ರೈತರಿಗೆ ಭರ್ಜರಿ ಗುಡ್ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಹಣ ಬಿಡುಗಡೆ ಯಾವಾಗ?
PM-Kisan Samman Nidhi: ರೈತರಿಗೆ ಅನುಕೂಲವಾಗುವಂತೆ ಸರ್ಕಾರಗಳು ಆಗಾಗ ಶುಭ ಸುದ್ದಿಯನ್ನು ನೀಡುತ್ತಲಿರುತ್ತವೆ. ಇದೀಗ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣ ಬಿಡುಗಡೆ ದಿನಾಂಕದ ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹಾಗಾದ್ರೆ ಯಾವಾಗ ರೈತರ ಖಾತೆಗೆ ಜಮೆಯಾಗುವ ಹಣ ಎಷ್ಟು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹೌದು.. ದೇಶದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಹಾಗಾದ್ರೆ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಬಹುತೇಕ ಮಂದಿಯ ತಲೆಯಲ್ಲಿರುತ್ತದೆ. ಇದೆಲ್ಲದಕ್ಕೂ ಉತ್ತರ ಇಲ್ಲಿ ನೀಡಲಾಗಿದೆ ತಿಳಿಯಿರಿ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣವನ್ನು ವರ್ಗಾಯಿಸಲಿದ್ದಾರೆ. ಈ ಹಿಂದೆ 19ನೇ ಕಂತನ್ನು ಫೆಬ್ರವರಿ 2025ರಲ್ಲಿ ಬಿಡುಗಡೆಗೊಳಿಸಲಾಗಿತ್ತು. ಬಳಿಕ ವಿಳಂಬ ಆಗಿದ್ದು, ಇದೀಗ 20ನೇ ಕಂತಿನ ಹಣದ ಬಿಡುಗಡೆಗೊಳಿಸುವ ಬಗ್ಗೆ ಘೋಷಣೆ ಮಾಡಲಾಗಿದೆ.
ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಈ ಬಗ್ಗೆ ಟ್ವೀಟ್ ಮಾಡಿದ್ದು, ಪಿಎಂ ಕಿಸಾನ್ ನಿಧಿಯ 20ನೇ ಕಂರಿನ ಆಗಸ್ಟ್ 2, 2025ರಂದು ಬಿಡುಗಡೆ ಆಗಲಿದೆ" ಎಂದು ತಿಳಿಸಿದೆ. ಇದನ್ನು ಪಡೆಯಬೇಕೆಂದ್ರೆ ಫಲಾನುಭವಿಗಳು, ಕೆವೈಸಿ ಮಾಡಿಸುವುದು ಮುಖ್ಯವಾಗಿದೆ. ಈ ಪ್ರಕ್ರಿಯೆ ಮುಗಿಯದಿದ್ರೆ, ಅಂತಹವರ ಖಾತೆಗೆ ಹಣ ಜಮೆ ಆಗುವುದಿಲ್ಲ.
ಕೇಂದ್ರ ಸರ್ಕಾರ 2019ರಲ್ಲಿ ರೈತರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಿತು. ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ರೈತರಿಗೆ 6000 ರೂಪಾಯಿ ನೀಡಲಾಗುತ್ತದೆ. ಈ ಹಣವನ್ನು 3 ಕಂತುಗಳಲ್ಲಿ ನೀಡಲಾಗುತ್ತದೆ. ಪ್ರತಿ ಕಂತಿನಲ್ಲಿ 2000 ರೂಪಾಯಿನಂತೆ ರೈತರ ಖಾತೆಗೆ ಜಮಾ ಆಗುತ್ತದೆ. ಇದನ್ನು 4 ತಿಂಗಳಿಗೊಮ್ಮೆ ಅವರ ಖಾತೆಗೆ ಜಮೆ ಮಾಡಲಾಗುತ್ತದೆ. ಈ ಯೋಜನೆಯಿಂದ ರೈತರಿಗೆ ತುಂಬಾ ಸಹಾಯ ಆಗಿದೆ.
ರೈತರಿಗೆ ಕೃಷಿ ಖರ್ಚೇನು ಕಡಿಮೆಯೇನು ಬರುವುದಿಲ್ಲ. ಬರೀ ಬೀಜ, ಗೊಬ್ಬ ಸೇರಿದಂತೆ ಇನ್ನಿತರ ಕೃಷಿ ಚಟುವಟಿಗೆ ಹಣ ಬೇಕೇ ಬೇಕಾಗುತ್ತದೆ. ಒಂದು ವೇಳೆ ಇಷ್ಟೆಲ್ಲ ವೆಚ್ಚ ಮಾಡಿ ಬೆಳೆಗಳನ್ನು ಬೆಳೆದರೂ ಫಸಲು ಬಾರದಿದ್ದರೆ, ರೈತರು ತುಂಬಾ ನಷ್ಟ ಅನುಭವಿಸಬೇಕಾಗುತ್ತದೆ. ಇದನ್ನೆಲ್ಲವನ್ನು ಅರಿತುಕೊಂಡು ಕೇಂದ್ರ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ನೀಡುತ್ತಿರುವುದು ರೈತರಿಗೆ ತುಂಬಾ ಸಹಾಯ ಆಗುತ್ತಿದೆ.
ಕೆವೈಸಿ ಮಾಡಿಸುವ ವಿಧಾನಗಳು
* ಪಿಎಂ ಕಿಸಾನ್ನ ಅಧಿಕೃತ ವೆಬ್ಸೈಟ್ pmkisan.gov.inಗೆ ಭೇಟಿ ನೀಡಿ
* ಇ-ಕೆವೈಸಿ ಆಯ್ಕೆ ಮೇಲೆ ಕ್ಲಿಕ್ ಮಾಡಿ
* ಆಧಾರ್ ಸಂಖ್ಯೆಯನ್ನ ನಮೂದಿಸಿ
* ಆಧಾರ್ ಕಾರ್ಡ್ಗೆ ಲಿಂಕ್ ಆದ ಮೊಬೈಲ್ ಸಂಖ್ಯೆಗೆ ಓಟಿಪಿ ಬರುತ್ತದೆ
* ಓಟಿಪಿ ಸಹಾಯದಿಂದ ಪರಿಶೀಲನೆ ಪೂರ್ಣಗೊಳಿಸಿ
* ಬಳಿಕ ನಿಮ್ಮ ಕೆವೈಸಿ ಪೂರ್ಣಗೊಳ್ಳುತ್ತದೆ
ಯೋಜನೆ ಹಾಗೂ ಹಣ ವರ್ಗಾವಣೆ ವಿಧಾನ
* ಯೋಜನೆ ಆರಂಭ: ಫೆಬ್ರವರಿ 2, 2019
* ರೈತರಿಗೆ ವಾರ್ಷಿಕ ಸಿಗುವ ಹಣ: ₹6,000
* ಎಷ್ಟು ತಿಂಗಳಿಗೊಮ್ಮೆ ವಿತರಣೆ: ನಾಲ್ಕು ತಿಂಗಳಿಗೊಮ್ಮೆ 3 ತಿಂಗಳ ಹಣ ವಿತರಣೆ
* ಪ್ರತಿ ಕಂತಿನಲ್ಲಿ ನೀಡಲಾಗುವ ಹಣ: 2,000 ರೂಪಾಯಿ
* ಹಣ ವರ್ಗಾವಣೆ ವಿಧಾನ: ನೇರ ಲಾಭ ವರ್ಗಾವಣೆ ಕಾರ್ಯವಿಧಾನದ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ
-
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ಮುಂಬೈಗೆ ಪರಿಸರ ಸ್ನೇಹಿ ವಿದ್ಯುತ್ ಪೂರೈಕೆ: ಅದಾನಿ ಎನರ್ಜಿಯಿಂದ 1,000 ಮೆಗಾವ್ಯಾಟ್ ಸಾಮರ್ಥ್ಯದ ಪವರ್ ಲಿಂಕ್ ಚಾಲನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications