Get Updates
Get notified of breaking news, exclusive insights, and must-see stories!

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ನಿಧನ; ಮೋದಿ ಸೇರಿ ಗಣ್ಯರ ಸಂತಾಪ

ಭಾರತ, ಡಿಸೆಂಬರ್ 8: ತಮಿಳುನಾಡಿನ ಕುನೂರು ಸಮೀಪದ​​ ಅರಣ್ಯ ಪ್ರದೇಶದಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್ ಮೃತಪಟ್ಟಿರುವುದು ಅಧಿಕೃತವಾಗಿದೆ.

Recommended Video

      ವಾಯುಪಡೆಯ Mi-17V5 ಹೆಲಿಕಾಪ್ಟರ್ ಸ್ಪೆಷಾಲಿಟಿ ಏನು? | Oneindia Kannada

      ಹೆಲಿಕಾಪ್ಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ.

      ಈ ಕುರಿತು ಟ್ವೀಟ್ ಮಾಡಿರುವ ಭಾರತೀಯ ವಾಯುಸೇನೆ​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11 ಸೇನಾ ಸಿಬ್ಬಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ.

      PM And Other Political Leaders Express Condolence to Untimely Death of CDS Bipin Rawat

      ಇನ್ನು ಸೇನಾ ಸಿಬ್ಬಂದಿ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

      ಪ್ರಧಾನಿ ನರೇಂದ್ರ ಮೋದಿ ಸಂತಾಪ
      ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ, ನಿಜವಾದ ದೇಶಭಕ್ತ. ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಮಹತ್ತರವಾಗಿ ಕೊಡುಗೆ ನೀಡಿದ್ದಾರೆ. ಕಾರ್ಯತಂತ್ರದ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿವೆ. ಅವರ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

      ಭಾರತದ ಮೊದಲ ಸಿಡಿಎಸ್ ಆಗಿ ಜನರಲ್ ರಾವತ್ ರಕ್ಷಣಾ ಸುಧಾರಣೆಗಳು ಸೇರಿದಂತೆ ನಮ್ಮ ಸಶಸ್ತ್ರ ಪಡೆಗಳಿಗೆ ಸಂಬಂಧಿಸಿದ ವಿವಿಧ ಅಂಶಗಳಲ್ಲಿ ಕೆಲಸ ಮಾಡಿದರು. ಅವರು ಸೈನ್ಯದಲ್ಲಿ ಸೇವೆ ಸಲ್ಲಿಸಿದ ಶ್ರೀಮಂತ ಅನುಭವ ಹಾಗೂ ಅಸಾಧಾರಣ ಸೇವೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.

      ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ
      ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ತಿಳಿದು ನನಗೆ ತುಂಬಾ ನೋವಾಗಿದೆ. ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ ಮರಣ ಹೊಂದಿದ ಪ್ರತಿಯೊಬ್ಬರಿಗೂ ಶ್ರದ್ಧಾಂಜಲಿ ಸಲ್ಲಿಸಲು ನಾನು ಸಹ ನಾಗರಿಕರೊಂದಿಗೆ ಸೇರುತ್ತೇನೆ. ಅಗಲಿದ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು.

      ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಜಿ ಅವರ ಅಕಾಲಿಕ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ದುಃಖಿತನಾಗಿದ್ದೇನೆ. ರಾಷ್ಟ್ರವು ತನ್ನ ಒಬ್ಬ ವೀರ ಪುತ್ರನನ್ನು ಕಳೆದುಕೊಂಡಿದೆ. ಮಾತೃಭೂಮಿಗೆ ಅವರ ನಾಲ್ಕು ದಶಕಗಳ ನಿಸ್ವಾರ್ಥ ಸೇವೆಯು ಅಸಾಧಾರಣ ಶೌರ್ಯ ಮತ್ತು ವೀರತೆಯಿಂದ ಗುರುತಿಸಲ್ಪಟ್ಟಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಹೇಳಿದ್ದಾರೆ.

      ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ
      ನಮ್ಮ ಸಿಡಿಎಸ್ ಜನರಲ್ ಬಿಪಿನ್ ರಾವತ್ ಜಿ ಅವರನ್ನು ಅತ್ಯಂತ ದುರಂತ ಅಪಘಾತದಲ್ಲಿ ಕಳೆದುಕೊಂಡಿರುವುದರಿಂದ ರಾಷ್ಟ್ರಕ್ಕೆ ಅತ್ಯಂತ ದುಃಖದ ದಿನ. ಮಾತೃಭೂಮಿಗೆ ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ ವೀರ ಸೈನಿಕರಲ್ಲಿ ಒಬ್ಬರು. ಅವರ ಅನುಕರಣೀಯ ಕೊಡುಗೆಗಳು ಮತ್ತು ಬದ್ಧತೆಯನ್ನು ಪದಗಳಲ್ಲಿ ಹೇಳಲಾಗುವುದಿಲ್ಲ. ನನಗೆ ತೀವ್ರ ನೋವಾಗಿದೆ.

      ಶ್ರೀಮತಿ ಮಧುಲಿಕಾ ರಾವತ್ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಗಳ ದುಃಖದ ನಿಧನಕ್ಕೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಕ್ಯಾಪ್ಟನ್ ವರುಣ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

      ಜನರಲ್ ಬಿಪಿನ್ ರಾವತ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ
      ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

      ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸಂದೇಶ
      ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಕುಟುಂಬಕ್ಕೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಇದು ಊಹಿಸಲಾಗದ ದುರಂತ ಮತ್ತು ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ. ತಮ್ಮ ಪ್ರಾಣವನ್ನು ಕಳೆದುಕೊಂಡ ಇತರ ಎಲ್ಲರಿಗೂ ಸಹ ಹೃತ್ಪೂರ್ವಕ ಸಂತಾಪಗಳು. ಈ ದುಃಖದಲ್ಲಿ ಭಾರತ ಒಗ್ಗಟ್ಟಾಗಿ ನಿಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

      ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಸಂತಾಪ
      ತಮಿಳುನಾಡಿನ ಕುನೂರ್‌ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸಶಸ್ತ್ರ ಪಡೆಗಳ ಸಿಬ್ಬಂದಿಯ ನಿಧನದಿಂದ ಅತೀವವಾಗಿ ಆಘಾತವಾಗಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

      ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸಂದೇಶ
      ಸೇನಾ ಪಡೆಗಳ ಮುಖ್ಯಸ್ಥರಾದ (CDS) ಜ. ಬಿಪಿನ್ ರಾವತ್, ಅವರ ಶ್ರೀಮತಿಯವರು ಮತ್ತು ಉನ್ನತ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಊಟಿಯ ಕೂನೂರು ಬಳಿ ದುರಂತಕ್ಕೀಡಾಗಿ ರಾವತ್, ಶ್ರೀಮತಿ ರಾವತ್ ಅವರು ಸೇರಿ ಇನ್ನಿತರೆ ಉನ್ನತ ಸೇನಾಧಿಕಾರಿಗಳು ಅಸುನೀಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.

      ದೇಶರಕ್ಷಣೆಗೆ ಅನನ್ಯ ಕೊಡುಗೆ ನೀಡಿದ್ದ ಈ ಸೇನಾಧಿಕಾರಿಗಳ ದುರಂತ ಸಾವು ಆಘಾತಕಾರಿ, ಇಂದು ದೇಶಕ್ಕೆ ಅತ್ಯಂತ ದುಃಖದ ದಿನ. ದುರಂತದಲ್ಲಿ ಜೀವ ಚೆಲ್ಲಿದ ಎಲ್ಲ ಸೇನಾಧಿಕಾರಿಗಳಿಗೆ ನನ್ನ ಪ್ರಣಾಮಗಳು. ಅವರೆಲ್ಲರಿಗೂ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಎಲ್ಲರ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

      ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ
      ಭಾರತೀಯ ಸೇನಾ ಪಡೆಗಳ ಮುಖ್ಯಸ್ಥರಾಗಿ ತಮ್ಮ ಅಮೋಘ ಕರ್ತವ್ಯ ಚತುರತೆಯಿಂದ ಸೇವೆ ಸಲ್ಲಿಸುತ್ತಿದ್ದ ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಮರಣದಿಂದ ನಾನು ನೊಂದಿದ್ದೇನೆ. ರಕ್ಷಣಾ ಇಲಾಖೆಯ ಮೂರು ಪಡೆಗಳ ಮಧ್ಯೆ ಸಮನ್ವಯ ಕಾದುಕೊಂಡು ರಾಷ್ಟ್ರದ ರಕ್ಷಣೆಗಾಗಿ ಕಂಕಣ ಕಟ್ಟಿ ಕೆಲಸ ಮಾಡುತ್ತಿದ್ದ ಜನರಲ್ ಬಿಪಿನ್ ರಾವತ್ ಶಿಸ್ತಿನ ಸಿಪಾಯಿಯಾಗಿ ತಾಯಿ ಭಾರತೀಯ ಸೇವೆ ಮಾಡುತ್ತಿದ್ದರು. ಇವರ ಮೃತ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.

      ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
      ಹೆಲಿಕಾಪ್ಟರ್ ಅಪಘಾತದಲ್ಲಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಜನರ ದುರದೃಷ್ಟಕರ ನಿಧನದಿಂದ ದುಃಖವಾಗಿದೆ. ಇದು ನಮ್ಮ ದೇಶ ಮತ್ತು ಭಾರತದ ರಕ್ಷಣೆಗೆ ದೊಡ್ಡ ನಷ್ಟವಾಗಿದೆ. ಮೃತರ ಕುಟುಂಬಗಳಿಗೆ ಮತ್ತು ಹಿತೈಷಿಗಳಿಗೆ ನನ್ನ ಆಳವಾದ ಸಂತಾಪಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

      ಭಾರತೀಯ ಸೇನೆಯ ಸಂತಾಪ
      ಜನರಲ್ ಎಂ.ಎಂ. ನರವಾಣೆ ಮತ್ತು ಭಾರತೀಯ ಸೇನೆಯ ಎಲ್ಲಾ ಶ್ರೇಣಿಗಳು ಇಂದು ದುರದೃಷ್ಟಕರ ವಿಮಾನ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಶ್ರೀಮತಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾ ಸಿಬ್ಬಂದಿಗಳ ಅಕಾಲಿಕ ನಿಧನದ ಬಗ್ಗೆ ತಮ್ಮ ಆಳವಾದ ದುಃಖ ಮತ್ತು ದುಃಖವನ್ನು ವ್ಯಕ್ತಪಡಿಸುತ್ತವೆ: ಭಾರತೀಯ ಸೇನೆ

      ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ
      ತಮಿಳುನಾಡಿನಲ್ಲಿ ನಡೆದ ಅತ್ಯಂತ ದುರದೃಷ್ಟಕರ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಸಶಸ್ತ್ರ ಪಡೆಗಳ ಸಿಬ್ಬಂದಿಯ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಕಾಲಿಕ ಮರಣವು ನಮ್ಮ ಸಶಸ್ತ್ರ ಪಡೆಗಳಿಗೆ ಮತ್ತು ದೇಶಕ್ಕೆ ತುಂಬಲಾರದ ನಷ್ಟವಾಗಿದೆ.

      ಜನರಲ್ ರಾವತ್ ಅವರು ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದರು. ರಕ್ಷಣಾ ಸಿಬ್ಬಂದಿಯ ಮೊದಲ ಮುಖ್ಯಸ್ಥರಾಗಿ ಅವರು ನಮ್ಮ ಸಶಸ್ತ್ರ ಪಡೆಗಳ ಜಂಟಿ ಯೋಜನೆಗಳನ್ನು ಸಿದ್ಧಪಡಿಸಿದ್ದರು.

      ಈ ಅಪಘಾತದಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಹೃದಯವಿದೆ. ಪ್ರಸ್ತುತ ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಿಪಿ ಕ್ಯಾಪ್ಟನ್ ವರುಣ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

      ಭೂತಾನ್ ಪ್ರಧಾನಿ ಸಂತಾಪ
      ಸಿಡಿಎಸ್ ಬಿಪಿನ್ ರಾವತ್ ಮತ್ತು ಇತರ 12 ಮಂದಿಯ ನಿಧನಕ್ಕೆ ಭೂತಾನ್ ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದಾರೆ. CDS ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಸೇರಿದಂತೆ 13 ಅಮೂಲ್ಯ ಜೀವಗಳನ್ನು ಬಲಿ ತೆಗೆದುಕೊಂಡ ಭಾರತದಲ್ಲಿ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಭೂತಾನ್‌ನ ಜನರು ಮತ್ತು ನಾನು ಭಾರತ ಮತ್ತು ದುಃಖಿತ ಕುಟುಂಬಗಳಿಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಭೂತಾನ್ ಪ್ರಧಾನಿ ತಿಳಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+