Lok Sabha Election: ಗೆದ್ದು ಬನ್ನಿ, ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ: ಸಚಿವರಿಗೆ ಮೋದಿ ಸಂದೇಶ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು, ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅವರಿಗೆ "ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ" ಎಂದು ಸಂದೇಶವನ್ನು ನೀಡಿದ್ದಾರೆ.

ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ 'ವಿಕಸಿತ ಭಾರತ 2047' ಕುರಿತು ಚರ್ಚೆ ನಡೆಸುವುದು ಮತ್ತು ಮುಂದಿನ ಐದು ವರ್ಷಗಳ ವಿವರವಾದ ಕ್ರಿಯಾ ಯೋಜನೆಯನ್ನು ಚರ್ಚಿಸಲಾಯಿತು. ಜನರನ್ನು ಭೇಟಿಯಾಗುವಾಗ, ವಿಶೇಷವಾಗಿ ಚುನಾವಣಾ ಸಮಯದಲ್ಲಿ ಜಾಗರೂಕರಾಗಿರಿ ಎಂದು ಪ್ರಧಾನಿ ಮೋದಿ ಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

PM Modi

ವಿವಾದ ಮಾಡಿಕೊಳ್ಳಬೇಡಿ

ಸಚಿವರನ್ನುದ್ದೇಶಿಸಿ ಸುಮಾರು ಒಂದು ಗಂಟೆಯ ಸುದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ ವಿವಾದಗಳನ್ನು ತಪ್ಪಿಸಿ ಮತ್ತು ಡೀಪ್‌ಫೇಕ್‌ಗಳ ಬಗ್ಗೆ ಜಾಗರೂಕರಾಗಿರಿ ಎಂದು ಹೇಳಿದ್ದಾರೆ. ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ದಯವಿಟ್ಟು ಎಚ್ಚರದಿಂದಿರಿ. ಇತ್ತೀಚಿನ ದಿನಗಳಲ್ಲಿ, ಧ್ವನಿ ಇತ್ಯಾದಿಗಳನ್ನು ಬದಲಾಯಿಸಬಹುದಾದ ಡೀಪ್‌ಫೇಕ್ ಪ್ರವೃತ್ತಿ ಇದೆ, ಈ ಬಗ್ಗೆ ಜಾಗರೂಕರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ. ಯೋಜನೆಗಳ ಬಗ್ಗೆ ಮಾತನಾಡಿ, ವಿವಾದಾತ್ಮಕ ಹೇಳಿಕೆಗಳನ್ನು ತಪ್ಪಿಸಿ ಎಂದರು.

ಜೂನ್‌ನಲ್ಲಿ ಮಂಡಿಸಲಿರುವ ಮುಂಬರುವ ಪೂರ್ಣ ಬಜೆಟ್‌ನಲ್ಲಿ 'ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ)'ದ ನೋಟವು ಗೋಚರಿಸಬೇಕು ಎಂದು ಪ್ರಧಾನಿ ಹೇಳಿದರು ಎಂದು ಮೂಲಗಳು ತಿಳಿಸಿವೆ. ಇಲಾಖಾ ಕಾರ್ಯಸೂಚಿಯಲ್ಲಿ ವಿಕಸಿತ ಭಾರತ ಸೆಮಿನಾರ್‌ಗಳನ್ನು ಸೇರಿಸಲು ಅವರು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಮೇ ತಿಂಗಳಿನಲ್ಲಿ ಚುನಾವಣೆ?

2024 ಚುನಾವಣಾ ವರ್ಷವಾಗಿರುವುದರಿಂದ, ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು. ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಬಜೆಟ್ ಅನ್ನು ಮಂಡಿಸಲಾಗುತ್ತದೆ. ಮೇ ವೇಳೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಮೇ ತಿಂಗಳಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ತೆಗೆದುಕೊಳ್ಳಬೇಕಾದ ತಕ್ಷಣದ ಕ್ರಮಗಳಿಗಾಗಿ 100 ದಿನಗಳ ಕಾರ್ಯಸೂಚಿಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ವಿವಿಧ ಹಂತಗಳಲ್ಲಿ 2,700ಕ್ಕೂ ಹೆಚ್ಚು ಸಭೆಗಳು, ಕಾರ್ಯಾಗಾರಗಳು ಮತ್ತು ವಿಚಾರ ಸಂಕಿರಣಗಳನ್ನು ನಡೆಸಲಾಗಿದೆ. 20 ಲಕ್ಷಕ್ಕೂ ಹೆಚ್ಚು ಯುವಕರ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿ ಅವರು ಭವಿಷ್ಯದ ತಂತ್ರಜ್ಞಾನಗಳಿಗೆ ₹ 1 ಲಕ್ಷ ಕೋಟಿ ಬಜೆಟ್‌ನ ಬಗ್ಗೆ ಮಾತನಾಡಿದರು ಮತ್ತು ಭಾರತವು ನಾವೀನ್ಯತೆಗೆ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಸಚಿವರು ಮತ್ತು ಅಧಿಕಾರಿಗಳು ಆಯಾ ಸಚಿವಾಲಯಗಳಲ್ಲಿನ ದಾಖಲೆಗಳನ್ನು ಪರಿಶೀಲಿಸಲು ಮತ್ತು ಹಿಂದಿನ ನಿರ್ಧಾರಗಳು ಹೇಗೆ ವಿಕಸನಗೊಂಡಿವೆ ಮತ್ತು ಕಳೆದ 25 ವರ್ಷಗಳಲ್ಲಿ ಆಲೋಚನೆಗಳು ಹೇಗೆ ಬದಲಾಗಿವೆ ಎಂಬುದನ್ನು ನೋಡುವಂತೆ ಕೇಳಿದರು.

ಸಭೆಯಲ್ಲಿ ಹಲವಾರು ಸಚಿವಾಲಯಗಳು ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಿದವು, ಇದು ಲೋಕಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸುವ ಮೊದಲು ಕೊನೆಯ ಸಭೆಯಾಗಬಹುದು ಎನ್ನಲಾಗಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ (ಎನ್‌ಡಿಎ) ಒಟ್ಟು 303 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+