ನನ್ನ ಪತ್ನಿಯನ್ನು ಸುರಕ್ಷಿತವಾಗಿಡಿ: ರಾಬರ್ಟ್ ವಾದ್ರಾ ಭಾವನಾತ್ಮಕ ಬರಹ
ನವದೆಹಲಿ, ಫೆ 11: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯ ಪುತ್ರಿ ಪ್ರಿಯಾಂಕ, ಅತ್ತ ಲಕ್ನೋದಲ್ಲಿ ಭರ್ಜರಿ ರೋಡ್ ಶೋ ನಡೆಸುತ್ತಿದ್ದರೆ, ಇತ್ತ ಅವರ ಅಳಿಯ ರಾಬರ್ಟ್ ವಾದ್ರಾ ಇಡಿ (ಜಾರಿ ನಿರ್ದೇಶನಾಲಯ) ವಿಚಾರಣೆ ಎದುರಿಸುತ್ತಿದ್ದಾರೆ.
ಈ ನಡುವೆ, ರಾಬರ್ಟ್ ವಾದ್ರಾ ಭಾವನಾತ್ಮಕ ಬರಹವೊಂದನ್ನು ಫೇಸ್ ಬುಕ್ ನಲ್ಲಿ ಹಾಕಿರುವ ಉದ್ದೇಶ ಎನ್ನುವ ಚರ್ಚೆ ಆರಂಭವಾಗಿದೆ. ಮನಿ ಲಾಂಡ್ರಿಂಗ್ ಕೇಸಿನಲ್ಲಿ ಸತತ ವಿಚಾರಣೆ ಎದುರಿಸಿದ ಬಳಿಕ ಸತ್ಯಕ್ಕೆ ಯಾವತ್ತೂ ಜಯ ಸಿಗುತ್ತದೆ ಎಂದು ವಾದ್ರಾ ಪೋಸ್ಟ್ ಮಾಡಿದ್ದರು.
ಈಗ ಇನ್ನೊಂದು ಬರಹವನ್ನು ಹಾಕಿರುವ ವಾದ್ರಾ ತಮ್ಮ ವಾಲ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ, " " ಪಿ ಉತ್ತರಪ್ರದೇಶ ಹಾಗೂ ದೇಶದ ಜನರ ಸೇವೆಗಾಗಿ ಆರಂಭವಾಗಿರುವ ಈ ನಿನ್ನ ರಾಜಕೀಯ ಪ್ರಯಾಣಕ್ಕೆ ನನ್ನ ಶುಭ ಹಾರೈಕೆಗಳು"

ಮುಂದುವರಿಯುತ್ತಾ, "ನೀನು ನನ್ನ ಉತ್ತಮ ಸ್ನೇಹಿತೆ, ಉತ್ತಮ ಪತ್ನಿ ಹಾಗೂ ನಮ್ಮ ಇಬ್ಬರು ಮಕ್ಕಳಿಗೆ ಉತ್ತಮ ತಾಯಿಯಾಗಿರುವೆ. ದೇಶದಲ್ಲಿ ಪ್ರಸಕ್ತ ಕ್ರೂರ ರಾಜಕೀಯ ವಾತಾವರಣವಿದೆ ಎನ್ನುವುದನ್ನು ನಾನು ಬಲ್ಲೆ. ಆದರೆ, ದೇಶದ ಜನರ ಸೇವೆ ಮಾಡುವುದು ಆಕೆಯ ಧರ್ಮ".
"ಈಗ ನನ್ನ ಪತ್ನಿ ಪ್ರಿಯಾಂಕಳನ್ನು ಭಾರತೀಯರ ಕೈಗೆ ನೀಡುತ್ತಿದ್ದೇನೆ. ದಯವಿಟ್ಟು ಆಕೆಯನ್ನು ಸುರಕ್ಷಿತವಾಗಿಡಿ" ಎಂದು ರಾಬರ್ಟ್ ವಾದ್ರಾ ಫೇಸ್ ಬುಕ್ ಪೋಸ್ಟ್ ಮೂಲಕ ವಿನಂತಿಸಿಕೊಂಡಿದ್ದಾರೆ. ವಾದ್ರಾ ಈ ಪೋಸ್ಟಿಗೆ ಸಾವಿರಕ್ಕೂ ಹೆಚ್ಚು ಲೈಕ್ ಗಳು ಬಂದಿವೆ.
ಲಂಡನ್ ಮೂಲದ ಸಂಸ್ಥೆಗೆ 17.77 ಕೋಟಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ರಾಬರ್ಟ್ ವಾದ್ರಾ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲಯದಿಂದ ಮೂರು ಬಾರಿ ಸಮನ್ಸ್ ಪಡೆದಿದ್ದ ಉದ್ಯಮಿ ವಾದ್ರಾ ಅವರು ಸತತ ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಟ್ಟಿದ್ದರು. ಆದರೆ, ಬಂಧನ ಭೀತಿಯಿಂದ ತಾತ್ಕಾಲಿಕವಾಗಿ ಪಾರಾಗಿದ್ದು, ಫೆ.16ರ ತನಕ ಅವರನ್ನು ಬಂಧಿಸುವಂತಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications