ಭಗವದ್ಗೀತೆಗೆ ಬೇರೆಯದೇ ಅರ್ಥ ನೀಡಿದ್ದಾರೆ ಮೋದಿ: ರಾಹುಲ್ ಲೇವಡಿ!
Recommended Video
ಪೊಂಟಾ ಸಾಹಿಬ್(ಹಿಮಾಚಲ ಪ್ರದೇಶ), ನವೆಂಬರ್ 06: ಹಿಂದುಗಳ ಪವಿತ್ರ ಗ್ರಂಥ ಭಗವದ್ಗೀತೆಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಆದ ಅರ್ಥ ನೀಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮೋದಿಯವರಿಗೆ ಜನರ ಭಾವನೆ ಅರ್ಥವಾಗ್ತಿಲ್ಲ : ರಾಹುಲ್ ವಾಗ್ದಾಳಿ
ಒಂದಿಲ್ಲೊಂದು ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕಾಲೆಳೆಯುತ್ತಲೇ ಇರುವ ರಾಹುಲ್ ಗಾಂಧಿ ಹಿಮಾಚಲ ಪ್ರದೇಶದಲ್ಲಿ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು.
ಭಗವದ್ಗೀತೆ, ಕರ್ಮವನ್ನು ನೀನು ಮಾಡು, ಅದರ ಫಲಾಫಲ ದೇವರಿಗೆ ಬಿಟ್ಟಿದ್ದು ಎನ್ನುತ್ತದೆ. ಆದರೆ ಮೋದಿಯವರು ನೀಡುವ ವ್ಯಾಖ್ಯಾನ ಬೇರೆಯದೇ ಇದೆ. ಬೇರೆಯವರ ಶ್ರಮದ ಫಲವನ್ನು ನೀನು ತಿನ್ನು, ಕೆಲಸ ಮಾಡುವ ಬಗ್ಗೆ ಯಾವುದೇ ಯೋಚನೆ ಮಾಡಬೇಡ ಎಂಬುದು ಮೋದಿಯವರು ನೀಡುವ ಅರ್ಥ ಎಂದು ಕಾಂಗ್ರೆಸ್ ಯುವರಾಜ ರಾಹುಲ್, ಮೋದಿಯವರನ್ನು ಛೇಡಿಸಿದ್ದಾರೆ.
ಇದೇ ಡಿಸೆಂಬರ್ ನಲ್ಲಿ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ರಾಹುಲ್ ಗಾಂಧಿ, ಅಪನಗದೀಕರಣ ಮತ್ತು ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದಂತೆಯೂ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.