Vande Mataram 150: ಬ್ರಿಟೀಷರ ನಿದ್ದೆಗೆಡಿಸಿದ್ದ ವಂದೇ ಮಾತರಂ ರಾಷ್ಟ್ರಕ್ಕೆ ಸ್ಪೂರ್ತಿ: ಪ್ರಧಾನಿ ಮೋದಿ
ನವದೆಹಲಿ, ಡಿಸೆಂಬರ್ 08: ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ್ದ 'ವಂದೇ ಮಾತರಂ' ಗೀತೆಯನ್ನು ಮಹಾತ್ಮ ಗಾಂಧೀಜಿ ಅವರು ತಮ್ಮ ಪತ್ರಿಕೆಯಲ್ಲಿ ಹೊಗಳಿದ್ದರು. ಅದರೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮುಸ್ಲಿಂ ಲೀಗ್ ವಿರುದ್ಧ ರಾಷ್ಟ್ರೀಯ ಗೀತೆಯನ್ನು ಸಮರ್ಥಿಸಿಕೊಳ್ಳಲಿಲ್ಲ. ದೇಶದ ಸ್ವಾತಂತ್ರ್ಯದ ಬಲಿದಾನ ಮಂತ್ರವಾಗಿದ್ದ ವಂದೇ ಮಾತರಂ ಅನ್ನು ಬುದ್ಧಿವಂತಿಕೆಯಿಂದ ಬಳಸಿಕೊಂಡರೆ ಅದು ಭವಿಷ್ಯಕ್ಕೆ, ಯುವ ಪೀಳಿಗೆಗೆ ಸ್ಪೂರ್ತಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಸಭೆಯಲ್ಲಿ ತಿಳಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನ 2025 ದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಭಾಷಣದಲ್ಲಿ ವಂದೇ ಭಾರತ್ ಹಾಡಿನ 150 ನೇ ವಾರ್ಷಿಕೋತ್ಸವ ಬಗ್ಗೆ ಮಾತನಾಡಿದರು. ಆ ಚರ್ಚೆಯ ಬಗ್ಗೆ ತಮ್ಮ ಭಾಷಣದಲ್ಲಿ ಶ್ಲಾಘಿಸಿದರು. ಈ ಚರ್ಚೆಯು ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ಸೈದ್ಧಾಂತಿಕ ಚರ್ಚೆಗೆ ಇಂಧನ ತುಂಬುವ ಸಾಧ್ಯತೆಯಿದೆ. ವಂದೇ ಮಾತರಂ ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಹೆಚ್ಚು ಹಾಡಿದ ಹಾಡುಗಳಲ್ಲಿ ಒಂದಾಗಿದೆ.

ಕೇಸರಿ ಪಕ್ಷದ ನಾಯಕರು ಈ ಗೀತೆಯ ಸಾಂಸ್ಕೃತಿಕ ಭಾಗವನ್ನು ತೆಗೆದುಹಾಕಿದ್ದಾರೆ ಎಂದು ವಿಪಕ್ಷದವರು ಆರೋಪಿಸಿದರು. ಅಲ್ಲದೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸುವಂತೆ ಒತ್ತಾಯಿಸಿದರು. ಆದರೆ ಕೇಂದ್ರ ಸರ್ಕಾರ, ಕೇಸರಿ ಪಡೆ ಮೊದಲು ಮೊದಲು ವಂದೇ ಮಾತರಂ ಬಗ್ಗೆ ಚರ್ಚೆ ಆಗಲಿದೆ ಎಂದು ಆಗ್ರಹಿಸಿದರು. ಇದೇ ವೇಳೆ ತಮ್ಮ ಭಾಷಣದುದ್ದಕ್ಕೂ ವಂದೇ ಮಾತರಂ ಕುರಿತು ಸಾಕಷ್ಟು ವಿಷಯಗಳನ್ನು ಪ್ರಧಾನಿ ಮೋದಿ ಮಾತನಾಡಿದ್ದು ಗಮನ ಸೆಳೆಯಿತು.
ರಾಷ್ಟ್ರಕ್ಕೆ ಸ್ಫೂರ್ತಿ ನೀಡಿದ ಗೀತೆ: ಪ್ರಧಾನಿ
ಪ್ರಧಾನಿ ಮೋದಿಯವರು, ಮಹಾತ್ಮ ಗಾಂಧಿ ಸಾವಿರಾರು ವರ್ಷಗಳಿಂದ ಭಾರತದ ರಕ್ತಪ್ರವಾಹದಲ್ಲಿ ವಾಸಿಸುತ್ತಿದ್ದ ಚಿಂತನೆಯನ್ನು ಪುನರುಜ್ಜೀವನಗೊಳಿಸಿದರು. ಅವರು ಸಹ ತಮ್ಮ ಪತ್ರಿಕೆಯಲ್ಲಿ ವಂದೇ ಮಾತರಂ ಅನ್ನು ಶ್ಲಾಘಿಸಿದ್ದರು. ಆದರೆ ಈ ಕೆಲಸ ಜವಾಹರ್ ಲಾಲ್ ನೆಹರು ಅವರು ಮಾಡಲಿಲ್ಲ ಎಂದರು.
ಸ್ವಾತಂತ್ರ್ಯದ ನಂತರ ವಂದೇ ಮಾತರಂ ಗೀತೆಗೆ ಯಾರು ದ್ರೋಹ ಬಗೆದರು? ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಪ್ರಶ್ನಿಸಿದ್ದಾರೆ. ಕೆಲವರು ರಾಷ್ಟ್ರೀಯ ಗೀತೆಗೆ ದ್ರೋಹ ಮಾಡಲು ಪ್ರಯತ್ನಿಸಿದ್ದಾರೆ. ಈ ಗೀತೆಗೆ ಮುಸ್ಲಿಂ ಲೀಗ್ ನ ವಿರೋಧವಿತ್ತು. ರಾಷ್ಟ್ರವನ್ನು ಒಗ್ಗೂಡಿಸಿದ್ದ ಈ ವಂದೇ ಮಾತರಂ ಹಾಡು ಮಹತ್ವದ ಪಾತ್ರ ವಹಿಸಿತ್ತು. ಅಂದಿನಿಂದ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಅವರು ತಿಳಿಸಿದರು.
ಇಲ್ಲಿ ಯಾವುದೇ ನಾಯಕತ್ವ ಮತ್ತು ವಿರೋಧವಿಲ್ಲ. ವಂದೇ ಮಾತರಂಗೆ 150 ವರ್ಷವಾಗಿದೆ. ಅದರ ಋಣವನ್ನು ಸಾಮೂಹಿಕವಾಗಿ ಶ್ಲಾಘಿಸಲು, ಸ್ವೀಕರಿಸಲು ನಾವು ಇಲ್ಲಿದ್ದೇವೆ. ಇದೊಂದು ಪವಿತ್ರ ಸಂದರ್ಭಕ್ಕಾಗಿಯೇ ನಾವು ಇಲ್ಲಿ ಸೇರಿದ್ದೇವೆ ಎಂದು ಬಣ್ಣಿಸಿದರು.
ದೇಶಾಭಿವೃದ್ಧಿಗೆ ಸಂಕಲ್ಪಕ್ಕೆ ಪ್ರಧಾನಿ ಮೋದಿ ಕರೆ
ಸ್ವಾತಂತ್ರ್ಯದ ಹೊತ್ತಿನಲ್ಲಿ ಉತ್ತರದಿಂದ ದಕ್ಷಿಣಕ್ಕೆ ಮತ್ತು ಪೂರ್ವದಿಂದ ಪಶ್ಚಿಮಕ್ಕೆ ರಾಷ್ಟ್ರ ಒಂದುಗೂಡಿಸುವ ಕೆಲಸ ಮಾಡಿತು. ಮತ್ತೆ ಎಲ್ಲರೂ ಒಟ್ಟಾಗಿ ಸಾಗುವ ಸಮಯ ಬಂದಿದೆ. ಈ ಹಾಡು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಮಗೆ ಸ್ಫೂರ್ತಿ ಮತ್ತು ಶಕ್ತಿಯನ್ನು ನೀಡಬೇಕು. 2047 ರ ವೇಳೆಗೆ ನಮ್ಮ ರಾಷ್ಟ್ರವನ್ನು ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದುವಂತೆ ಮಾಡುವ ಸಂಕಲ್ಪ ಮಾಡಬೇಕು ಎಂದು ಅವರು ಕರೆ ನೀಡಿದರು.
ಅಂದು ಸ್ವಾತಂತ್ರ್ಯ ಹೋರಾಟಕ್ಕೆ ಬಲ ತುಂಬಿದ್ದ 'ವಂದೇ ಮಾತರಂ' ಗೀತೆಯನ್ನು ಬ್ರಿಟಿಷರು ನಿಷೇಧಿಸಲು ಪ್ರಯತ್ನಿಸಿದರು. ಅಂತಹ ಶಕ್ತಿ ಈ ಗೀತೆಯಲ್ಲಿ ಇದ್ದಿದ್ದರಿಂದಲೇ ಬ್ರಿಟಿಷರು ಭಯಭೀತರಾಗಿದ್ದರು. ಅದು ಬ್ರಿಟಿಷರಿಗೆ ನಿದ್ದೆಯಿಲ್ಲದಂತೆ ಮಾಡಿತ್ತು. ಗೀತೆ ಹಾಡಿದ್ದಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಕಠಿಣ ಕ್ರಮ ಸಹ ಕೈಗೊಂಡರು.
ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ
ಈ ಹಾಡು ಸ್ವಾತಂತ್ರ್ಯ ಹೋರಾಟಗಾರರಿಗೆ ಶಕ್ತಿ ನೀಡಿತು. ಇದರಿಂದ ಪ್ರೇರಣೆ ಪಡೆದು ಬ್ರಿಟಿಷರ ವಿರುದ್ಧ ಒಟ್ಟಾಗಿ ಹೋರಾಟಕ್ಕೆ ಧುಮುಕಿದ್ದರು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು. ಇಂತಹ ಗೀತೆಗೆ 50 ವರ್ಷ ತುಂಬಿದಾಗ ಭಾರತವು ಗುಲಾಮಗಿರಿಯ ಸಂಕೋಲೆಯಲ್ಲಿತ್ತು. ದೇಶವು ರಾಷ್ಟ್ರೀಯ ಗೀತೆಯ 100 ವರ್ಷಗಳನ್ನು ಆಚರಿಸಿದ ಹೊತ್ತಿನಲ್ಲಿ ದೇಶವು ಕಾಂಗ್ರೆಸ್ ಸರ್ಕಾರದ ಹೇರಿದ್ದ ತುರ್ತು ಪರಿಸ್ಥಿತಿ ಕಾಣುವಂತಾಯಿತು ಎಂದು ಅವರು ಕಾಂಗ್ರೆಸ್ ವಿರುದ್ಧ ಕುಟುಕಿದರು. ಈ ಗೀತೆಯ ಬಗ್ಗೆ ಎಲ್ಲರು ಹೆಮ್ಮ ಪಡೆಬೇಕು ಎಂದು ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications