ವಿದೇಶ ಪ್ರವಾಸಕ್ಕೆ ಟೀಕೆ: ಪ್ರಧಾನಿ ಮೋದಿ ಮಾಸ್ಟರ್ ಪ್ಲಾನ್
ತನ್ನ ನಿರಂತರ ವಿದೇಶ ಪ್ರವಾಸವನ್ನೇ ವಿರೋಧ ಪಕ್ಷಗಳು ದಾಳವಾಗಿ ಉಪಯೋಗಿಸಿ ಕೊಳ್ಳುತ್ತಿರುವುದಕ್ಕೆ ಪ್ರಧಾನಮಂತ್ರಿ ಕಾರ್ಯಾಲಯ ನರೇಂದ್ರ ಮೋದಿಗೆ ಹೊಸ ಐಡಿಯಾ ನೀಡಿದೆ ಎಂದು ವರದಿಯಾಗಿದೆ.
ಆ ಮೂಲಕ ವಿರೋಧ ಪಕ್ಷಗಳ ಬಾಯಿಮುಚ್ಚಿಸಲು ಪ್ರಧಾನಿ ಮುಂದಿನ ದಿನಗಳಲ್ಲಿ ಹೊಸ ಕಾರ್ಯತಂತ್ರ ರೂಪಿಸಲಿದ್ದಾರೆನ್ನುವ ಖಚಿತ ಮಾಹಿತಿ ಲಭ್ಯವಾಗಿದೆ.

ಅಧಿಕಾರಕ್ಕೆ ಬಂದ ಒಂದು ವರ್ಷ ಪೂರೈಸುವುದಕ್ಕೆ ಮುನ್ನವೇ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿರುವ ಮೋದಿ, ವಿರೋಧ ಪಕ್ಷಗಳಿಂದ ಮತ್ತೆ ಸಾಮಾಜಿಕ ತಾಣದ ಮೂಲಕವೂ ಟೀಕೆಗೆ ಒಳಗಾಗಿದ್ದರು.
ಇದಕ್ಕೆ ಪ್ರಧಾನಮಂತ್ರಿ ಕಾರ್ಯಾಲಯ ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿಯವರ ವರ್ಚಸ್ಸು ಕಮ್ಮಿಯಾಗದ ಹಾಗೆ ಮತ್ತು ವಿರೋಧ ಪಕ್ಷದ ಬಾಯಿ ಮುಚ್ಚಿಸಲು ಮಾಸ್ಟರ್ ಪ್ಲಾನ್ ರೂಪಿಸಿದೆ ಎಂದು ತಿಳಿದುಬಂದಿದೆ. (3 ದೇಶಗಳ ಪ್ರವಾಸ ಫಲ ನೀಡಿದೆ: ನರೇಂದ್ರ ಮೋದಿ)
ಲೋಕಸಭಾ ಚುನಾವಣೆಗೆ ಬಿಜೆಪಿ ಬಳಸಿದ ಯಶಸ್ವೀ ತಂತ್ರವೊಂದಾದ 3D ಹೋಲೋಗ್ರಾಂ ತಂತ್ರವನ್ನು ಪ್ರಧಾನಿ ಕಾರ್ಯಾಲಯ ಮತ್ತೆ ಬಳಸಿಕೊಳ್ಳಲು ಮುಂದಾಗಿದೆ ಎನ್ನುವುದು ಈಗ ಸಿಕ್ಕಿರುವ ಖಚಿತ ಮಾಹಿತಿ.
ಪ್ರಧಾನಿಯವರ ಯುರೋಪ್ ಮತ್ತು ಕೆನಡಾ ಪ್ರವಾಸದ ವೇಳೆಯೇ ಈ ತಂತ್ರವನ್ನು ಬಳಸಿಕೊಳ್ಳಲು ಕಾರ್ಯಾಲಯ ನಿರ್ಧರಿಸಿತ್ತಂತೆ. ಆದರೆ, ಮೋದಿ ಕೊನೆ ಗಳಿಗೆಯಲ್ಲಿ ಇದಕ್ಕೆ ಅನುಮತಿ ನೀಡಿರಲಿಲ್ಲ ಎನ್ನುವುದು ಪ್ರಧಾನಿ ಕಾರ್ಯಾಲಯದ ಮಾಹಿತಿ.
ತನ್ನ ಕಾರ್ಯಾಲಯ ನೀಡಿದ ಈ ಉಪಯುಕ್ತ ಐಡಿಯಾಗೆ ಪ್ರಧಾನಿ ಫಿದಾ ಆಗಿದ್ದಾರೆ. ಈಗಾಗಲೇ ಅಖೈರು ಆಗಿರುವ ವಿದೇಶ ಪ್ರವಾಸಕ್ಕೆ ತನ್ನ ಬದಲು ಪ್ರತಿನಿಧಿಯನ್ನು ಕಳುಹಿಸಿ 3D ಹೋಲೋಗ್ರಾಂ ತಂತ್ರಜ್ಞಾನದ ಮೂಲಕ ಭಾಷಣ ಮಾಡಿ ಸಂದೇಶ ರವಾನಿಸಲು ನಿರ್ಧರಿಸಲಾಗಿದೆ.

ಮುಂದಿನ ವಿದೇಶ ಪ್ರವಾಸದ ವೇಳೆ ಪ್ರಧಾನಿಯವರ ಖುದ್ದು ಹಾಜರಾತಿ ಇರದೇ ಇರುವುದರಿಂದ ಅನಿವಾಸಿ ಭಾರತೀಯರಿಗೆ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಜನಮನ್ನಣೆಗಳಿಸುವಂತಹ ಭಾಷಣ ರೂಪಿಸಲು ಹೊಸ ಐಡಿಯಾಲಜಿ ಇರುವ ಯವಕರನ್ನು ನಿಯೋಜಿಸಲು ಪ್ರಧಾನಿ ಕಾರ್ಯಾಲಯ, ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಸೂಚಿಸಿದೆ ಎನ್ನಲಾಗುತ್ತಿದೆ.
ಪ್ರಧಾನ ಮಂತ್ರಿ ಕಾರ್ಯಾಲಯದ ಈ ಹೊಸ ಟೆಕ್ನಾಲಜಿ ಮುಂದಿನ ದಿನದಲ್ಲಿ ಯಾವ ರೂಪದಲ್ಲಿ ಕಾರ್ಯರೂಪಕ್ಕೆ ಬರಲಿದೆ ಮತ್ತು ಎಷ್ಟರ ಮಟ್ಟಿಗೆ ಯಶಸ್ಸು ಪಡೆಯಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. (ಕಾಲ್ಪನಿಕ ಲೇಖನ, ಕೃಪೆ : ಫಸ್ಟ್ ಪೋಸ್ಟ್)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications