PM Internship Scheme: ಯುವಕರಿಗೆ ಗುಡ್ನ್ಯೂಸ್: ಇನ್ಮುಂದೆ ಕೆಲಸ ಇಲ್ಲ ಅನ್ನೋ ಚಿಂತೆ ಇರಲ್ಲ
Pm Internship Scheme: ಭಾರತದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈಚೆಗೆ ಕೇಂದ್ರ ಸರ್ಕಾರವು ಮಂಡಿಸಿದ್ದ ಕೇಂದ್ರ ಮಧ್ಯಂತರ ಬಜೆಟ್ 2024ರಲ್ಲೂ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸಾಕಷ್ಟು ಆದ್ಯತೆ ನೀಡಲಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಭಾರತದಲ್ಲಿನ ನಿರುದ್ಯೋಗ ವಿಷಯ ಹಾಗೂ ಯುವ ನಿರುದ್ಯೋಗಿಗಳ ಸಮಸ್ಯೆ ಗಂಭೀರವಾಗಿ ಚರ್ಚೆಯಾಗಿತ್ತು. ಅಲ್ಲದೇ, ಬಿಜೆಪಿಗೆ ನಿರೀಕ್ಷಿತ ಪ್ರಮಾಣದಲ್ಲಿ ಸೀಟುಗಳನ್ನು ಗೆಲ್ಲುವಲ್ಲಿ ಹಿನ್ನಡೆಯಾಗುವುದಕ್ಕೆ ಭಾರತದಲ್ಲಿನ ನಿರುದ್ಯೋಗ ಸಮಸ್ಯೆಯೂ ಕಾರಣ, ಸರ್ಕಾರ ಈ ವಿಷಯವನ್ನು ನಿರ್ಲಕ್ಷಿಸಿತ್ತು ಎಂದು ವಿಶ್ಲೇಷಿಸಲಾಗಿತ್ತು. ಇದಾದ ಮೇಲೆ ಸರ್ಕಾರ ಈ ನಿಟ್ಟಿನಲ್ಲಿ ಗಂಭೀರ ಹೆಜ್ಜೆಗಳನ್ನು ಇರಿಸುತ್ತಿದೆ.
ದೇಶದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳಾಗಿದ್ದಾರೆ. ಈ ಸಮಸ್ಯೆಯನ್ನು ತಪ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು (Pm Internship Scheme) ಎನ್ನುವ ಯೋಜನೆಯನ್ನು ಪರಿಚಯಿಸಿದೆ. ದೇಶದಲ್ಲಿ ಯುವ ನಿರುದ್ಯೋಗಿ ಪ್ರಮಾಣವನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶಗಳಲ್ಲಿ ಒಂದು. ದೇಶದ ಪ್ರತಿಷ್ಠಿತ ಕಂಪನಿಗಳಿಗೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಮತ್ತು ಅರ್ಹತಾ ಮಾನದಂಡಗಳನ್ನು ಬಿಡುಗಡೆ ಮಾಡಿದೆ. ಅಲ್ಲದೇ ಇಂಟರ್ನ್ಶಿಪ್ ಸ್ಕೀಂ ಪ್ರಾಯೋಗಿಕ ಯೋಜನೆಗೆ ಕೇಂದ್ರ ಸರ್ಕಾರವು ಬರೋಬ್ಬರಿ 800 ಕೋಟಿ ರೂಪಾಯಿ ಮೊತ್ತವನ್ನು ಮೀಸಲಿರಿಸಿದೆ.

1 ಕೋಟಿ ಜನರಿಗೆ ಉದ್ಯೋಗ: ಕೇಂದ್ರ ಸರ್ಕಾರವು ಪರಿಚಯಿಸಿರುವ ಈ ಯೋಜನೆಯಿಂದಾಗಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಪ್ರಯೋಗಿಕ ಯೋಜನೆಯಿಂದಾಗಿ ದೇಶದಲ್ಲಿ ಶಿಕ್ಷಣ ಹಾಗೂ ಉದ್ಯೋಗದ ನಡುವೆ ಇರುವ ಕಂದಕ ಮುಚ್ಚಲಿದೆ ಎನ್ನಲಾಗಿದೆ. ಪ್ರತಿ ವರ್ಷವೂ ದೇಶದಲ್ಲಿ ಲಕ್ಷಾಂತರ ಜನ ಪದವಿ ಹಾಗೂ ಉನ್ನತ ವ್ಯಾಸಾಂಗ ಪೂರೈಸುತ್ತಿದ್ದಾರೆ. ಆದರೆ, ಈ ರೀತಿ ಉನ್ನತ ವಿದ್ಯಾಭ್ಯಾಸ ಮಾಡಿದವರಿಗೂ ಕಾಲೇಜು ಮುಗಿಸಿ ಹೊರಗೆ ಬಂದ ಮೇಲೆ ಉದ್ಯೋಗ ಸಿಗುತ್ತಿಲ್ಲ. ಇದಕ್ಕೆ ಶಿಕ್ಷಣ ಹಾಗೂ ಉದ್ಯೋಗ ನಡುವೆ ಇರುವ ಗ್ಯಾಪ್ ಕಾರಣ. ಅಂದರೆ, ಉದ್ಯೋಗಲ್ಲಿ (ಕಂಪನಿಗಳಲ್ಲಿ) ಕೆಲಸ ಮಾಡುವ ಕೌಶಲ್ಯತೆ ಹಾಗೂ ಟೆಕ್ನಿಕ್ಸ್ ಓದಿ ಬರುವ ಹಲವರಲ್ಲಿ ಇರುವುದಿಲ್ಲ ಎನ್ನುವುದು. ಈ ಸಂಬಂಧ ಇತ್ತೀಚಿನ ವರ್ಷಗಳಲ್ಲಿ ಹಲವು ವರದಿ ಪ್ರಕಟವಾಗಿದೆ. ಈಗ ಕೇಂದ್ರ ಸರ್ಕಾರವು ಪರಿಚಯಿಸಿರುವ ಯೋಜನೆಯಿಂದಾಗಿ ವಿದ್ಯಾರ್ಥಿಗಳು ಇಂಟರ್ನ್ಶಿಫ್ ಮಾಡಲಿದ್ದಾರೆ. ಮುಂದೆ ಅವರು ಉದ್ಯೋಗಕ್ಕೆ ಸೇರುವ ಸಂದರ್ಭದಲ್ಲೂ ಇದು ಸಾಕಷ್ಟು ಸಹಕಾರಿಯಾಗಲಿದೆ. ಸುಲಭವಾಗಿ ವಿದ್ಯಾರ್ಥಿಗಳು ಕಂಪನಿಗಳಲ್ಲಿನ ಮ್ಯಾನೇಜ್ಮೆಂಟ್, ಕೆಲಸ ವ್ಯವಸ್ಥೆ ಹಾಗೂ ಮುಖ್ಯವಾಗಿ ಕೆಲಸಗಳಲ್ಲಿನ ಕೌಶಲ್ಯವನ್ನು ಕಲಿಯಬಹುದು.
ಉದ್ದೇಶಿತ ಯೋಜನೆಯಿಂದಾಗಿ ಐದು ವರ್ಷದಲ್ಲಿ ದೇಶದ ಅತ್ಯುನ್ನತ 500 ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಅವಕಾಶ ಸಿಗಲಿದೆ. ಶಿಕ್ಷಣ ಮತ್ತು ಉದ್ಯೋಗದ ನಡುವಿನ ಅಂತರ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ (mca)ವು ಇದಕ್ಕಾಗಿ ಆನ್ಲೈನ್ ಪೋರ್ಟ್ವೊಂದನ್ನು (https://pminternship.mca.gov.in/login/) ಅಭಿವೃದ್ಧಿಪಡಿಸಿದೆ. https://pminternship.mca.gov.in/login/ ಈ ಪೋರ್ಟಲ್ ಇಂಟರ್ನ್ಶಿಪ್ ಮಾಡುವ ವಿದ್ಯಾರ್ಥಿಗಳು ಹಾಗೂ ಕಂಪನಿಗಳ ನಡುವೆ ವೇದಿಕೆ ಸೃಷ್ಟಿಸಲಿದೆ.
ಅಕ್ಟೋಬರ್ 3ರಿಂದ ಅಕ್ಟೋಬರ್ 10ರ ವರೆಗೆ ಕಂಪನಿಗಳು ಇಂಟರ್ನ್ಶಿಪ್ ಯೋಜನೆಯಲ್ಲಿ ಭಾಗವಹಿಸಲಿವೆ ಎಂದು ಹೇಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 12ರ ಮಧ್ಯರಾತ್ರಿಯ ಒಳಗಾಗಿ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಯ್ಕೆಯಾದ ( ಶಾರ್ಟ್ಲಿಸ್ಟ್) ಅಭ್ಯರ್ಥಿಗಳ ಪಟ್ಟಿ ಅಕ್ಟೋಬರ್ 26 ರ ಒಳಗೆ ಕಂಪನಿಗಳಿಗೆ ಸಿಗಲಿದೆ. 12 ತಿಂಗಳ ಕಾಲ ಇಂಟರ್ನ್ಶಿಫ್ ಇರಲಿದೆ. ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಕಂಪನಿಗಳು ನವೆಂಬರ್ 27ರ ಒಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದೇ ವರ್ಷ ಡಿಸೆಂಬರ್ 2 ರಿಂದ 12 ತಿಂಗಳವರೆಗೆ ಇಂಟರ್ನ್ಶಿಫ್ ಇರಲಿದೆ.

12 ತಿಂಗಳ ಅವಧಿಯಲ್ಲಿ ಕನಿಷ್ಠ 6 ತಿಂಗಳ ಅವಧಿಗೆ ಇಂಟರ್ನಿಗಳು ಕಂಪನಿಗಳಲ್ಲಿ ಕೆಲಸ ಮಾಡಲಿದ್ದಾರೆ. ಇಂರ್ಟ್ನಿಗಳು ಆರ್ಥಿಕ ನೆರವನ್ನೂ ಪಡೆಯಲಿದ್ದಾರೆ. ಮಾಸಿಕ 5,000 ಸಾವಿರ ರೂಪಾಯಿ ವೇತನ ಸಿಗಲಿದೆ. ಇದರಲ್ಲಿ ಕೇಂದ್ರ ಸರ್ಕಾರದಿಂದ 4,500 ರೂಪಾಯಿ ಹಾಗೂ ಕಂಪನಿಗಳ ಸಿಎಸ್ಆರ್ ಫಂಡ್ನಿಂದ 500 ರೂಪಾಯಿ ಸಿಗಲಿದೆ. ಅಲ್ಲದೇ ಒಂದು ಬಾರಿಗೆ ಪ್ರತಿ ಇಂಟರ್ನಿಗೂ 6,000 ಸಾವಿರ ರೂಪಾಯಿ ಸಿಗಲಿದೆ ಎಂದು ಹೇಳಲಾಗಿದೆ.
ಈ ರಾಜ್ಯದಲ್ಲಿ ಬೇಡಿಕೆ ಹೆಚ್ಚಳ: ದೇಶದ ವಿವಿಧ ರಾಜ್ಯಗಳಿಂದ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಲ್ಲಿಯವರೆಗೆ ಈ ಯೋಜನೆಯ ಅಡಿಯಲ್ಲಿ 111 ಕಂಪನಿಗಳು ಮುಂದೆ ಬಂದಿವೆ. ದೇಶದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ಉತ್ತರಾಖಂಡ ಹಾಗೂ ತೆಲಂಗಾಣ ಮುಂಚೂಣಿಯಲ್ಲಿದೆ. 1,077 ಆಯ್ಕೆಗಳು (ಆಫರ್ಗಳು) ಈಗಾಗಲೇ ವೆಬ್ಸೈಟ್ನಲ್ಲಿ ದಾಖಲಾಗಿದೆ ಎನ್ನಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications