ಮೋದಿ ಮಾತಿಗೆ ಬೆಲೆಕೊಟ್ಟು ವಿಲೀನಕ್ಕೆ ಒಪ್ಪಿಕೊಂಡೆ: ಓಪಿಎಸ್
ಚೆನ್ನೈ, ಫೆ 18: ದಿವಂಗತ ಮುಖ್ಯಮಂತ್ರಿ ಜಯಲಲಿತಾ ನಿಧನದ ನಂತರ ಮನೆಯೊಂದು ಊರೆಲ್ಲಾ ಬಾಗಿಲಾಗಿದ್ದ ಎಐಎಡಿಎಂಕೆ ಪಕ್ಷವನ್ನು ಪ್ರಧಾನಿ ಮೋದಿಯವರ ಮಾತಿಗೆ ಬೆಲೆಕೊಟ್ಟು ಮತ್ತೆ ವಿಲೀನ ಮಾಡಿಕೊಳ್ಳಲು ಒಪ್ಪಿಕೊಂಡೆ ಎಂದು ಉಪ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಎರಡು ಬಣವಾಗಿ ಪಕ್ಷದ ಕಿಚ್ಚಾಟ ನಿರ್ಣಾಯಕ ಹಂತ ತಲುಪಿದ್ದಾಗ, ಪ್ರಧಾನಿ ಮೋದಿ ನಿಮ್ಮ ಪಕ್ಷವನ್ನು ಈ ಕೂಡಲೇ ಎಐಎಡಿಎಂಕೆ ಜೊತೆ ವಿಲೀನಗೊಳಿಸಿ ಎಂದು ಸೂಚಿಸಿದ್ದರು. ಅವರ ಮಾತಿಗೆ ಬೆಲೆಕೊಟ್ಟು ವಿಲೀನಕ್ಕೆ ಒಪ್ಪಿಕೊಂಡು, ಆದರೆ ಸರಕಾರದ ಭಾಗವಾಗುವುದಿಲ್ಲ ಎಂದಿದ್ದೆ.
ಆದರೆ, ನಿಮ್ಮಂತಹ ಅನುಭವಿ ನಾಯಕರ ಅವಶ್ಯಕತೆ ರಾಜ್ಯಕ್ಕಿದೆ. ನೀವು ಕೂಡಾ ಸರಕಾರದ ಭಾಗವಾಗಬೇಕೆಂದು ಮೋದಿ ಹೇಳಿದ್ದರು. ಹಾಗಾಗಿ, ನಮ್ಮ ಪಕ್ಷವನ್ನು ವಿಲೀನಗೊಳಿಸಿ, ಉಪಮುಖ್ಯಮಂತ್ರಿ ಆಗಿದ್ದೇನೆಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.

ಥೇಣಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪನ್ನೀರ್ ಸೆಲ್ವಂ, ಹೋದ ವರ್ಷ ಆಗಸ್ಟ್ ತಿಂಗಳಲ್ಲಿ ಪ್ರಧಾನಿಯವರ ಭೇಟಿಗೆ ಹೋಗಿದ್ದೆ. ನನ್ನ ಜೊತೆ ಮಾತನಾಡುತ್ತಾ, ಜಯಲಲಿತಾ ನಿಮ್ಮ ಬಗ್ಗೆ ತುಂಬಾ ಗೌರವದ ಮಾತನ್ನಾಡುತ್ತಿದ್ದರು ಎಂದು ಮೋದಿ ಹೇಳಿದ್ದರು ಎಂದು ಓಪಿಎಸ್ ಅಂದು ನಡೆದ ಮಾತುಕತೆಯ ಬಗ್ಗೆ ವಿವರಿಸಿದ್ದಾರೆ.
ಪಳನಿಸ್ವಾಮಿ ಸರಕಾರದ ಭಾಗವಾದ ನಂತರ, ಶಶಿಕಲಾ ಬಣ ಓಪಿಎಸ್ ಅವರ ವಿಶ್ವಾಸಾರ್ಹತೆಯ ಬಗ್ಗೆ ಮಾತನ್ನಾಡಿತ್ತು. ಈ ಬಗ್ಗೆ ಪ್ರಸ್ತಾವಿಸಿದ ಪನ್ನೀರ್ ಸೆಲ್ವಂ, ಪಕ್ಷದ ಮೇಲಿನ ನಿಯತ್ತಿನ ಬಗ್ಗೆ ಯಾರೂ ನನಗೆ ಸರ್ಟಿಫಿಕೇಟ್ ನೀಡಬೇಕಾಗಿಲ್ಲ ಎಂದು ಓಪಿಎಸ್ ಹೇಳಿದ್ದಾರೆ.
ಎರಡು ಬಣಗಳು (ಇಪಿಎಸ್, ಓಪಿಎಸ್) ಒಂದಾದ ನಂತರ ನಡೆದ ಚೆನ್ನೈ ನಗರದ ಆರ್ ಕೆ ನಗರ ಅಸೆಂಬ್ಲಿ ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಸೋಲು ಅನುಭವಿಸಿತ್ತು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications