Viral Video: ಕರ್ನಾಟಕದಷ್ಟು ಕೀಳು ಮಟ್ಟದ ಚಿಂತನೆ ಮತ್ತೊಂದಿಲ್ಲ: ಕೇಂದ್ರ ಸಚಿವ ಪಿಯೂಷ್ ಗೋಯಲ್
ನವದೆಹಲಿ: ಕನ್ನಡಿಗರ "ನಮ್ಮ ತೆರಿಗೆ ನಮ್ಮ ಹಕ್ಕು" ಅಭಿಯಾನವನ್ನು ಉಲ್ಲೇಖಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಕೀಳಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸಮರ್ಪಕ ತೆರಿಗೆ ಹಣ ನೀಡುತ್ತಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು ವಿರೋಧ ವ್ಯಕ್ತಪಡಿಸಿತ್ತು. ಇದು ಕೇವಲ ಸರ್ಕಾರದ ಅಭಿಯಾನ ಆಗಿರದೆ ಕನ್ನಡಿಗರು ಸಹ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಿದ್ದರು. ಕರ್ನಾಟಕದಲ್ಲಿ ಪ್ರಾರಂಭವಾದ ಈ ಅಭಿಯಾನವು ಇಡೀ ದಕ್ಷಿಣ ಭಾರತಕ್ಕೆ ವ್ಯಾಪಿಸಿತ್ತು. ಇದೀಗ ದಕ್ಷಿಣ ಭಾರತದ ರಾಜ್ಯಗಳನ್ನು ಉಲ್ಲೇಖಿಸಿ, ಕೀಳು ಮಟ್ಟದ ಚಿಂತನೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನುದಾನದಲ್ಲಿ ತಾರತಮ್ಯವಾಗುತ್ತಿದೆ ಎನ್ನುವ ಗಂಭೀರ ಆರೋಪವು ಕಳೆದ ಒಂದು ದಶಕದಿಂದಲೂ ಚರ್ಚೆ ಆಗುತ್ತಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಕೊರತೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಧ್ವನಿ ಎತ್ತುತ್ತಿದ್ದಾರೆ. ಇನ್ನು ತೆರಿಗೆ ಹಂಚಿಕೆ ಹಾಗೂ ಅನುದಾನದ ವಿಚಾರದಲ್ಲಿ ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಈಚೆಗೆ ನವದೆಹಲಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ಪಂಜಾಬ್ ಹಾಗೂ ದೆಹಲಿಯ (ಎಎಪಿ) ರಾಜಕೀಯ ನಾಯಕರು ಪ್ರತಿಭಟನೆ ನಡೆಸಿದ್ದರು.

ದಕ್ಷಿಣ ಭಾರತೀಯ ರಾಜ್ಯಗಳು ಒಂದೆಡೆ ಸೇರುವುದಕ್ಕೆ ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನ ಸಾಕ್ಷಿಯಾಗಿತ್ತು. ಆದರೆ ಕೇಂದ್ರ ಸರ್ಕಾರದ ಪ್ರಭಾವಿ ಸಚಿವರು ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನವನ್ನು ಟೀಕಿಸುವುದರೊಂದಿಗೆ ದಕ್ಷಿಣ ಭಾರತೀಯ ರಾಜ್ಯಗಳ ಬಗ್ಗೆಯೂ ಟೀಕೆ ಮಾಡಿದ್ದಾರೆ. ಪಿಯೂಷ್ ಗೋಯಲ್ ಅವರ ಮಾತುಗಳಿಗೆ ಕನ್ನಡಿಗರು ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರಿದ್ದಾರೆ.
This Minister of Hindi Party BJP, insults Karnataka and Kannadigas for asking our rightful share of taxes.
— 💛❤️ ದಕ್ಷಿಣಪಥೇಶ್ವರ 🇮🇳 (@dakshinapata) January 5, 2026
and calls us “Choti Soch” people @PiyushGoyal should give an unconditional apology to people of Karnataka @INCKarnataka @INCIndia @PriyankKharge @siddaramaiah pic.twitter.com/J83lhbLZSs
ಪಿಯೂಷ್ ಗೋಯಲ್ ಹೇಳಿದ್ದೇನು ?
ಸಮಾರಂಭವೊಂದರಲ್ಲಿ ಮಾತನಾಡುವಾಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಕರ್ನಾಟಕ, ತೆಲಂಗಾಣ ಹಾಗೂ ತಮಿಳುನಾಡು ಸೇರಿ ಕೆಲವು ರಾಜ್ಯಗಳು ಅವರವರಲ್ಲೇ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಈ ರಾಜ್ಯಗಳು ನಾವು ಎಷ್ಟು ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡಿದ್ದೇವೆ ಅಷ್ಟು ನಮಗೆ ವಾಪಸ್ ಕೊಡಿ ಎಂದು ಕೇಳುತ್ತಿವೆ. ನಾನು ಅರ್ಥಮಾಡಿಕೊಂಡಿರುವಂತೆ ಇದಕ್ಕಿಂತ ಚೋಟಿ ಸೋಚ್ (Choti Soch - ಕೀಳು ಮಟ್ಟದ ಅಥವಾ ಕಡಿಮೆ ಚಿಂತನೆ) ಕೀಳು ಮಟ್ಟದ ಚಿಂತನೆ ಮತ್ತೊಂದಿಲ್ಲ. ಇದಕ್ಕಿಂತಲೂ ದೌರ್ಭಗ್ಯವಾದ ವಿಷಯ ಮತ್ತೊಂದಿಲ್ಲ ಎಂದೂ ಅವರು ಹೇಳಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪಿಯೂಷ್ ಗೋಯಲ್ ಅವರ ವಿಡಿಯೋ ವೈರಲ್ ಆಗುತ್ತಿದ್ದು, ಇದಕ್ಕೆ ಕನ್ನಡಿಗರು ಸೇರಿದಂತೆ ದಕ್ಷಿಣ ಭಾರತೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
-
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications