PM Modi BBC documentary: JNU ಕ್ಯಾಂಪಸ್ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸದಂತೆ ವಿದ್ಯಾರ್ಥಿ ಸಂಘಕ್ಕೆ ಎಚ್ಚರಿಕೆ
ನವದೆಹಲಿ, ಜನವರಿ 23: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಜೆಎನ್ಯು ವಿದ್ಯಾರ್ಥಿ ಸಂಘಟನೆ ಭಿತ್ತಿಪತ್ರಗಳನ್ನು ಹಂಚಿತ್ತು. ಇದಕ್ಕೆ ಆಡಳಿತ ಮಂಡಲಿ ಆಕ್ಷೇಪ ವ್ಯಕ್ತಪಡಿಸಿದೆ.
ಜೆಎನ್ಯು ಕ್ಯಾಂಪಸ್ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಬಾರದು ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಸೋಮವಾರ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರವು ದೇಶದಲ್ಲಿ ಈ ಸಾಕ್ಷ್ಯಾಚಿತ್ರಕ್ಕೆ ನಿಷೇಧ ಹೇರಿದ್ದು, ಆದೇಶವನ್ನು ಧಿಕ್ಕರಿಸುವ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್ಯುಎಸ್ಯು) ಮಂಗಳವಾರ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಸೋಮವಾರ ಕ್ಯಾಂಪಸ್ನಲ್ಲಿ ಕರಪತ್ರವನ್ನು ಬಿಡುಗಡೆ ಮಾಡಿತ್ತು. ಇದರ ನಂತರ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

ಜೆಎನ್ಯು ಆಡಳಿತವು ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ರದ್ದುಗೊಳಿಸಿದೆ. ಇದನ್ನು ಕ್ಯಾಂಪಸ್ನಲ್ಲಿ ಪ್ರದರ್ಶಿಸುವುದು "ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು" ಎಂದು ಹೇಳಿದ್ದಾರೆ.
"ಜೆಎನ್ಯುಎಸ್ಯು ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪು 24 ಜನವರಿ 2023 ರಂದು ರಾತ್ರಿ 9:00 ಗಂಟೆಗೆ "ಭಾರತ: ಮೋದಿ ಪ್ರಶ್ನೆ" ಎಂಬ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಜೆಎನ್ಯು ಆಡಳಿತದಿಂದ ಅನುಮತಿಯನ್ನು ತೆಗೆದುಕೊಳ್ಳಲಾಗಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್ನ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು" ಎಂದು ಹೇಳಿದೆ.
"ಸಂಬಂಧಿತ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸೂಚಿಸಲಾಗಿದೆ. ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಠಿಣ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ" ಎಂದು ಪ್ರಕಟಣೆ ತಿಳಿಸಿದೆ.

"ಭಾರತ: ಮೋದಿ ಪ್ರಶ್ನೆ" ಎಂಬ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಯ ನಂತರದ ಪರಿಣಾಮಗಳನ್ನು ವಿವರಿಸುತ್ತದೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗಲಭೆಗಳನ್ನು ನಿಭಾಯಿಸಿದ ರೀತಿಯನ್ನು ಪ್ರಶ್ನಿಸುತ್ತದೆ.
ಇನ್ನು, ಸರ್ಕಾರವು ಸಾಕ್ಷ್ಯಚಿತ್ರದ ಲಿಂಕ್ಗಳನ್ನು ಹಂಚಿಕೊಳ್ಳುವ ಯೂಟ್ಯೂಬ್ ವಿಡಿಯೋಗಳು ಮತ್ತು ಟ್ವಿಟರ್ ಪೋಸ್ಟ್ಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಿದೆ ಎಂದು ವರದಿಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications