ಬಿಬಿಸಿ ರೇಡಿಯೋ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತಾಯಿ ವಿರುದ್ಧ ಅವಾಚ್ಯ ಪದಗಳಿಂದ ನಿಂದನೆ
ನವದೆಹಲಿ, ಮಾರ್ಚ್ 3: ಬಿಬಿಸಿ ಏಷ್ಯನ್ ನೆಟ್ವರ್ಕ್ ಆಯೋಜಿಸಿದ್ದ 'ಬಿಗ್ ಡಿಬೇಟ್' ರೇಡಿಯೋ ಕಾರ್ಯಕ್ರಮದ ನೇರ ಪ್ರಸಾರದ ವೇಳೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ 99 ವರ್ಷದ ತಾಯಿ ಹೀರಾಬೆನ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬ್ರಿಟನ್ನಲ್ಲಿ ಸಿಖ್ಖರು ಹಾಗೂ ಭಾರತೀಯರ ಮೇಲಿನ ಜನಾಂಗೀಯ ನಿಂದನೆ ಕುರಿತು ಸಂವಾದ ನಡೆಯುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಅಂಗೀಕರಿಸಿದ ಮೂರು ಕೃಷಿ ಸುಧಾರಣಾ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯತ್ತ ಚರ್ಚೆ ಹೊರಳಿತು. ಆಗ ಒಬ್ಬ ವ್ಯಕ್ತಿ ಪ್ರಧಾನಿ ಹಾಗೂ ಅವರ ತಾಯಿಯ ವಿರುದ್ಧ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದ್ದಾನೆ.
ನಿರೂಪಕಿ ಪ್ರಿಯಾ ರೈ ಅವರು ಬಿಬಿಸಿ ಸೌಂಡ್ಸ್ನಲ್ಲಿ ನಡೆಸಿಕೊಟ್ಟ ಈ ಕಾರ್ಯಕ್ರಮ ಮಾರ್ಚ್ 1ರಂದು ಪ್ರಸಾರವಾಗಿದೆ. ಸುಮಾರು ಮೂರು ಗಂಟೆಗಳ ಈ ಕಾರ್ಯಕ್ರಮದಲ್ಲಿ ನಿರೂಪಕಿ, ಜನರ ಕರೆಗಳನ್ನು ಸ್ವೀಕರಿಸಿ ಅವರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದರು. ಅವರಲ್ಲಿ ಅನೇಕರು ಬ್ರಿಟನ್ನಲ್ಲಿ ಸಿಖ್ಖರು ಎದುರಿಸುವ ಸಂಕಷ್ಟಗಳ ಬಗ್ಗೆ ಹೇಳಿಕೊಂಡಿದ್ದರು.

ಇದೇ ವೇಳೆ ಕರೆ ಮಾಡಿದ್ದ ಸೈಮನ್ ಎಂಬ ವ್ಯಕ್ತಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯ ಕುರಿತು ಕೀಳುಮಟ್ಟದ ಪದಗಳನ್ನು ಬಳಸಿದ್ದಾನೆ. ಅದರಲ್ಲಿಯೂ ಹೀರಾಬೆನ್ ವಿರುದ್ಧ ಅಶ್ಲೀಲ ಹಾಗೂ ಹಿಂಸೆಯ ಪದಗಳನ್ನು ಉಪಯೋಗಿಸಿದ್ದಾನೆ. ಇದರಿಂದ ಗೊಂದಲಕ್ಕೆ ಒಳಗಾದ ನಿರೂಪಕಿ, ಪರಿಸ್ಥಿತಿಯನ್ನು ಸರಿಪಡಿಸಲು ಕರೆ ತುಂಡರಿಸಿದ್ದಾರೆ.
ಬಿಬಿಸಿ ನೆಟ್ವರ್ಕ್ ಕಾರ್ಯಕ್ರಮವನ್ನು ಎಡಿಟ್ ಮಾಡಿದ್ದು, ಕೀಳು ಪದ ಪ್ರಯೋಗವನ್ನು ತೆಗೆದುಹಾಕಿದೆ. ಈ ಘಟನೆಗಾಗಿ ಪ್ರಿಯಾ ರೈ ಕ್ಷಮೆ ಕೋರಿದ್ದಾರೆ. ಆದರೆ ಇದುವರೆಗೂ ಬಿಬಿಸಿ ಕ್ಷಮೆ ಕೋರಿಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications