ಮೋದಿ ಮಾತಿಗೆ ಬೆಲೆಕೊಟ್ಟು ವಿಲೀನಕ್ಕೆ ಒಪ್ಪಿಕೊಂಡೆ: ಓಪಿಎಸ್
ಚೆನ್ನೈ, ಫೆ 18: ದಿವಂಗತ ಮುಖ್ಯಮಂತ್ರಿ ಜಯಲಲಿತಾ ನಿಧನದ ನಂತರ ಮನೆಯೊಂದು ಊರೆಲ್ಲಾ ಬಾಗಿಲಾಗಿದ್ದ ಎಐಎಡಿಎಂಕೆ ಪಕ್ಷವನ್ನು ಪ್ರಧಾನಿ ಮೋದಿಯವರ ಮಾತಿಗೆ ಬೆಲೆಕೊಟ್ಟು ಮತ್ತೆ ವಿಲೀನ ಮಾಡಿಕೊಳ್ಳಲು ಒಪ್ಪಿಕೊಂಡೆ ಎಂದು ಉಪ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಎರಡು ಬಣವಾಗಿ ಪಕ್ಷದ ಕಿಚ್ಚಾಟ ನಿರ್ಣಾಯಕ ಹಂತ ತಲುಪಿದ್ದಾಗ, ಪ್ರಧಾನಿ ಮೋದಿ ನಿಮ್ಮ ಪಕ್ಷವನ್ನು ಈ ಕೂಡಲೇ ಎಐಎಡಿಎಂಕೆ ಜೊತೆ ವಿಲೀನಗೊಳಿಸಿ ಎಂದು ಸೂಚಿಸಿದ್ದರು. ಅವರ ಮಾತಿಗೆ ಬೆಲೆಕೊಟ್ಟು ವಿಲೀನಕ್ಕೆ ಒಪ್ಪಿಕೊಂಡು, ಆದರೆ ಸರಕಾರದ ಭಾಗವಾಗುವುದಿಲ್ಲ ಎಂದಿದ್ದೆ.
ಆದರೆ, ನಿಮ್ಮಂತಹ ಅನುಭವಿ ನಾಯಕರ ಅವಶ್ಯಕತೆ ರಾಜ್ಯಕ್ಕಿದೆ. ನೀವು ಕೂಡಾ ಸರಕಾರದ ಭಾಗವಾಗಬೇಕೆಂದು ಮೋದಿ ಹೇಳಿದ್ದರು. ಹಾಗಾಗಿ, ನಮ್ಮ ಪಕ್ಷವನ್ನು ವಿಲೀನಗೊಳಿಸಿ, ಉಪಮುಖ್ಯಮಂತ್ರಿ ಆಗಿದ್ದೇನೆಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.

ಥೇಣಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪನ್ನೀರ್ ಸೆಲ್ವಂ, ಹೋದ ವರ್ಷ ಆಗಸ್ಟ್ ತಿಂಗಳಲ್ಲಿ ಪ್ರಧಾನಿಯವರ ಭೇಟಿಗೆ ಹೋಗಿದ್ದೆ. ನನ್ನ ಜೊತೆ ಮಾತನಾಡುತ್ತಾ, ಜಯಲಲಿತಾ ನಿಮ್ಮ ಬಗ್ಗೆ ತುಂಬಾ ಗೌರವದ ಮಾತನ್ನಾಡುತ್ತಿದ್ದರು ಎಂದು ಮೋದಿ ಹೇಳಿದ್ದರು ಎಂದು ಓಪಿಎಸ್ ಅಂದು ನಡೆದ ಮಾತುಕತೆಯ ಬಗ್ಗೆ ವಿವರಿಸಿದ್ದಾರೆ.
ಪಳನಿಸ್ವಾಮಿ ಸರಕಾರದ ಭಾಗವಾದ ನಂತರ, ಶಶಿಕಲಾ ಬಣ ಓಪಿಎಸ್ ಅವರ ವಿಶ್ವಾಸಾರ್ಹತೆಯ ಬಗ್ಗೆ ಮಾತನ್ನಾಡಿತ್ತು. ಈ ಬಗ್ಗೆ ಪ್ರಸ್ತಾವಿಸಿದ ಪನ್ನೀರ್ ಸೆಲ್ವಂ, ಪಕ್ಷದ ಮೇಲಿನ ನಿಯತ್ತಿನ ಬಗ್ಗೆ ಯಾರೂ ನನಗೆ ಸರ್ಟಿಫಿಕೇಟ್ ನೀಡಬೇಕಾಗಿಲ್ಲ ಎಂದು ಓಪಿಎಸ್ ಹೇಳಿದ್ದಾರೆ.
ಎರಡು ಬಣಗಳು (ಇಪಿಎಸ್, ಓಪಿಎಸ್) ಒಂದಾದ ನಂತರ ನಡೆದ ಚೆನ್ನೈ ನಗರದ ಆರ್ ಕೆ ನಗರ ಅಸೆಂಬ್ಲಿ ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಸೋಲು ಅನುಭವಿಸಿತ್ತು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications