ಮೋದಿ 3.0: ಮೊದಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್, ದಿನಾಂಕ ಮಾಹಿತಿ
ನವದೆಹಲಿ, ಜೂನ್ 12: ಕೇಂದ್ರದಲ್ಲಿ ಈಗಷ್ಟೇ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಚುಕ್ಕಾಣೆ ಹಿಡಿದಿದ್ದಾರೆ. ಇದೀಗ 18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ದಿನಾಂಕ್ ಫೀಕ್ಸ್ ಆಗಿದೆ.
ಸಂಸತ್ನಲ್ಲಿ 18ನೇ ಲೋಕಸಭೆಯ ಮೊದಲ ಅಧಿವೇಶನವು ಇದೇ ಜೂನ್ 24 ರಂದು ಆರಂಭಗೊಳ್ಳಲಿದೆ. ಹತ್ತು ದಿನಗಳ ಅಧಿವೇಶನ ಇದಾಗಿರಲಿದೆ ಎಂದು ಬುಧವಾರ ನೂತನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಾಹಿತಿ ನೀಡಿದರು.

ಲೋಕಸಭೆಯ ಮೊದಲ ಅಧಿವೇಶನ ಇದೇ ಜೂನ್ 24ರಂದು ಜೂಲೈ 3ರವರೆಗೆ ಜರುಗಲಿದೆ. ಈ ವೇಳೆ ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ/ದೃಢೀಕರಣ, ಸ್ಪೀಕರ್ ಆಯ್ಕೆ, ಅಧ್ಯಕ್ಷರ ಭಾಷಣ ಮತ್ತು ಅದರ ಮೇಲಿನ ಚರ್ಚೆಗಳು ನಡೆಯಲಿವೆ ಎಂದರು.
ರಾಜ್ಯಸಭೆಯ ಅಧಿವೇಶನ ದಿನಾಂಕ ಪ್ರಕಟ
ಇನ್ನೂ ರಾಜ್ಯಸಭೆಯ 264ನೇ ಅಧಿವೇಶನವು ಇದೇ ಜೂನ್ 27ರಿದ ಆರಂಭವಾಗಿ ಜುಲೈ 3ರಂದು ಮುಕ್ತಾಯಗೊಳ್ಳುತ್ತದೆ ಎಂದು ಮಾಹಿತಿ ನೀಡಿದರು.
ಇನ್ನೂ ಸಂಸತ್ ಅಧಿವೇಶನದಲ್ಲಿ ಸದನದ ಕಲಾಪ ಸುಸೂತ್ರವಾಗಿ ನಡೆಯಬೇಕು. ಇಲ್ಲಿ ಒಬ್ಬರು ಇನ್ನೊಬ್ಬರ ಕಾಲು ಎಳೆಯುವ ಅಗತ್ಯವಿಲ್ಲ. ಅಧಿವೇಶನ ಒಂದು ಉತ್ತಮ ಮತ್ತು ಧನಾತ್ಮಕ ಚರ್ಚೆಗಳಿಗೆ, ಮಹತ್ತರ ವಿಷಯಗಳ ಚರ್ಚೆಗೆ ಬಳಕೆ ಆಗಬೇಕು ಎಂದು ಹೇಳುವ ಮೂಲಕ ಅವರು ಗಮನ ಸೆಳೆದರು.
ಖಾತೆ ಹಂಚಿಕೆ ಬಗ್ಗೆ ಟೀಕಿಸಿದ್ದ ಜೈರಾಮ್ ರಮೇಶ್
ಕಿರಣ್ ರಿಜಿಜು ಅವರು ಅಧಿಕಾರ ವಹಿಸಿಕೊಳ್ಳುವ ಮೊದಲು, ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಈ ಖಾತೆ ಕುರಿತು ಟೀಕಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಕಳೆ ದಶಕದಲ್ಲಿ ಅವರು ನಡೆಸಿದ ವಿಧಾನಕ್ಕಿಂತ ಭಿನ್ನವಾಗಿ ಸಂಸತ್ತು ಕಾರ್ಯ ನಿರ್ವಹಿಸಬೇಕೆಂದು ಬಯಸುತ್ತಾರೆ. ಸಂಸದೀಯ ವ್ಯವಹಾರಗಳ ಖಾತೆಗಳ ಹಂಚಿಕೆಯು ಈ ಭಾರಿ ವಿಶ್ವಾಸ ತರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು.
ಕಾಂಗ್ರೆಸ್ ಪಕ್ಷದ ಚುನಾಯಿತ ನೂತನ ಸಂಸದ ಗೌರವ್ ಗೊಗೊಯ್ ಅವರು ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಸ್ತುತ ಸದನದಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ 293 ಸಂಸದರನ್ನು ಹೊಂದಿದ್ದರೆ ಪ್ರತಿಪಕ್ಷ I.N.D.I.A ಮೈತ್ರಿಕೂಟವು 240 ಸ್ಥಾನಗಳನ್ನು ಹೊಂದುವ ಮೂಲಕ ವಿಪಕ್ಷ ಸ್ಥಾನದಲ್ಲಿ ಕೂತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications