ಭಾರತ ರತ್ನತ್ರಯರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು ಹೀಗೆ...
ನವದೆಹಲಿ, ಜನವರಿ 26: ಭಾರತ ರತ್ನ ಪ್ರಶಸ್ತಿ ಪಡೆದ ಮೂವರು ಸಾಧಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತಕಂಠದಿಂದ ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಕೇಂದ್ರ ಸರ್ಕಾರ ಶುಕ್ರವಾರ 2019ನೇ ಸಾಲಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಗಾಯಕ ಭೂಪೇನ್ ಹಜಾರಿಕಾ ಹಾಗೂ ನಾನಾಜಿ ದೇಶ್ ಮುಖ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕದ ಪ್ರಭುದೇವ (ಸಂಗೀತ,ನೃತ್ಯ), ರೋಹಿಣಿ ಗೋಡುಬಳೆ (ವಿಜ್ಞಾನ, ಇಂಜಿನಿಯರಿಂಗ್), ಶಾರದಾ ಶ್ರೀನಿವಾಸನ್ (ಪುರಾತತ್ವ), ರಾಜೀವ್ ತಾರಾನಾಥ್ (ಸಂಗೀತ, ಕಲೆ), ಸಾಲುಮರದ ತಿಮ್ಮಕ್ಕ (ಸಮಾಜ ಸೇವೆ) ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದ್ದು, ಎಲ್ಲಾ ಪದ್ಮ ಪ್ರಶಸ್ತಿ ವಿಜೇತರಿಗೂ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ ರತ್ನತ್ರಯರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು ಹೀಗೆ...
|
ನಾನಾಜಿ ದೇಶ್ ಮುಖ್
"ಗ್ರಾಮೀಣಾಭಿವೃದ್ಧಿಗಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದ, ಗ್ರಾಮೀಣ ಪ್ರದೇಶದ ಎಷ್ಟು ಜನರ ಸಬಲೀಕರಣಕ್ಕೆ ಕಾರಣರಾಗಿ ಮಾದರಿಯಾದವರು ನಾನಾಜಿ ದೇಶ್ ಮುಖ್. ಮಾನವೀಯತೆ, ಸೇವೆ ಮತ್ತು ಸಹಾನುಬೂತಿಯ ಖನಿ ನಾನಜಿ ಅವರಿಗೆ ಭಾರತ ರತ್ನ ಸಿಕ್ಕಿದ್ದು ಅತ್ಯಂತ ಸೂಕ್ತ" -ನರೇಂದ್ರ ಮೋದಿ
|
ಭೂಪೇನ್ ಹಜಾರಿಕಾ
"ಭೂಪೇನ್ ಹಜಾರಿಕಾ ಅವರ ಹಾಡುಗಳು ಹಲವು ಪೀಳಿಗೆಯ ಜನರಲ್ಲೂ ಸ್ಫೂರ್ತಿ ತುಂಬಲಿದೆ. ಆ ಹಾಡುಗಳು ನ್ಯಾಯ, ಸೌಹಾರ್ದತೆ ಮತ್ತು ಭ್ರಾತೃತ್ವದ ಕಿರಣವನ್ನು ಪಸರಿಸಲಿವೆ. ಅವರು ಜಾಗತಿಕ ಮಟ್ಟದಲ್ಲಿ ಭಾರತದ ಸಂಗೀತ ಪರಂಪರೆಯನ್ನು ಜನಪ್ರಿಯಗೊಳಿಸಿದರು. ಅವರಿಗೆ ಭಾರತರತ್ನ ದೊರಕಿದ್ದು ಕೇಳಿ ಸಂತಸವಾಗಿದೆ"- ನರೇಂದ್ರ ಮೋದಿ
|
ಪ್ರಣಬ್ ಮುಖರ್ಜಿ
"ನಮ್ಮ ಕಾಲದ ಅತ್ಯುತ್ತಮ ರಾಜನೀತಿಜ್ಞ ಪ್ರಣಬ್ ದಾ ಅವರು. ಅವರು ದಶಕಗಳಿಂದ ನಿಸ್ವಾರ್ಥವಾಗಿ ದೇಶ ಸೇವೆ ಮಾಡಿದ್ದಾರೆ. ದೇಶದ ಅಭಿವೃದ್ಧಿ ಪಧದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದಾರೆ. ಅವರ ಪಾಂಡಿತ್ಯ, ಬುದ್ಧಿಮತ್ತೆ ಆದರ್ಶನೀಯ. ಅವರಿಗೆ ಭಾರತ ರತ್ನ ಸಿಕ್ಕಿದೆ ಎನ್ನಲು ಹೆಮ್ಮೆಯಾಗುತ್ತಿದೆ"- ನರೇಂದ್ರ ಮೋದಿ
|
ಪದ್ಮ ಪ್ರಶಸ್ತಿ ವಿಜೇತರಿಗೆ ಅಭಿನಂದನೆ
"ಪದ್ಮ ಪ್ರಶಸ್ತಿಯನ್ನು ಗೆದ್ದ ಎಲ್ಲರಿಗೂ ಅಭಿನಂದನೆಗಳು. ತಮ್ಮದೇ ಆದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಈ ಪ್ರಶಸ್ತಿ ವಿಜೇತರೆಲ್ಲರೂ ಭಾರತದ ಹೆಮ್ಮೆ. ಈ ಜಗತ್ತಿನಲ್ಲಿ ನಮ್ಮ ದೇಶದ ಕೀರ್ತಿಯನ್ನು ಅವರೆಲ್ಲ ಹೆಚ್ಚಿಸಿದ್ದಾರೆ"- ನರೇಂದ್ರ ಮೋದಿ
-
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್












Click it and Unblock the Notifications