RSS ಶತಮಾನೋತ್ಸವ: ವಿಶೇಷ ಲಾಂಛನದ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ: ಪ್ರಧಾನಿ ಮೋದಿ
ನವದೆಹಲಿ, ಅಕ್ಟೋಬರ್ 01: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಂಭ್ರಮದಲ್ಲಿದೆ. ಸಂಘಟನೆಯನ್ನು ಭಾರತದ ಪ್ರತಿಯೊಂದು ಅಂಶದ ಮೇಲೆ ಪ್ರಭಾವ ಬೀರಿದ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ "ಸದ್ಗುಣಶೀಲ ಅವತಾರ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದೇ ವೇಳೆ 100 ರೂಪಾಯಿಯ ನಾಣ್ಯವನ್ನು ಪ್ರಧಾನಿ ಬಿಡುಗಡೆ ಮಾಡಿದರು.
ನಾಗ್ಪುರದಲ್ಲಿ 1925ರಲ್ಲಿ ಡಾ. ಕೇಶವ್ ಬಲಿರಾಮ್ ಹೆಡ್ಗೆವಾರ್ ಸ್ಥಾಪಿಸಿದ ಆರ್ಎಸ್ಎಸ್, ಸಾಂಸ್ಕೃತಿಕ ಅರಿವು, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಉತ್ತೇಜಿಸುವ ಸ್ವಯಂಸೇವಕ ಆಧಾರಿತ ಸಂಘಟನೆಯಾಗಿ ಆರಂಭಗೊಂಡಿತು. ಕಳೆದ ಒಂದು ಶತಮಾನದಲ್ಲಿ ಇದು ಭಾರತದ ಅತ್ಯಂತ ಪ್ರಭಾವಶಾಲಿ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಗಳಲ್ಲಿ ಒಂದಾಗಿ ಬೆಳೆದಿದ್ದು, 100 ವರ್ಷ ಪೂರೈಸಿದೆ.

ಇಂದು ಬುಧವಾರ (ಅಕ್ಟೋಬರ್ 1) ರಾಷ್ಟ್ರ ರಾಜಧಾನಿ ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಮುಖ್ಯ ಪಾಲ್ಗೊಂಡರು. ಈ ಸಂದರ್ಭದಲ್ಲಿ ವಿಶೇಷ ಅಂಚೆ ಚೀಟಿ ಮತ್ತು ₹100 ನಾಣ್ಯವನ್ನು ಬಿಡುಗಡೆ ಮಾಡಲಾಯಿತು. ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವಿಶೇಷ ಲಾಂಛನ ಹೊಂದಿರುವ ನಾಣ್ಯ ಬಿಡುಗಡೆ ಆಗಿದೆ.
ಮಂಗಳವಾರ 93ನೇ ವಯಸ್ಸಿನಲ್ಲಿ ನಿಧನರಾದ ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ಹಾಗೂ ಸಂಸ್ಥಾಪಕ ಹೆಡ್ಗೆವಾರ್ ಅವರಿಗೆ ಗೌರವ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಮಾತು ಆರಂಭಿಸಿದರು. ಮೋದಿ ಅವರು, ವಿಜಯದಶಮಿಯು ಕೆಟ್ಟದಿನ ಮೇಲೆ ಒಳ್ಳೆಯತನ, ಅನ್ಯಾಯದ ಮೇಲೆ ನ್ಯಾಯ, ಸುಳ್ಳಿನ ಮೇಲೆ ಸತ್ಯ ಮತ್ತು ಕತ್ತಲೆಯ ಮೇಲೆ ಬೆಳಕಿನ ಜಯದ ಘೋಷಣೆ ಆಗಿದೆ. ಆರ್ಎಸ್ಎಸ್ ಸ್ಥಾಪನೆ 100 ವರ್ಷಗಳ ಹಿಂದೆ ಕಾಕತಾಳೀಯವಲ್ಲ. ಸಂಘವು ನಮ್ಮ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸದ್ಗುಣ ಅವತಾರವಾಗಿದೆ ಎಂದು ಹೇಳಿದರು.
#100YearsOfRSS
— Dr Sudhakar K (@DrSudhakar_) October 1, 2025
At the grand centenary celebrations of the RSS in Delhi, PM Shri @narendramodi ji unveiled two historic tributes:
₹100 Commemorative Coin - National Emblem on one side, and on the reverse, Bharat Mata seated on a lion in Varad Mudra, with swayamsevaks offering… pic.twitter.com/SCA1Ij1rU0
ದೇಶದಲ್ಲಿ ಸ್ವತಂತ್ರ ನಮತರ ಮೊದಲ ಬಾರಿಗೆ ಬಿಡುಗಡೆ ಮಾಡಲಾದ ನಾಣ್ಯವು ಭಾರತಮಾತೆಯ ಚಿತ್ರ, ಸಿಂಹ ಹಾಗೂ ಸ್ವಯಂಸೇವಕರ ನಮಸ್ಕಾರವನ್ನು ಒಳಗೊಂಡಿತ್ತು. 1963ರ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಭಾಗವಹಿಸುವುದನ್ನು ಬಿಡುಗಡೆಯಾದ ಅಂಚೆ ಚೀಟಿ ಪ್ರದರ್ಶಿಸುತ್ತದೆ
ನದಿ ತೀರಗಳಲ್ಲಿ ಸಮುದಾಯಗಳು ಬೆಳೆಯುವಂತೆ, ಸಂಘದ ಪ್ರವಾಹದ ಮೂಲಕ ಅನೇಕ ಜೀವಗಳು ಬೆಳೆದಿವೆ. ಆರ್ಎಸ್ಎಸ್ ದೇಶದ ಪ್ರತಿಯೊಂದು ಅಂಶ, ಗೌರವವನ್ನು ಸ್ಪರ್ಶಿಸುತ್ತದೆ. ಅನೇಕ ಉಪಸಂಘಟನೆಗಳಿದ್ದರೂ ಅವೆಲ್ಲವೂ ಒಂದೇ ಧ್ಯೇಯ ಹೊಂದಿವೆ "ರಾಷ್ಟ್ರ ಮೊದಲು' ಎಂದು ಪ್ರಧಾನಿ ಮೋದಿ ತಿಳಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications