.
Assam CM Himanta Biswa Sarma's 13 cabinet ministers also take the oath. pic.twitter.com/JeV8LF4ls4
— ANI (@ANI) May 10, 2021
ಪಶ್ಚಿಮ ಬಂಗಾಳದಲ್ಲಿ ನೂತನ ಸಂಪುಟ ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ
Kolkata: 43 TMC leaders sworn-in as ministers in West Bengal cabinet pic.twitter.com/FRIZL5eUJx
— ANI (@ANI) May 10, 2021
ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರದ 43 ಸಚಿವರ ಪ್ರಮಾಣವಚನ
ಪಶ್ಚಿಮ ಬಂಗಾಳದಲ್ಲಿ ಮೂರನೇ ಅವಧಿಗೆ ಸರ್ಕಾರ ರಚಿಸುತ್ತಿರುವ ಟಿಎಂಸಿ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪುಟದ 43 ಮಂದಿ ಸಚಿವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
43 ನೂತನ ಸಚಿವರ ಪೈಕಿ 25 ಮಂದಿ ಚಿರಪರಿಚಿತರಿಗೆ ಸಚಿವ ಸ್ಥಾನ ನೀಡಿದ್ದರೆ,18 ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರದ 43 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪುದುಚೇರಿ ಮುಖ್ಯಮಂತ್ರಿಯಾಗಿ ಎನ್. ರಂಗಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
All India NR Congress (AINRC) president N Rangasamy takes oath as the Chief Minister of Puducherry.
— ANI (@ANI) May 7, 2021
The oath is being administered by Puducherry Governor Tamilisai Soundararajan. pic.twitter.com/fN4al885ad
ಎಐಎನ್ಆರ್ಸಿ 16 ಸ್ಥಾನಗಳಲ್ಲಿ ಕಣಕ್ಕಿಳಿದಿತ್ತು. 10 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಎರಡೂ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಎನ್. ರಂಗಸ್ವಾಮಿ ತಟ್ಟಂಚವಾಡಿ ಕ್ಷೇತ್ರದಲ್ಲಿ 5,456 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆ ರಚನೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟಿದೆ. ಎಐಎನ್ಆರ್ಸಿ ಖಾತೆ ಹಂಚಿಕೆಯಲ್ಲಿ ಸ್ವತಂತ್ರ್ಯಬೇಕು ಎಂದು ಹೇಳಿದೆ.
ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಮುಖ್ಯಸ್ಥ ಎನ್. ರಂಗಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಪಕ್ಷ ಚುನಾವಣೆಯಲ್ಲಿ 10 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications