ಪಿಎಂ ಕೇರ್ಸ್ನಿಂದ ಬಿಹಾರದಲ್ಲಿ ಎರಡು ಆಸ್ಪತ್ರೆಗೆ ಅನುದಾನ: ಕರ್ನಾಟಕಕ್ಕೆ ಎಷ್ಟು?
ನವದೆಹಲಿ, ಆಗಸ್ಟ್ 24: ಬಿಹಾರದ ಪಟ್ನಾ ಮತ್ತು ಮುಜಫ್ಫರ್ಪುರಗಳಲ್ಲಿ ಡಿಆರ್ಡಿಒ ಮೂಲಕ 500 ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಸಲುವಾಗಿ ನಿಧಿ ಹಂಚಿಕೆ ಮಾಡಲು ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ನಿರ್ಧರಿಸಿದೆ. ಬಿಹಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಈ ಅನುದಾನ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
Recommended Video
ಇದು ಬಿಹಾರದಲ್ಲಿನ ಕೋವಿಡ್ ಕೇರ್ ಸೌಲಭ್ಯದ ಸುಧಾರಣೆಗೆ ಮಹತ್ವದ ನೆರವು ನೀಡಲಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ. ಪಟ್ನಾದ ಬಿಹ್ತಾದಲ್ಲಿನ 500 ಹಾಸಿಗೆಗಳ ಆಸ್ಪತ್ರೆ ಸೋಮವಾರ ಉದ್ಘಾಟನೆಯಾಗುತ್ತಿದ್ದು, ಮುಜಫ್ಫರ್ಪುರದ ಮತ್ತೊಂದು ಆಸ್ಪತ್ರೆ ಶೀಘ್ರಲ್ಲಿಯೇ ಉದ್ಘಾಟನೆಯಾಗಲಿದೆ.
ಈ ಆಸ್ಪತ್ರೆಗಳು ವೆಂಟಿಲೇಟರ್ ಸೌಲಭ್ಯವುಳ್ಳ 125 ಐಸಿಯು ಹಾಸಿಗೆಗಳು ಮತ್ತು 375 ಸಾಮಾನ್ಯ ಹಾಸಿಗೆ ಸೌಲಭ್ಯಗಳನ್ನು ಒಳಗೊಂಡಿದೆ. ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು ಈ ಆಸ್ಪತ್ರೆಗೆ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸಲಿದೆ.

ಪಿಎಂ ಕೇರ್ಸ್ ನಿಧಿಯಿಂದ ಈ ಎರಡು ಆಸ್ಪತ್ರೆಗಳ ನಿರ್ಮಾಣಕ್ಕೆ ಎಷ್ಟು ಮೊತ್ತದ ನಿಧಿ ಹಂಚಿಕೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.
'ಪಿಎಂ ಕೇರ್ಸ್ ನಿಧಿಯಿಂದ ಕರ್ನಾಟಕಕ್ಕೆ ಎಷ್ಟು ದುಡ್ಡು ಬರುತ್ತದೆ? ಪಿಎಂ ಕೇರ್ಸ್ನಿಂದ ಕರ್ನಾಟಕಕ್ಕೆ ಎಷ್ಟು ಕಾರ್ಯಕ್ರಮ ರೂಪಿಸ್ತಾರೆ?' ಎಂದು ಪ್ರಧಾನಿ ಕಚೇರಿಯ ಹೇಳಿಕೆಯನ್ನು ಉಲ್ಲೇಖಿಸಿ ಕರ್ನಾಟಕದ ರಾಜ್ಯಸಭೆ ಸಂಸದ ಜಿಸಿ ಚಂದ್ರಶೇಖರ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸಿದೆ. ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಜೆಡಿಯು ಮತ್ತು ಬಿಜೆಪಿ ಜತೆಯಾಗಿ ಚುನಾವಣೆ ಎದುರಿಸುವುದಾಗಿ ಈಗಾಗಲೇ ಘೋಷಿಸಲಾಗಿದೆ. ಹೀಗಾಗಿ ಈ ಅನುದಾನ ಹಂಚಿಕೆಯು ಚುನಾವಣೆಗೆ ಸಿದ್ಧತೆ ನಡೆಸುತ್ತಿರುವುದಕ್ಕೆ ಪುರಾವೆ ಎಂದು ಹೇಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications