ಉಡ್ತಾ ಪಂಜಾಬ್ 700ಪ್ಲಸ್ ವೆಬ್ ಸೈಟ್ ಗಳಲ್ಲಿ ರನ್ನಿಂಗ್
ಹೈದರಾಬಾದ್, ಜೂನ್ 17: ಸೆನ್ಸಾರ್ ಮಂಡಳಿ ಹಾಗೂ ಬಾಲಿವುಡ್ ಮಂದಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿ ಕೋರ್ಟ್ ಮೆಟ್ಟಿಲೇರಿದ್ದ ಉಡ್ತಾ ಪಂಜಾಬ್ ಚಿತ್ರ ಶುಕ್ರವಾರ ತೆರೆ ಕಂಡಿದೆ. ಆದರೆ, ಚಿತ್ರಮಂದಿರದಲ್ಲಿ ಬಿಡುಗಡೆಯಾಗುವುದಕ್ಕೂ ಮುನ್ನ ಉಡ್ತಾ ಪಂಜಾಬ್ ಚಿತ್ರ ಸೋರಿಕೆಯಾಗಿದ್ದು, 700ಕ್ಕೂ ಅಧಿಕ ವೆಬ್ ಸೈಟ್ ಗಳಲ್ಲಿ ಅಕ್ರಮವಾಗಿ ಪ್ರದರ್ಶನವಾಗುತ್ತಿದೆ.
'ಕಿಲ್ ಪೈರಸಿ ' ಎಂದು ಸಿನಿಮಾ ಮಂದಿ ಬೊಬ್ಬೆ ಹಾಕಿದರೂ ಅದನ್ನು ನಿಯತ್ತಿನಿಂದ ಪಾಲಿಸದೆ ಬರುತ್ತಿರುವ ಕೆಲ ಮಂದಿ ಈ ಚಿತ್ರವನ್ನು ಅಂತರ್ಜಾಲಕ್ಕೆ ಸೇರಿದ್ದಾರೆ. ಉಡ್ತಾ ಪಂಜಾಬ್ ಚಿತ್ರದ ಸೆನ್ಸಾರ್ ಕಾಪಿ ಸುಮಾರು 732 ವೆಬ್ ಸೈಟ್ ಲಿಂಕ್ ಗಳಲ್ಲಿ ಪತ್ತೆಯಾಗಿದೆ ಎಂದು ಹೈದರಾಬಾದಿನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ವರದಿ ನೀಡಿದೆ.[ಉಡ್ತಾ ಪಂಜಾಬ್ ಬಿಡುಗಡೆ ತಡೆಗೆ ಸುಪ್ರೀಂ ನಕಾರ]
ಸೆನ್ಸಾರ್ ಪ್ರಮಾಣ ಪತ್ರ ಪಡೆಯಲು ಕೇಂದ್ರ ಸೆನ್ಸಾರ್ ಮಂಡಳಿ(ಸಿಬಿಎಫ್ ಸಿ) ಗೆ ಉಡ್ತಾ ಪಂಜಾಬ್ ಚಿತ್ರ ತಂಡ ನೀಡಿದ್ದ ಡಿವಿಡಿಯ ನಕಲು ಈಗ ಎಲ್ಲೆಡೆ ಹರಿದಾಡುತ್ತಿದೆ. ಸಾಕಷ್ಟು ವಿವಾದ ಹಾಗೂ ಕಾನೂನು ಹೋರಾಟದ ನಂತರ ಬುಧವಾರದಂದು ಚಿತ್ರಕ್ಕೆ ಪ್ರಮಾಣ ಪತ್ರ ಸಿಕ್ಕಿತ್ತು. ಇದಾದ ಬಳಿಕ ಇಂಟರ್ನೆಟ್ ನಲ್ಲಿ ಚಿತ್ರ ಸೋರಿಕೆಯಾಗಿದೆ.

ಸೆನ್ಸಾರ್ ಮಂಡಳಿ ಕೈವಾಡದಿಂದಲೇ ಚಿತ್ರದ ಪ್ರತಿ ಅಂತರ್ಜಾಲ ಸೇರಿದೆ ಎಂದು ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ಮುಂಬೈನ ಸೈಬರ್ ಸೆಲ್ ಗೆ ದೂರು ನೀಡಿದ್ದಾರೆ.
ಶುಕ್ರವಾರ ಬಿಡುಗಡೆಗೆ ನಿಗದಿಯಾಗುವುದಕ್ಕೂ ಎರಡು ದಿನ ಮುಂಚಿತವಾಗಿ 2 ಗಂಟೆ 20 ನಿಮಿಷ ಅವಧಿಯ ಚಿತ್ರದ ಪೈರಸಿ ಡಿವಿಡಿ ಇಂಟರ್ನೆಟ್ ಸೇರಿದೆ. 'For the Censor' ಎಂಬ ಅಡಿ ಬರಹ ಚಿತ್ರದ ಸೀನ್ ಗಳ ಕೆಳಗೆ ಕಾಣಿಸುತ್ತದೆ.
ವ್ಯಾಪಕವಾಗುತ್ತಿರುವ ಪೈರಸಿ ಜಾಲ: 2013 ರಲ್ಲಿ ತೆಲುಗಿನ ಪವನ್ ಕಲ್ಯಾಣ್ ಅಭಿನಯದ ಅತ್ತಾರಿಂಟಿಕಿ ದಾರೇದಿ' ಚಿತ್ರ ಕೂಡಾ ಪೈರಸಿ ಭೂತಕ್ಕೆ ಬಲಿಯಾಗಿತ್ತು. ಪ್ರಭಾಸ್ ನಟನೆಯ ಬಾಹುಬಲಿ ಚಿತ್ರಕ್ಕೂ ಪೈರಸಿ ಕಾಡಿತ್ತು. ಮಲೆಯಾಳಂನ ನಿವಿನ್ ಅಭಿನಯದ ಪ್ರೇಮಂ ಚಿತ್ರ, ಕನ್ನಡದಲ್ಲಿ ರವಿಚಂದ್ರನ್ ಅಭಿನಯದ 'ದೃಶ್ಯ' ಚಿತ್ರದ ಸೆನ್ಸಾರ್ ಕಾಪಿ ಕೂಡಾ ಇಂಟರ್ನೆಟ್ ನಲ್ಲಿ ಲಭ್ಯವಾಗಿ ಚಿತ್ರ ನಿರ್ಮಾಪಕರ ತಲೆಕೆಡಿಸಿತ್ತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications