ರೋಜ್ಗಾರ್ ಮೇಳದಲ್ಲಿ 71,000 ಆಫರ್ ಲೆಟರ್ ನೀಡಿದ ಪಿಎಂ ಮೋದಿ
ನವದೆಹಲಿ, ನವೆಂಬರ್ 22: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ನೇಮಕಗೊಂಡ ಸುಮಾರು 71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸ್ತಾಂತರಿಸಿದರು.
ಬಳಿಕ ಪ್ರಧಾನಿ ಮೋದಿ ಅವರು ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಶಿಕ್ಷಕರು, ಉಪನ್ಯಾಸಕರು, ದಾದಿಯರು, ನರ್ಸಿಂಗ್ ಅಧಿಕಾರಿಗಳು, ವೈದ್ಯರು, ಔಷಧಿಗಾರರು, ರೇಡಿಯೋಗ್ರಾಫರ್ಗಳು ಮತ್ತು ಇತರ ತಾಂತ್ರಿಕ ಮತ್ತು ಅರೆವೈದ್ಯಕೀಯ ಹುದ್ದೆಗಳಂತಹ ಹಲವಾರು ವಿಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಯಿತು.
ಇದು ಅಕ್ಟೋಬರ್ನಲ್ಲಿ ಸರ್ಕಾರದಿಂದ ನೀಡಲಾದ 75,000 ನೇಮಕಾತಿ ಪತ್ರಗಳಿಗೆ ಹೆಚ್ಚುವರಿ ನೇಮಕ ಪ್ರತಗಳಾಗಿದೆ. ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಗೃಹ ವ್ಯವಹಾರಗಳ ಸಚಿವಾಲಯವು ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳ ಒಂದು ಮಹತ್ವದ ಹೆಜ್ಜೆಯಾಗಿದೆ.

ಪ್ರಧಾನ ಮಂತ್ರಿಯವರು ಕರ್ಮಯೋಗಿ ಪ್ರಾರಂಭ್ ಮಾಡ್ಯೂಲ್ ಅನ್ನು ಪ್ರಾರಂಭಿಸಿದರು. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಿಗಾಗಿ ಆನ್ಲೈನ್ ಓರಿಯಂಟೇಶನ್ ಕೋರ್ಸ್ ಆಗಿದೆ. ಪ್ರಾರಂಭ್ ಮಾಡ್ಯೂಲ್ ಸರ್ಕಾರಿ ಸೇವಕರಿಗೆ ನೀತಿ ಸಂಹಿತೆ, ಕಾರ್ಯಸ್ಥಳದ ನೈತಿಕತೆ ಮತ್ತು ಸಮಗ್ರತೆ, ಮಾನವ ಸಂಪನ್ಮೂಲ ನೀತಿಗಳು ಮತ್ತು ಇತರ ಪ್ರಯೋಜನಗಳು ಮತ್ತು ಭತ್ಯೆಗಳನ್ನು ಒಳಗೊಂಡಿದೆ. ಅದು ನೀತಿಗಳಿಗೆ ಒಗ್ಗಿಕೊಳ್ಳಲು ಮತ್ತು ಹೊಸ ಉದ್ಯೋಗಗಳಿಗೆ ಸರಾಗವಾಗಿ ಪರಿವರ್ತನೆಗೊಳ್ಳಲು ಸಹಾಯ ಮಾಡುತ್ತದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ, ದೇಶಾದ್ಯಂತ 45 ಸ್ಥಳಗಳಲ್ಲಿ ನೇಮಕಾತಿ ಪತ್ರಗಳ ಭೌತಿಕ ಪ್ರತಿಗಳನ್ನು ಹಸ್ತಾಂತರಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯ ಪ್ರಕಾರ ಅವರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಚಾಲನೆ ಒಂದು ಹೆಜ್ಜೆಯಾಗಿದೆ ಮತ್ತು ಇದು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅವಕಾಶಗಳನ್ನು ನೀಡುವಲ್ಲಿ ನೇರವಾಗಿ ವೇಗವರ್ಧಕವಾಗಿರುತ್ತದೆ ಎಂದು ಭಾವಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications