PM Kisan 22ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಸಂಪೂರ್ಣ ಮಾಹಿತಿ
ನವದೆಹಲಿ: ದೇಶದ ಕೋಟ್ಯಂತರ ರೈತರು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಮುಂದಿನ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಕೃಷಿ ವಲಯದ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷಿ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವಾರ ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ.
ಯಾವಾಗ, ಎಷ್ಟು ಹಣ ಬರಲಿದೆ?
ಮಾರ್ಚ್ 13, 2026 ರಂದು ಗುವಾಹಟಿಯಿಂದ ಡಿಬಿಟಿ (Direct Benefit Transfer) ಮೂಲಕ ನೇರವಾಗಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಲಿದೆ. ಈ ಯೋಜನೆಯಡಿ, ಕೇಂದ್ರ ಸರ್ಕಾರವು ಪ್ರತಿ ವರ್ಷ ರೈತರಿಗೆ ಒಟ್ಟು 6,000 ರೂಪಾಯಿಗಳ ಆರ್ಥಿಕ ನೆರವನ್ನು ಒದಗಿಸುತ್ತದೆ. ಈ ಮೊತ್ತವನ್ನು ತಲಾ 2,000 ರೂ.ಗಳಂತೆ ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗುತ್ತದೆ. ಈ ಹಣವು ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಕೃಷಿ ಉಪಕರಣಗಳು ಸೇರಿದಂತೆ ವಿವಿಧ ಕೃಷಿ ಅಗತ್ಯಗಳನ್ನು ಪೂರೈಸಿಕೊಳ್ಳಲು ನೆರವಾಗುತ್ತದೆ. ಈ ಹಿಂದೆ, 21ನೇ ಕಂತಿನ ಹಣವನ್ನು ನವೆಂಬರ್ 19, 2025 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗಿತ್ತು.

ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣ ನಿಮಗೆ ಬರುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು, ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಫಲಾನುಭವಿಗಳ ಪಟ್ಟಿಯನ್ನು (Beneficiary List) ಪರಿಶೀಲಿಸಬಹುದು.
ಹಂತ 1: ಮೊದಲು ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ (https://pmkisan.gov.in/) ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿರುವ 'ಫಾರ್ಮರ್ಸ್ ಕಾರ್ನರ್' (Farmers Corner) ವಿಭಾಗಕ್ಕೆ ಹೋಗಿ.
ಹಂತ 3: ಮೆನುವಿನಲ್ಲಿರುವ 'ಫಲಾನುಭವಿಗಳ ಪಟ್ಟಿ' (Beneficiary List) ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 4: ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ, ನಂತರ 'ಗೆಟ್ ರಿಪೋರ್ಟ್' (Get Report) ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ಊರಿನ ಎಲ್ಲಾ ಅರ್ಹ ಫಲಾನುಭವಿಗಳ ಹೆಸರು ಪರದೆಯ ಮೇಲೆ ಕಾಣಿಸುತ್ತದೆ.
ಯಾರಿಗೆ 22ನೇ ಕಂತಿನ ಹಣ ಸಿಗುವುದಿಲ್ಲ?
ಪಿಎಂ ಕಿಸಾನ್ ಯೋಜನೆಯಡಿ ನಡೆಯಬಹುದಾದ ಅಕ್ರಮಗಳನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಫೆಬ್ರವರಿ 1, 2019 ರ ನಂತರ ಭೂಮಿಯ ಮಾಲೀಕತ್ವವನ್ನು ಪಡೆದ ಹೊಸ ರೈತರು ಈ ಯೋಜನೆಯ ಲಾಭ ಪಡೆಯಲು ಅರ್ಹರಿರುವುದಿಲ್ಲ. ಇದರ ಜೊತೆಗೆ, ಒಂದೇ ಕುಟುಂಬದ ಒಂದಕ್ಕಿಂತ ಹೆಚ್ಚು ಸದಸ್ಯರು (ಉದಾಹರಣೆಗೆ, ಪತಿ ಮತ್ತು ಪತ್ನಿ, ಅಥವಾ ವಯಸ್ಕ ಸದಸ್ಯ ಮತ್ತು ಅಪ್ರಾಪ್ತ) ಈ ಯೋಜನೆಯ ಹಣ ಪಡೆಯುತ್ತಿರುವುದು ಕಂಡುಬಂದರೆ, ಅಂತಹವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ. ಭೌತಿಕ ಪರಿಶೀಲನೆ (Physical Verification) ಪೂರ್ಣಗೊಳ್ಳುವವರೆಗೆ ಇಂತಹ ಅನುಮಾನಾಸ್ಪದ ಪ್ರಕರಣಗಳಲ್ಲಿ ಹಣ ಬಿಡುಗಡೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಹೊಸ ನೋಂದಣಿಗೆ ಫಾರ್ಮರ್ ಐಡಿ ಕಡ್ಡಾಯ
ಪಿಎಂ ಕಿಸಾನ್ ಯೋಜನೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ನೋಂದಣಿಗೆ ಫಾರ್ಮರ್ ಐಡಿ (Farmer ID) ಯನ್ನು ಕಡ್ಡಾಯಗೊಳಿಸಿದೆ. ಪ್ರಸ್ತುತ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಿರುವ ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಗುಜರಾತ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಒಟ್ಟು 14 ರಾಜ್ಯಗಳಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವವರು ಫಾರ್ಮರ್ ಐಡಿ ಒದಗಿಸುವುದು ಕಡ್ಡಾಯವಾಗಿದೆ. ಇನ್ನುಳಿದ ರಾಜ್ಯಗಳಲ್ಲಿ ನೋಂದಣಿ ಕಾರ್ಯ ಇನ್ನೂ ಶುರುವಾಗದ ಕಾರಣ ಅಲ್ಲಿ ಈ ಐಡಿ ಕಡ್ಡಾಯವಿಲ್ಲ. ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯು ಸಣ್ಣ ಮತ್ತು ಅತಿಸಣ್ಣ ರೈತರ ಬದುಕಿಗೆ ಆಸರೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದ ಉತ್ತೇಜನ ನೀಡುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications