ವಿಜ್ಞಾನ, ತಂತ್ರಜ್ಞಾನ ಬಡತನ ತೊಲಗಿಸಬೇಕು: ಮೋದಿ
ಮೈಸೂರು, ಜನವರಿ, 03: ಸಾಂಸ್ಕೃತಿಕ ನಗರಿ ಮೈಸೂರಿನ ವಿಜ್ಞಾನ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ ಚಾಲನೆ ನೀಡಿದ್ದಾರೆ. 'ದಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ 'ನ 103 ನೇ ಸಮಾವೇಶ ಮೈಸೂರು ವಿಶ್ವವಿದ್ಯಾನಿಲಯದ ಆತಿಥ್ಯದಲ್ಲಿ ಜನವರಿ 7ರವೆಗೆ ನಡೆಯಲಿದೆ.
ಭಾನುವಾರ ಬೆಳಗ್ಗೆ ಆರಂಭವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹರ್ಷವರ್ಧನ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಜ್ಞಾನಿ ಸಿ ಎನ್ ಆರ್ ರಾವ್ , ರಾಜ್ಯಪಾಲ ವಜೂಭಾಯಿ ವಾಲಾ, ಮೈಸೂರು ವಿವಿ ವೈಸ್ ಛಾನ್ಸೆಲರ್ ರಂಗಪ್ಪ ಪಾಲ್ಗೊಂಡಿದ್ದಾರೆ.[ದೇಶದ ಅತಿದೊಡ್ಡ ವಿಜ್ಞಾನ ಹಬ್ಬಕ್ಕೆ ಮೈಸೂರು ಸಿದ್ಧ]

ನೊಬೆಲ್ ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಮಾರಕ ರೋಗಗಳ ಪರಿಹಾರೋಪಾಯದ ಬಗ್ಗೆಯೂ ಚರ್ಚೆ ನಡೆಯಲಿದೆ. 34 ವರ್ಷದ ನಂತರ ಮೈಸೂರು ಇಂಥದ್ದೊಂದು ಐತಿಹಾಸಿಕ ಸಮಾವೇಶಕ್ಕೆ ಸಾಕ್ಷಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಭಾಷಣದ ಹೈಲೈಟ್ಸ್...
* ಈ ಸಂದರ್ಭದಲ್ಲಿ ಡಾ ರಾಧಾಕೃಷ್ಣನ್, ವಿಜ್ಞಾನಿ ಸಿಎನ್ ಆರ್ ರಾವ್ ಅವರನ್ನು ನೆನಪಿಸಿಕೊಳ್ಳಬೇಕು.
* ಅಬ್ದುಲ್ ಕಲಾಂ ರಂಥ ನಾಯಕರಿಂದ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ.
* ಭಾರತದ ಆರ್ಥಿಕ ಅಭಿವೃದ್ಧಿಗೆ ವಿಜ್ಞಾನದ ಕೊಡುಗೆ ಅತಿ ಹೆಚ್ಚು
* ಹೊಸ ಆವಿಷ್ಕಾರಗಳಿಂದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಳ್ಳಲು ಸಾಧ್ಯವಿದೆ.
* 2030ರ ವೇಳೆಗೆ ಬಡತನವನ್ನು ದೇಶದಿಂದ ಕಿತ್ತು ಹಾಕಬೇಕಿದೆ.
* ನಮ್ಮ ಇತಿಹಾಸವನ್ನು ನಾವೇ ಬದಲಾವಣೆ ಮಾಡಿಕೊಳ್ಳಬೇಕಿದೆ.
* ಶಿಕ್ಷಣದಲ್ಲಿ ಇನ್ನಷ್ಟು ಸರಳೀಕರಣ ಆಗಬೇಕಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ಸರ್ಕಾರಗಳ ಗುರಿಯಾಗಬೇಕು.
* ಮುಂದಿನ ಹತ್ತು ವರ್ಷದಲ್ಲಿ ಇಂಧನ ಉತ್ಪನ್ನಗಳ ಮೇಲೆ ಸ್ವಾಯತ್ತತೆ ಸಾಧಿಸಬೇಕಿದೆ..
* ಬಡವರ ಅಭಿವೃದ್ಧಿಗೆ ವಿಜ್ಞಾನ ನೆರವಾಗವಬೇಕು.
ಸಂಪೂರ್ಣ ಕಾರ್ಯಕ್ರಮವನ್ನು ಇಲ್ಲಿ ವೀಕ್ಷಣೆ ಮಾಡಬಹುದು
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications